ನೀರಸ ಬೌಲಿಂಗ್ ಪ್ರದರ್ಶನ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಮುಗಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ತಮ್ಮ ಸೋಲಿಗೆ ಕಾರಣ ಪವರ್ಪ್ಲೇ ಓವರ್ಗಳಲ್ಲಿ ಮಾಡಿದ ಕಳಪೆ ಬೌಲಿಂಗ್ ಪ್ರದರ್ಶನ ಎಂದು ಹೇಳಿಕೆ ನೀಡಿದ್ದಾರೆ. ಹೌದು 'ಪವರ್ಪ್ಲೇ ಓವರ್ಗಳಲ್ಲಿ ಉತ್ತಮ ಬೌಲಿಂಗ್ ಮಾಡುವ ಅವಕಾಶವಿತ್ತು, ಆದರೆ ನಮ್ಮ ತಂಡದ ಬೌಲರ್ಗಳು ಆ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳದೇ ಕಳಪೆ ಬೌಲಿಂಗ್ ಪ್ರದರ್ಶನ ನೀಡಿ ಹೆಚ್ಚಿನ ಬೌಂಡರಿಗಳನ್ನು ನೀಡಿದರು' ಎಂದು ಹೇಳಿಕೆ ನೀಡಿದ ಕೊಹ್ಲಿ ಬೌಲರ್ಗಳ ಕಳಪೆ ಪ್ರದರ್ಶನವೇ ಸೋಲಿಗೆ ಕಾರಣ ಎಂಬುದನ್ನು ತಿಳಿಸಿದರು.
15-20 ರನ್ಗಳ ಕೊರತೆ ಕಾಡಿತು
ಇನ್ನು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 156 ರನ್ಗಳನ್ನು ಮಾತ್ರ ಗಳಿಸಿತು. ಚೆನ್ನೈ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀಡಿದ ಗುರಿಯನ್ನು 18.1 ಓವರ್ಗಳಲ್ಲಿ ತಲುಪಿತು. ಹೀಗೆ ತಮ್ಮ ತಂಡ ಮೊದಲು ಬ್ಯಾಟಿಂಗ್ ಮಾಡಿದಾಗ 15-20 ಹೆಚ್ಚು ರನ್ಗಳನ್ನು ಕಲೆ ಹಾಕಬೇಕಿತ್ತು ಎಂದು ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ. 15-20 ರನ್ಗಳ ಕೊರತೆಯಿಂದ ಸೋಲನ್ನು ಎದುರಿಸಬೇಕಾಯಿತು ಎಂದು ಕೂಡ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.
ಅಂಕಪಟ್ಟಿಯಲ್ಲಿ ಬೆಂಗಳೂರು ತಂಡದ ಸ್ಥಾನ
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಸೋಲಿನ ಮೂಲಕ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ನಾಲ್ಕನೇ ಸೋಲನ್ನು ಅನುಭವಿಸಿದ್ದು 10 ಅಂಕಗಳನ್ನು ಹೊಂದುವುದರ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದೆ. ಇನ್ನು ಟೂರ್ನಿಯಲ್ಲಿ ತನ್ನ ಏಳನೇ ಜಯವನ್ನು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.