
ಪಂದ್ಯ ರಾಜಸ್ಥಾನ್ ರಾಯಲ್ಸ್ ಕೈತಪ್ಪಿದ್ದು ಈ ಓವರ್ನಲ್ಲಿ
ರಾಜಸ್ಥಾನ್ ರಾಯಲ್ಸ್ ವಿರುದ್ಧ ದಿನೇಶ್ ಕಾರ್ತಿಕ್ ಅಬ್ಬರಿಸಿರುವುದರ ಕುರಿತು ಟ್ವೀಟ್ ಮಾಡಿರುವ ಬ್ರಾಡ್ ಹಾಗ್ ರವಿಚಂದ್ರನ್ ಅಶ್ವಿನ್ ಮಾಡಿದ 14 ಓವರ್ನಲ್ಲಿ ದಿನೇಶ್ ಕಾರ್ತಿಕ್ ಶ್ರಮವಹಿಸಿ 20ಕ್ಕಿಂತ ಹೆಚ್ಚು ರನ್ ಗಳಿಸಿದರು ಹಾಗೂ ಈ ಸಂದರ್ಭದಲ್ಲಿಯೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಕೈತಪ್ಪಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಯಿತು ಎಂದು ಬರೆದುಕೊಂಡಿದ್ದಾರೆ.

ತನ್ನ ಅಂತಿಮ ಓವರ್ನಲ್ಲಿ ದುಬಾರಿಯಾಗಿದ್ದ ಅಶ್ವಿನ್
ಮೊದಲಿಗೆ 3 ಓವರ್ ಬೌಲಿಂಗ್ ಮಾಡಿದ್ದ ಅಶ್ವಿನ್ 18 ರನ್ ನೀಡಿ ಯಾವುದೇ ವಿಕೆಟ್ ಪಡೆಯದೇ ದುಬಾರಿ ಕೂಡ ಆಗದೇ ಇದ್ದರು. ಆದರೆ, 14ನೇ ಓವರ್ ಮೂಲಕ ತನ್ನ ಅಂತಿಮ ಓವರ್ ಬೌಲಿಂಗ್ ಮಾಡಿದ ಅಶ್ವಿನ್ ಅದೊಂದೇ ಓವರ್ನಲ್ಲಿ 21 ರನ್ ನೀಡಿ ದುಬಾರಿಯಾದರು. ತಮಿಳು ನಾಡು ತಂಡದ ತನ್ನ ಸಹ ಆಟಗಾರನಾದ ಅಶ್ವಿನ್ ಎಸೆತಗಳಿಗೆ ಬೌಂಡರಿ ಸಿಕ್ಸರ್ ಬಾರಿಸಿದ ದಿನೇಶ್ ಕಾರ್ತಿಕ್ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಡೆ ತಿರುಗುವಂತೆ ಮಾಡಿದರು. ದಿನೇಶ್ ಕಾರ್ತಿಕ್ ಇದೊಂದೇ ಓವರ್ನಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸಿದ ಪರಿಣಾಮ ರಾಜಸ್ಥಾನ್ ರಾಯಲ್ಸ್ ಪಂದ್ಯದ ಮೇಲೆ ಹಿಡಿತ ಕಳೆದುಕೊಂಡಿತು. ಒಂದುವೇಳೆ ಈ ಓವರ್ನಲ್ಲಿ ರವಿಚಂದ್ರನ್ ಅಶ್ವಿನ್ ಇಷ್ಟು ರನ್ ನೀಡದೇ ಇದ್ದಿದ್ದರೆ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಒತ್ತಡಕ್ಕೆ ಸಿಲುಕಿ ಹಾಕಿಕೊಳ್ಳುತ್ತಿದ್ದದ್ದು ಮಾತ್ರ ಖಚಿತ ಎನ್ನಬಹುದು.

ಆರ್ಸಿಬಿ ಮುಂದಿನ ಪಂದ್ಯ
ಸದ್ಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಉಳಿದೊಂದು ಪಂದ್ಯದಲ್ಲಿ ಸೋತಿದೆ. ಇನ್ನು ಆರ್ಸಿಬಿ ತನ್ನ ನಾಲ್ಕನೇ ಪಂದ್ಯದಲ್ಲಿ ಏಪ್ರಿಲ್ 9ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಾಡಲಿದ್ದು ಈ ಪಂದ್ಯದಲ್ಲಿ ತಂಡದ ಪ್ರಮುಖ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಕಣಕ್ಕಿಳಿಯಲಿದ್ದಾರೆ.


Click it and Unblock the Notifications












