ಸೋಲಿಗೆ ಬ್ಯಾಟಿಂಗ್ ವಿಭಾಗವೇ ಕಾರಣ
'ಬ್ಯಾಟಿಂಗ್ ಆರಂಭಿಸುವ ಮುನ್ನ ತಂಡಕ್ಕೆ ಆಸರೆಯಾಗಿ ನಿಲ್ಲಬೇಕಾದ ಎಲ್ಲಾ ಬ್ಯಾಟ್ಸ್ಮನ್ಗಳ ಜತೆಗೂ ಚರ್ಚೆ ನಡೆಸಿದ್ದೆ. ಆದರೆ ಬೆಂಗಳೂರು ತಂಡದ ಬೌಲರ್ಗಳು ನಮ್ಮ ತಂಡದ ಮೊದಲೆರಡು ವಿಕೆಟ್ಗಳು ಬಿದ್ದ ಕೂಡಲೇ ನಮ್ಮ ತಂಡದ ಮೇಲೆ ಒತ್ತಡ ಹೇರಲು ಆರಂಭಿಸಿದರು. ಇಂತಹ ಸಂದರ್ಭದಲ್ಲಿ ನಮ್ಮ ತಂಡದ ಆಟಗಾರರು ಪುಟಿದೇಳಬೇಕಿತ್ತು, ಆದರೆ ನಮ್ಮ ತಂಡದ ಯಾವುದೇ ಬ್ಯಾಟ್ಸ್ಮನ್ ನೆಲಕಚ್ಚಿ ನಿಲ್ಲಲು ಆಗಲೇ ಇಲ್ಲ. ಈ ಹಿಂದಿನ ಟೂರ್ನಿಗಳಲ್ಲಿ ಇಂತಹ ಸಂಕಷ್ಟಕ್ಕೆ ಸಿಲುಕಿದಾಗ ನಮ್ಮ ತಂಡದ ಬ್ಯಾಟ್ಸ್ಮನ್ಗಳು ದಿಟ್ಟ ಪ್ರದರ್ಶನವನ್ನು ನೀಡುವುದರ ಮೂಲಕ ಪುಟಿದೇಳುತ್ತಿದ್ದರು, ಆದರೆ ಈ ಬಾರಿಯ ಟೂರ್ನಿಯಲ್ಲಿ ಅದು ನಮ್ಮಿಂದ ಸಾಧ್ಯವಾಗುತ್ತಿಲ್ಲ' ಎಂದು ಹೇಳಿಕೆಯನ್ನು ನೀಡುವುದರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಹೀನಾಯ ಸೋಲಿಗೆ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟ್ಸ್ಮನ್ಗಳೇ ಕಾರಣ ಎಂದು ರೋಹಿತ್ ಶರ್ಮ ಹೇಳಿದ್ದಾರೆ.
ಬೌಲಿಂಗ್ ವಿಭಾಗದ ಬಗ್ಗೆಯೂ ರೋಹಿತ್ ಶರ್ಮಾ ಮಾತು
ಇನ್ನು ತಮ್ಮ ತಂಡದ ಬೌಲಿಂಗ್ ವಿಭಾಗದ ಬಗ್ಗೆಯೂ ಮಾತನಾಡಿದ ರೋಹಿತ್ ಶರ್ಮಾ 'ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಹಂತದಲ್ಲಿ 180ಕ್ಕೂ ಹೆಚ್ಚು ರನ್ ಗಳಿಸುವಂತಹ ರೀತಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿತ್ತು. ಆದರೆ ನಮ್ಮ ತಂಡದ ಬೌಲರ್ಗಳು ಅತ್ಯದ್ಭುತವಾಗಿ ಕೊನೆಯ ಹಂತದಲ್ಲಿ ಪ್ರದರ್ಶನ ನೀಡಿದ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 165 ರನ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದೆವು' ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಯುಎಇ ಚರಣದಲ್ಲಿ ಮುಂಬೈ ಹ್ಯಾಟ್ರಿಕ್ ಸೋಲು
ಭಾರತ ನೆಲದಲ್ಲಿ ಆರಂಭವಾಗಿ ಸ್ಥಗಿತಗೊಂಡು ಯುಎಇಗೆ ಸ್ಥಳಾಂತರಿಸಲ್ಪಟ್ಟು ಮುಂದುವರಿಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಹ್ಯಾಟ್ರಿಕ್ ಸೋಲನ್ನು ಕಂಡಿದೆ. ಯುಎಇ ಚರಣದ ತನ್ನ ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಡಿದ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡ 20 ರನ್ಗಳ ಸೋಲನ್ನು ಕಂಡಿತ್ತು, ನಂತರ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿಯೂ ಮುಂಬೈ ಇಂಡಿಯನ್ಸ್ ತಂಡ ಸೋಲುಂಡಿತು ಮತ್ತು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧವೂ ಮುಂಬೈ ಇಂಡಿಯನ್ಸ್ ಹೀನಾಯವಾಗಿ ಸೋಲನ್ನು ಕಾಣುವುದರ ಮೂಲಕ ಸತತವಾಗಿ 3 ಪಂದ್ಯಗಳಲ್ಲಿ ಸೋಲುಂಡಿದೆ.