
ಕೊಹ್ಲಿ ನೀಡಿದ ಕಾರಣವಿದು!
ಆರ್ಸಿಬಿ ತಂಡದ ನಾಯಕತ್ವ ತ್ಯಜಿಸಲು ಪ್ರಮುಖ ಕಾರಣ ಕೆಲಸದ ಹೊರೆ ಎಂಬುದಾಗಿ ವಿರಾಟ್ ಕೊಹ್ಲಿ ಹೇಳಿದ್ದಾರೆ. "ವರ್ಕ್ಲೋಡ್ ನಾಯಕತ್ವ ತ್ಯಜಿಸಲು ಇರುವ ಪ್ರಮುಖವಾದ ಕಾರಣ. ನೀಡಿದ ಜವಾಬ್ಧಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸುವುದಕ್ಕೆ ನಾನು ಬಯಸುತ್ತೇನೆ. ವಹಿಸಿಕೊಂಡಿರುವ ಜವಾಬ್ಧಾರಿಗೆ 120 ಶೇಕಡಾದಷ್ಟು ಶ್ರಮ ನೀಡಲು ಸಾಧ್ಯವಾಗದಿದ್ದರೆ ಆ ಸ್ಥಾನದಲ್ಲಿ ಮುಂದಿವರಿಯಲು ನಾನು ಬಯಸುವುದಿಲ್ಲ. ಈ ವಿಚಾರ ಯಾವಾಗಲೂ ನನ್ನ ತಲೆಯಲ್ಲಿತ್ತು" ಎಂದಿದ್ದಾರೆ ಆರ್ಸಿಬಿ ತಮಡದ ನಾಯಕ ವಿರಾಟ್ ಕೊಹ್ಲಿ. ಸ್ಟಾರ್ ಸ್ಪೋರ್ಟ್ಸ್ಗೆ ನೀಡಿದ ಸಂದರ್ಶನದಲ್ಲಿ ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಈವರೆಗೆ ಟ್ರೋಫಿ ಗೆಲ್ಲುವಲ್ಲಿ ವಿಫಲವಾಗಿರುವ ಕೊಹ್ಲಿ
ಆರ್ಸಿಬಿ ತಂಡದ ಪೂರ್ಣ ಪ್ರಮಾಣದ ನಾಯಕನಾಗಿ ವಿರಾಟ್ ಕೊಹ್ಲಿ ಜವಾಬ್ಧಾರಿ ವಹಿಸಿಕೊಂಡಿದ್ದು 2013ರಲ್ಲಿ. ಅದಾದ ಬಳಿಕ ಸತತವಾಗಿ ತಂಡವನ್ನು ಮುನ್ನಡೆಸಿಕೊಮಡು ಬರುತ್ತಿದ್ದಾರೆ. ಸಾಕಷ್ಟು ಬಲಿಷ್ಠ ಆಟಗಾರರನ್ನು ಹೊಂದಿದ್ದರೂ ಕೊಹ್ಲಿ ಪಡೆ ಈವರೆಗೂ ಟ್ರೋಫಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕೊಹ್ಲಿ ನಾಯಕತ್ವದ ವಿಚಾರಬಾಗಿ ಸಾಕಷ್ಟು ಬಾರಿ ಪ್ರಶ್ನೆಗಳು ಎದುರಾಗಿತ್ತು.

ಅಂತಿಮ ಪಂದ್ಯದವರೆಗೂ ಆರ್ಸಿಬಿ ಆಟಗಾರನಾಗಿ ಮುಂದುವರಿಯುವೆ
ವಿರಾಟ್ ಕೊಹ್ಲಿ ಈ ಭಾರಿಯ ಐಪಿಎಲ್ನ ಬಳಿಕ ನಾಯಕತ್ವ ತ್ಯಜಿಸುವ ನಿರ್ಧಾರ ತೆಗೆದುಕೊಂಡ ಸಂದರ್ಣದಲ್ಲಿ ತಮ್ಮ ಪ್ರಕಟಣೆಯಲ್ಲಿ ಅಭಿಮಾನಿಗಳಿಗೆ ಒಂದು ಭರವಸೆಯನ್ನು ನೀಡಿದ್ದಾರೆ. ತಾನು ಆರ್ಸಿಬಿ ತಂಡದ ನಾಯಕತ್ವವನ್ನು ಮಾತ್ರವೇ ತ್ಯಜಿಸುತ್ತಿದ್ದು ಆಟಗಾರನಾಗಿ ಮುಂದಿನ ಆವೃತ್ತಿಗಳಲ್ಲಿ ಮುಂದಿವರಿಯುತ್ತೇನೆ ಎಂದಿದ್ದಾರೆ. ಅಲ್ಲದೆ ಐಪಿಎಲ್ನಲ್ಲಿ ತನ್ನ ಕೊನೆಯ ಪಂದ್ಯವನ್ನು ಆಡುವವರೆಗೂ ಆರ್ಸಿಬಿ ತಂಡದ ಆಟಗಾರನಾಗಿಯೇ ಮುಂದುವರಿಯಲು ನಾನು ಬಯಸುತ್ತೇನೆ ಎಂದಿದ್ದಾರೆ ವಿರಾಟ್ ಕೊಹ್ಲಿ.

ಕೆಕೆಆರ್ ವಿರುದ್ಧ ಸೆಣೆಸಲು ಆರ್ಸಿಬಿ ಸಜ್ಜು
ಈಗ ಪ್ಲೇಆಪ್ಗೆ ವಿರಾಟ್ ಕೊಹ್ಲಿ ಪಡೆ ಪ್ರವೇಶ ಪಡೆದುಕೊಂಡಿದ್ದು ಈ ಹಂತದಲ್ಲಿ ಆರ್ಸಿಬಿ ತಂಡಕ್ಕೆ ಇಯಾನ್ ಮಾರ್ಗನ್ ನೇತೃತ್ವದ ಕೊಲ್ಕತ್ತಾ ತಂಡ ಎದುರಾಳಿಯಾಗಿದೆ. ಇಂದು ನಡೆಯುವ ಈ ಪಂದ್ಯದಲ್ಲಿ ವಿರಾಟ್ ಪಡೆ ಗೆಲುವು ಸಾಧಿಸುವ ಉತ್ಸಾಹದಲ್ಲಿದೆ. ಇಲ್ಲಿ ಗೆದ್ದ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆಡಿ ಅಲ್ಲಿ ಗೆದ್ದ ತಂಡ ಫೈನಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.


Click it and Unblock the Notifications
