
ಗಾಯಕ್ವಾಡ್ ಚೆನ್ನೈ ಪರ ಆಡುವತ್ತ ಗಮನ ನೀಡುತ್ತಿಲ್ಲ
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಿಂಚಿದ್ದ ರುತುರಾಜ್ ಗಾಯಕ್ವಾಡ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಅಸ್ತ್ರವಾಗಿದ್ದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಳಪೆಯಾಗಿದ್ದಾರೆ. ಕಳಪೆ ಪ್ರದರ್ಶನ ನೀಡಿರುವ ರುತುರಾಜ್ ಗಾಯಕ್ವಾಡ್ ಟೀಮ್ ಇಂಡಿಯಾ ಪರ ಭವಿಷ್ಯದಲ್ಲಿ ಕಣಕ್ಕಿಳಿಯುವುದರ ಕುರಿತು ಚಿಂತಿಸುವುದನ್ನು ಬಿಟ್ಟು ಪ್ರಸ್ತುತ ಪ್ರತಿನಿಧಿಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಉತ್ತಮವಾಗಿ ಆಡುವತ್ತ ಗಮನ ಹರಿಸಬೇಕು ಎಂದು ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್ ಹೇಳಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಎಲ್ಲಾ ವಿಭಾಗಗಳಲ್ಲಿ ನೆಲಕಚ್ಚಿದೆ
ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಫೀಲ್ಡಿಂಗ್, ಬ್ಯಾಟಿಂಗ್ ಮತ್ತು ಬೌಲಿಂಗ್ ಎಲ್ಲಾ ವಿಭಾಗಗಳಲ್ಲಿಯೂ ಕೂಡ ವಿಫಲವಾಗಿದೆ ಎಂದಿರುವ ಬ್ರಾಡ್ ಹಾಗ್, ರುತುರಾಜ್ ಗಾಯಕ್ವಾಡ್ ಯಾವ ಎಸೆತಕ್ಕೆ ಯಾವ ಹೊಡೆತ ಬಾರಿಸಬೇಕು ಎಂಬ ಗೊಂದಲದೊಂದಿಗೆ ಬ್ಯಾಟ್ ಬೀಸುತ್ತಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ. ಈ ರೀತಿಯ ಹೇಳಿಕೆ ನೀಡುವುದರ ಮೂಲಕ ರುತುರಾಜ್ ಗಾಯಕ್ವಾಡ್ ಕಳಪೆ ಪ್ರದರ್ಶನ ತಂಡದ ಸಾಲು ಸಾಲು ಸೋಲಿಗೆ ಕಾರಣ ಕೂಡ ಆಗಿದೆ ಎಂಬುದನ್ನು ಬ್ರಾಡ್ ಹಾಗ್ ಪರೋಕ್ಷವಾಗಿ ಹೇಳಿದ್ದಾರೆ.

ಕಳೆದ ಆವೃತ್ತಿಯಲ್ಲಿ ಮಿಂಚಿದ್ದ ರುತುರಾಜ್ ಗಾಯಕ್ವಾಡ್
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡಿರುವ 4 ಪಂದ್ಯಗಳ ಪೈಕಿ 18 ರನ್ ಕಲೆಹಾಕುವಲ್ಲಿ ಮಾತ್ರ ಶಕ್ತರಾಗಿರುವ ರುತುರಾಜ್ ಗಾಯಕ್ವಾಡ್ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ 16 ಪಂದ್ಯಗಳಲ್ಲಿ 635 ರನ್ ಬಾರಿಸುವ ಮೂಲಕ ಆರೆಂಜ್ ಕ್ಯಾಪ್ ವಿಜೇತರಾಗಿ ಹೊರಹೊಮ್ಮಿದ್ದರು. ಈ ಪೈಕಿ ರುತುರಾಜ್ ಗಾಯಕ್ವಾಡ್ ಶತಕವೊಂದನ್ನು ಕೂಡಾ ಸಿಡಿಸಿದ್ದರು.


Click it and Unblock the Notifications












