ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನೀನೇ ಭಾರತ ತಂಡದ ಓಪನರ್ ಎಂದಿದ್ದ ಕೊಹ್ಲಿ
ಇಶಾನ್ ಕಿಶನ್ ಬಳಿ ತೆರಳಿದ್ದ ವಿರಾಟ್ ಕೊಹ್ಲಿ 'ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯಗಳಲ್ಲಿ ಭಾರತ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಆಟಗಾರ ನೀನೇ, ಹೀಗಾಗಿ ಮುಂಬರಲಿರುವ ಐಪಿಎಲ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲು ಸಿದ್ಧವಾಗಬೇಕಿದೆ' ಎಂದು ಇಶಾನ್ ಕಿಶನ್ ಅವರಿಗೆ ವಿರಾಟ್ ಕೊಹ್ಲಿ ತಿಳಿಸಿದ್ದರು.
ನಂತರ ನಡೆದ 2 ಪಂದ್ಯಗಳಿಂದ ಹೊರಬಿದ್ದಿದ್ದ ಇಶಾನ್ ಕಿಶನ್
ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಮುಂಬೈ ಇಂಡಿಯನ್ಸ್ ಪಂದ್ಯ ಮುಗಿದ ಬಳಿಕ ನಡೆದ 2 ಪಂದ್ಯಗಳಿಂದ ಇಶಾನ್ ಕಿಶನ್ ತಂಡದಿಂದ ಹೊರಬಿದ್ದಿದ್ದರು. ಹೌದು, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ವಿರುದ್ಧ ನಡೆದ ಮುಂಬೈ ಇಂಡಿಯನ್ಸ್ ತಂಡದ 2 ಪಂದ್ಯಗಳಲ್ಲಿ ಇಶಾನ್ ಕಿಶನ್ ಕಣಕ್ಕಿಳಿದಿರಲಿಲ್ಲ. ಇಶಾನ್ ಕಿಶನ್ ಮೇಲೆ ಒತ್ತಡ ಹೇರಲು ಇಚ್ಛಿಸುವುದಿಲ್ಲ, ಆತ ಮಾನಸಿಕ ಒತ್ತಡದಿಂದ ಆಚೆ ಬರಲಿ ಎಂಬ ಕಾರಣಕ್ಕೆ ತಂಡದಿಂದ ಹೊರಗಿಟ್ಟಿದ್ದೇವೆ ಎಂಬ ವಿಷಯವನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ವೇಳೆ ತಿಳಿಸಿದ್ದರು.
ನಂತರದ ಪಂದ್ಯಗಳಲ್ಲಿ ಇಶಾನ್ ಕಿಶನ್ ಮಿಂಚು
ಹೀಗೆ 2 ಪಂದ್ಯಗಳಿಂದ ಅವಕಾಶವಂಚಿತರಾಗಿ ಹೊರಗುಳಿದಿದ್ದ ಇಶಾನ್ ಕಿಶನ್ ನಂತರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 25 ಎಸೆತಗಳಿಗೆ 50 ರನ್ ಬಾರಿಸಿ ಮಿಂಚಿದರು. ಹಾಗೂ ನಿನ್ನೆ ( ಅಕ್ಟೋಬರ್ 8 ) ನಡೆದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಪಂದ್ಯದಲ್ಲಿ 32 ಎಸೆತಗಳಿಗೆ 11 ಬೌಂಡರಿ ಮತ್ತು 4 ಸಿಕ್ಸರ್ ಸಹಿತ 84 ರನ್ ಚಚ್ಚಿದರು. ಹೀಗೆ ವಿರಾಟ್ ಕೊಹ್ಲಿ ನೀಡಿದ ಸಲಹೆಯಂತೆ ಇಶಾನ್ ಕಿಶನ್ ತಾವು ಕಣಕ್ಕಿಳಿದ ನಂತರದ ಪಂದ್ಯಗಳಲ್ಲಿ ಅಬ್ಬರಿಸಿದ್ದಾರೆ.