
ಭುಜದ ಗಾಯದಿಂದ ಬಳಲುತ್ತಿರುವ ದೀಪಕ್ ಚಹರ್
ಕಳೆದ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟಿ ಟ್ವೆಂಟಿ ಸರಣಿಯಲ್ಲಿ ಭಾಗವಹಿಸಿದ್ದ ದೀಪಕ್ ಚಹರ್ ವೆಸ್ಟ್ ಇಂಡೀಸ್ ತಂಡದ ವಿರುದ್ಧದ ಅಂತಿಮ ಟಿ ಟ್ವೆಂಟಿ ಪಂದ್ಯದ ವೇಳೆ ಭುಜದ ಗಾಯದ ಸಮಸ್ಯೆಗೊಳಗಾದರು. ಹೀಗೆ ಗಾಯದ ಸಮಸ್ಯೆಗೆ ಒಳಗಾದ ದೀಪಕ್ ಚಹರ್ ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಗೂ ಅಲಭ್ಯರಾಗಿದ್ದರು.

ಐಪಿಎಲ್ ಆರಂಭದ ಪಂದ್ಯಗಳಿಗೆ ದೀಪಕ್ ಚಹರ್ ಅಲಭ್ಯ
ಸದ್ಯ ಬೆಂಗಳೂರಿನ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲಿರುವ ದೀಪಕ್ ಚಹರ್ ಚೇತರಿಸಿಕೊಳ್ಳಲು ಹೆಚ್ಚು ದಿನಗಳ ಅವಶ್ಯಕತೆ ಇರುವ ಕಾರಣದಿಂದಾಗಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಒಂದುವೇಳೆ ಗಾಯದ ತೀವ್ರತೆ ಹೆಚ್ಚಾಗಿ ದೀಪಕ್ ಚಹಾರ್ ಚೇತರಿಸಿಕೊಳ್ಳುವುದು ತಡವಾದರೆ ಈ ಬಾರಿ ಸಂಪೂರ್ಣ ಐಪಿಎಲ್ ಟೂರ್ನಿಗೆ ದೀಪಕ್ ಚಹರ್ ಅಲಭ್ಯರಾಗಲಿದ್ದಾರೆ ಎಂಬ ಮಾತುಗಳು ಕೂಡ ಹರಿದಾಡುತ್ತಿವೆ. ಸದ್ಯ ಈ ಆತಂಕ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಪಾಳಯದಲ್ಲಿ ಮೂಡಿದ್ದು, ತಮ್ಮ ತಂಡದ ಖಾಯಂ ಆಟಗಾರನ ಅಲಭ್ಯತೆ ಟೂರ್ನಿಯಲ್ಲಿ ತಂಡಕ್ಕೆ ಹಿನ್ನಡೆಯನ್ನುಂಟುಮಾಡುವ ಸಾಧ್ಯತೆಗಳಿವೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ
ರವೀಂದ್ರ ಜಡೇಜಾ, ಎಂಎಸ್ ಧೋನಿ, ಮೊಯಿನ್ ಅಲಿ, ರುತುರಾಜ್ ಗಾಯಕ್ವಾಡ್, ಡ್ವೇನ್ ಬ್ರಾವೋ, ಅಂಬಟಿ ರಾಯುಡು, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಸುಭ್ರಾಂಶು ಸೇನಾಪತಿ, ಆಡಮ್ ಮಿಲ್ನೆ, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಸಿ ಹರಿ ನಿಶಾಂತ್, ಎನ್ ಜಗದೀಶ್, ಭಗದೀಸನ್, ಭಗದೀಶ್ ವರ್ದನ್, ರಾಬಿನ್ ಉತ್ತಪ್ಪ, ದೀಪಕ್ ಚಹಾರ್, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಕೆಎಂ ಆಸಿಫ್, ಶಿವಂ ದುಬೆ, ಮಹೇಶ್ ತೀಕ್ಷಣ, ರಾಜವರ್ಧನ್ ಹಂಗರ್ಗೇಕರ್, ಸಮರ್ಜಿತ್ ಸಿಂಗ್, ಡೆವೊನ್ ಕಾನ್ವೇ.


Click it and Unblock the Notifications












