
ಇದು ಅವರದ್ದೇ ನಿರ್ಧಾರ
ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವ ತ್ಯಜಿಸುವ ತೀರ್ಮಾನವನ್ನು ಸ್ವತಃ ಅವರೇ ತೆಗೆದುಕೊಂಡರು ಎಂದು ಹೇಳಿಕೆ ನೀಡಿರುವ ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥನ್ ಯಾರೂ ಸಹ ಅವರನ್ನು ನಾಯಕತ್ವದಿಂದ ತೆಗೆದು ಹಾಕಿಲ್ಲ ಎಂಬ ಸ್ಪಷ್ಟನೆಯನ್ನು ನೀಡಿದ್ದಾರೆ. "ಇದು ಎಂಎಸ್ ಧೋನಿ ಅವರ ನಿರ್ಧಾರವಾಗಿತ್ತು. ಅವರು ಆಡಳಿತ ಮಂಡಳಿಯೊಂದಿಗೆ ಮಾತನಾಡಿ ಅರ್ಧ ಗಂಟೆಯ ಹಿಂದೆಯೇ ನಿರ್ಧಾರ ತೆಗೆದುಕೊಂಡರು" ಎಂದು ಕಾಶಿ ವಿಶ್ವನಾಥನ್ ಹೇಳಿಕೆ ನೀಡಿದ್ದಾರೆ.

ಧೋನಿ ನಿರ್ಧಾರವನ್ನು ನಾವು ಗೌರವಿಸುತ್ತೇವೆ
ಇನ್ನೂ ಮುಂದುವರೆದ ಮಾತನಾಡಿದ ಕಾಶಿ ವಿಶ್ವನಾಥನ್ ಎಂಎಸ್ ಧೋನಿ ನಿರ್ದಾರವನ್ನು ನಾವು ಯಾವಾಗಲೂ ಗೌರವಿಸುತ್ತೇವೆ ಎಂದು ಹೇಳಿದ್ದಾರೆ. " ಎಂಎಸ್ ನಿರ್ಧಾರವನ್ನು ನಾವು ಯಾವಾಗಲೂ ಗೌರವಿಸುತ್ತೇವೆ. ಅವರು ಫ್ರಾಂಚೈಸಿಗೆ ಶಕ್ತಿಯ ಆಧಾರ ಸ್ತಂಭವಾಗಿದ್ದಾರೆ ಮತ್ತು ತಂಡದ ಪ್ರಮುಖ ಸದಸ್ಯರಾಗಿದ್ದಾರೆ" ಎಂದು ಕಾಶಿ ವಿಶ್ವನಾಥನ್ ಹೇಳಿಕೆ ನೀಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ
ರವೀಂದ್ರ ಜಡೇಜಾ ( ನಾಯಕ ), ಎಂಎಸ್ ಧೋನಿ, ಮೊಯಿನ್ ಅಲಿ, ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಡ್ವೇನ್ ಬ್ರಾವೋ, ಅಂಬಟಿ ರಾಯುಡು, ದೀಪಕ್ ಚಹಾರ್, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಶಿವಂ ದುಬೆ, ಮಹೇಶ್ ತೀಕ್ಷಣ, ರಾಜವರ್ಧನ್ ಹಂಗರ್ಗೇಕರ್, ಸಿಮರ್ಜೀತ್ ಸಿಂಗ್, ದೇವೋನ್ ಪಿ ಕಾನ್ವೇ , ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಸುಭ್ರಾಂಶು ಸೇನಾಪತಿ, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಸಿ ಹರಿ ನಿಶಾಂತ್, ಎನ್ ಜಗದೀಸನ್, ಕ್ರಿಸ್ ಜೋರ್ಡಾನ್, ಕೆ ಭಗತ್ ವರ್ಮಾ.


Click it and Unblock the Notifications
