ವರುಣ್ ಚಕ್ರವರ್ತಿ ಪ್ರದರ್ಶನವನ್ನು ಮೆಚ್ಚಿಕೊಂಡ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ 3 ವಿಕೆಟ್ಗಳನ್ನು ಪಡೆದುಕೊಳ್ಳುವುದರ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಹೀಗೆ ಉತ್ತಮ ಪ್ರದರ್ಶನ ನೀಡಿದ ವರುಣ್ ಚಕ್ರವರ್ತಿ ಕುರಿತು ಪಂದ್ಯ ಮುಗಿದ ನಂತರ ಮೆಚ್ಚುಗೆ ವ್ಯಕ್ತಪಡಿಸಿರುವ ವಿರಾಟ್ ಕೊಹ್ಲಿ 'ಯುವ ಆಟಗಾರರಿಂದ ಇಂತಹ ಉತ್ತಮ ಪ್ರದರ್ಶನವನ್ನು ನೋಡಲು ಇಚ್ಛಿಸುತ್ತೇನೆ, ಮುಂದೊಂದು ದಿನ ಈತ ಭಾರತ ತಂಡದ ಪ್ರಮುಖ ಆಟಗಾರನಾಗಿ ಮಿಂಚುತ್ತಾನೆ ಎಂದು ಪಂದ್ಯ ನಡೆಯುತ್ತಿದ್ದ ವೇಳೆಯೇ ಹೇಳಿದ್ದೆ' ಎಂದು ವಿರಾಟ್ ಕೊಹ್ಲಿ ವರುಣ್ ಚಕ್ರವರ್ತಿ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.
ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ವರುಣ್ ಚಕ್ರವರ್ತಿ
ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯವಾಗಿ ಸೋಲಲು ಕಾರಣರಾದ ಆಟಗಾರರಲ್ಲಿ ವರುಣ್ ಚಕ್ರವರ್ತಿ ಪ್ರಮುಖರು. ಬೌಲಿಂಗ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್, ಸಚಿನ್ ಬೇಬಿ ಮತ್ತು ವನಿಂದು ಹಸರಂಗ ಅವರ ವಿಕೆಟ್ಗಳನ್ನು ಪಡೆದ ವರುಣ್ ಚಕ್ರವರ್ತಿ ಕೈಲ್ ಜೆಮಿಸನ್ ಅವರನ್ನು ರನ್ಔಟ್ ಕೂಡ ಮಾಡಿದರು ಹಾಗೂ ಮೊಹಮ್ಮದ್ ಸಿರಾಜ್ ಕ್ಯಾಚ್ನ್ನೂ ಕೂಡ ವರುಣ್ ಚಕ್ರವರ್ತಿ ಪಡೆದುಕೊಂಡರು. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಉತ್ತಮ ಪ್ರದರ್ಶನ ತೋರಿದ ವರುಣ್ ಚಕ್ರವರ್ತಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಪಂದ್ಯದ ಸೋಲಿಗೆ ಇಬ್ಬನಿಯ ಕಾರಣ ನೀಡಿದ ವಿರಾಟ್ ಕೊಹ್ಲಿ
ಇನ್ನು ವರುಣ್ ಚಕ್ರವರ್ತಿ ಕುರಿತು ಪ್ರಶಂಸೆ ವ್ಯಕ್ತಪಡಿಸಿದ ವಿರಾಟ್ ಕೊಹ್ಲಿ ಕೊಲ್ಕತ್ತಾ ವಿರುದ್ಧ ಬೆಂಗಳೂರು ತಂಡ ಸೋಲು ಅನುಭವಿಸಿರುವುದಕ್ಕೆ ಕಾರಣವನ್ನು ಕೂಡ ತಿಳಿಸಿದ್ದಾರೆ. ಬೆಂಗಳೂರು ತಂಡದ ಬ್ಯಾಟಿಂಗ್ ವೇಳೆ ಹೆಚ್ಚು ಇಬ್ಬನಿ ಇದ್ದ ಕಾರಣ ನಾವು ಸಾಲುಸಾಲಾಗಿ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆವು ಎಂದು ಹೇಳುವುದರ ಮೂಲಕ ಬೆಂಗಳೂರು ತಂಡದ ಬ್ಯಾಟಿಂಗ್ ವಿಫಲತೆಗೆ ಅನಿರೀಕ್ಷಿತ ಇಬ್ಬನಿಯೇ ಕಾರಣ ಎಂದು ಕೊಹ್ಲಿ ಹೇಳಿಕೆ ನೀಡಿದ್ದಾರೆ.