ಆಟಗಾರನಾಗಿ ಪಂತ್ ಅಬ್ಬರಿಸಬೇಕು
"ನನ್ನ ಪಾಲಿಗೆ ರಿಷಭ್ ಪಂತ್ ನಾಯಕನಾಗಿ ಉತ್ತಮ ಸಾಧನೆ ಮಾಡಿದ್ದಾರೆ. ಅವರು ಕುಲದೀಪ್ ಯಾದವ್ ಅವರನ್ನು ಚೆನ್ನಾಗಿ ಬಳಸಿಕೊಂಡಿದ್ದಾರೆ ಮತ್ತು ನಾಯಕನಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಿಸಿಕೊಡುತ್ತಿರುವ ರಿಷಭ್ ಪಂತ್ ಓರ್ವ ಬ್ಯಾಟ್ಸ್ಮನ್ ಆಗಿ ಅಬ್ಬರಿಸಬೇಕಿದೆ" ಎಂದು ಸುರೇಶ್ ರೈನಾ ಪಂತ್ಗೆ ಸಲಹೆ ನೀಡಿದ್ದಾರೆ.
ರಿಷಭ್ ಪಂತ್ ಅಂಕಿಅಂಶ
ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವೆರಗೂ ಒಟ್ಟು 8 ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡಿದ್ದು, 234 ರನ್ ಕಲೆಹಾಕಿದ್ದಾರೆ ಹಾಗೂ ರಿಷಭ್ ಪಂತ್ ಈ ಬಾರಿಯ ಟೂರ್ನಿಯಲ್ಲಿ ಗಳಿಸಿರುವ ಗರಿಷ್ಟ ರನ್ 44 ರನ್ ಮಾತ್ರ. ಹೀಗೆ ಈ ಬಾರಿಯ ಟೂರ್ನಿಯಲ್ಲಿ ಒಂದೇ ಒಂದು ಅರ್ಧಶತಕವನ್ನೂ ಸಹ ಬಾರಿಸುವಲ್ಲಿ ವಿಫಲರಾಗಿರುವ ರಿಷಭ್ ಪಂತ್ ಸುರೇಶ್ ರೈನಾ ಅಭಿಪ್ರಾಯಪಟ್ಟಂತೆ ಓರ್ವ ಬ್ಯಾಟ್ಸ್ಮನ್ ಆಗಿ ಅಬ್ಬರಿಸಬೇಕಾದ ಅನಿವಾರ್ಯತೆ ಇದೆ.
ಕುಲ್ದೀಪ್ ಯಾದವ್ ಸರಿಯಾದ ಬಳಕೆ
ಇನ್ನು ಸುರೇಶ್ ರೈನಾ ಹೇಳಿದ ಪ್ರಕಾರ ರಿಷಭ್ ಪಂತ್ ತಮ್ಮ ತಂಡದ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇನ್ನು ಕುಲದೀಪ್ ಯಾದವ್ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯ ಟೂರ್ನಿಯಲ್ಲಿ ಅಡಿರುವ 9 ಪಂದ್ಯಗಳ ಪೈಕಿ ಒಂದಲ್ಲ ಎರಡಲ್ಲ ಬರೋಬ್ಬರಿ 4 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೀಗೆ ಕುಲದೀಪ್ ಯಾದವ್ ರೀತಿಯ ಅನುಭವಿ ಸ್ಪಿನ್ನರ್ನ್ನು ಸರಿಯಾದ ರೀತಿ ಬಳಸಿಕೊಳ್ಳುತ್ತಿರುವ ರಿಷಭ್ ಪಂತ್ ಜಾಣ್ಮೆಯ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಲೇಬೇಕು. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 9 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕುಲದೀಪ್ ಯಾದವ್ 17 ವಿಕೆಟ್ ಪಡೆದು ಮಿಂಚಿದ್ದು, ಇನ್ನಿಂಗ್ಸ್ವೊಂದರಲ್ಲಿ 14 ರನ್ ನೀಡಿ 4 ವಿಕೆಟ್ ಪಡೆದದ್ದು ಅವರ ಉತ್ತಮ ಬೌಲಿಂಗ್ ಪ್ರದರ್ಶನವಾಗಿದೆ.