ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದಲೂ ಅಧಿಕೃತ ಪ್ರಕಟಣೆ
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಪಂದ್ಯ ಮುಂದೂಡಿಕೆ ಆಗಿರುವುದರ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಟ್ವಿಟ್ಟರ್ ಮೂಲಕ ಅಧಿಕೃತ ಹೇಳಿಕೆ ನೀಡಿದೆ. ಹಾಗೂ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಬೆಂಗಳೂರು ತಂಡ ಆಶಿಸಿದೆ.
ಶೀಘ್ರದಲ್ಲೇ ಹೆಚ್ಚಿನ ಮಾಹಿತಿ
ಕೊಲ್ಕತ್ತಾ ಮತ್ತು ಬೆಂಗಳೂರು ನಡುವಿನ ಪಂದ್ಯ ಮುಂದೂಡಲಾಗಿದ್ದು ಆದಷ್ಟು ಬೇಗ ಈ ಕುರಿತು ಹೆಚ್ಚಿನ ಮಾಹಿತಿ ಹೊರಬೀಳಲಿದೆ ಎಂದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದವರಿಗೂ ತಗುಲಿದ ಸೋಂಕು
ಕೆಕೆಆರ್ ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಶಿ ವಿಶ್ವನಾಥನ್, ತಂಡದ ಬೌಲಿಂಗ್ ಕೋಚ್ ಬಾಲಾಜಿ ಮತ್ತು ಬಸ್ ಕ್ಲೀನರ್ ಓರ್ವನಿಗೆ ಕೊರೊನಾ ಸೋಂಕು ತಗುಲಿದೆ.