ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕಳೆದ ಬಾರಿ ಇದ್ದ ಆ ತಪ್ಪುಗಳು ಈ ಬಾರಿ ಇಲ್ಲ ; ಆರ್‌ಸಿಬಿ ಬ್ಯಾಟಿಂಗ್ ಕೋಚ್

IPL 2021 : Sanjay Bangar explains what has made the difference for the team this season

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿದೆ. ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಟೂರ್ನಿಯ ಮೊದಲ 4 ಪಂದ್ಯಗಳಲ್ಲಿ ಸತತವಾಗಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸದ್ಯ 6 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋತು ಉತ್ತಮ ಸ್ಥಾನದಲ್ಲಿದೆ.

ಹೀಗೆ ಉತ್ತಮ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕುರಿತು ತಂಡದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗರ್ ಅವರು ಮಾತನಾಡಿದ್ದಾರೆ. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತೋರುತ್ತಿರುವ ಪ್ರದರ್ಶನದ ಕುರಿತು ಮಾತನಾಡಿದ ಸಂಜಯ್ ಬಂಗರ್ ಕಳೆದ ಬಾರಿಯ ಐಪಿಎಲ್ ಟೂರ್ನಿಗೂ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಟೂರ್ನಿಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಆಗಿರುವ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.

ಕಳೆದ ಬಾರಿಯ ಐಪಿಎಲ್ ಟೂರ್ನಿಯ ಬಹುತೇಕ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಅವರ ಮೇಲೆ ಅವಲಂಬಿತವಾಗಿತ್ತು. ಈ ಇಬ್ಬರಲ್ಲಿ ಒಬ್ಬರು ಕಡ್ಡಾಯವಾಗಿ ಉತ್ತಮ ಪ್ರದರ್ಶನ ನೀಡಲೇಬೇಕಾದಂತಹ ಪರಿಸ್ಥಿತಿ ಇತ್ತು, ಒಂದುವೇಳೆ ಇಬ್ಬರೂ ಒಂದೇ ಪಂದ್ಯದಲ್ಲಿ ಸರಿಯಾದ ಪ್ರದರ್ಶನ ನೀಡದೆ ಔಟ್ ಆದಾಗ ಉತ್ತಮ ಬ್ಯಾಟಿಂಗ್ ಮಾಡಿ ತಂಡವನ್ನು ಸ್ಪರ್ಧಾತ್ಮಕ ಮೊತ್ತದತ್ತ ಕೊಂಡೊಯ್ಯುವ ಬೇರೆ ಯಾವ ಆಟಗಾರರ ಆಯ್ಕೆಯೂ ನಮ್ಮಲ್ಲಿ ಇರಲಿಲ್ಲ, ಆದರೆ ಈಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ, ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಹಾಗೂ ಮ್ಯಾಕ್ಸ್‌ವೆಲ್‌ರಂತಹ ಉತ್ತಮ ಬ್ಯಾಟ್ಸ್‌ಮನ್‌ಗಳ ಆಯ್ಕೆ ತಂಡದಲ್ಲಿದ್ದು ಒಬ್ಬರು ವಿಫಲರಾದರೆ ಮತ್ತೊಬ್ಬರು ಸ್ಫೋಟಕ ಆಟ ಆಡುವ ಮೂಲಕ ತಂಡಕ್ಕೆ ಆಸರೆಯಾಗುತ್ತಿದ್ದಾರೆ ಎಂದು ಸಂಜಯ್ ಬಂಗರ್ ಹರ್ಷ ವ್ಯಕ್ತಪಡಿಸಿದರು.

ಅಷ್ಟೇ ಯಾಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಜತ್ ಪಟಿದಾರ್ ಕೂಡ ಉತ್ತಮ ಆಟವಾಡುವ ಮೂಲಕ ತಂಡಕ್ಕೆ ಆಸರೆಯಾದರು ಎಂದು ಸಂಜಯ್ ತಿಳಿಸಿದರು. ಕಳೆದ ಆವೃತ್ತಿಗಳಲ್ಲಿ ತಂಡಕ್ಕೆ ಉತ್ತಮ ಆಟದ ಅಗತ್ಯತೆ ಇದ್ದಾಗ ಆಡುವಂತಹ ಬ್ಯಾಟ್ಸ್‌ಮನ್‌ಗಳು ಇರಲಿಲ್ಲ ಆದರೆ ಈ ಬಾರಿ ಆ ತಪ್ಪನ್ನು ತಂಡ ತಿದ್ದಿಕೊಂಡಿದ್ದು ಅಗತ್ಯತೆ ಬಿದ್ದಾಗ ಉತ್ತಮ ಪ್ರದರ್ಶನ ನೀಡುವ ಬ್ಯಾಟ್ಸ್‌ಮನ್‌ಗಳನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಮತ್ತು ತಂಡದಲ್ಲಿದ್ದ ಆಟಗಾರರ ಬ್ಯಾಟಿಂಗ್‌ ಸಾಕಷ್ಟು ಸುಧಾರಿಸಿದೆ ಎಂದು ಸಂಜಯ್ ಬಂಗರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ವಿಭಾಗದಲ್ಲಾಗಿರುವ ಬದಲಾವಣೆಯನ್ನು ಬಿಚ್ಚಿಟ್ಟರು.

Story first published: Friday, April 30, 2021, 17:38 [IST]
Other articles published on Apr 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X