ಗಾಯಕ್ಕೊಳಗಾಗಿದ್ದಾರೆ ಡಿಕೆ
ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ವೇಳೆ ದಿನೇಶ್ ಕಾರ್ತಿಕ್ ಕೈಗೆ ಪೆಟ್ಟು ಬಿದ್ದಿತ್ತು. ಹೀಗೆ ದಿನೇಶ್ ಕಾರ್ತಿಕ್ಗೆ ಪೆಟ್ಟು ಬಿದ್ದ ಕಾರಣ ಆ ಪಂದ್ಯದಲ್ಲಿ ಕಾರ್ತಿಕ್ ವಿಕೆಟ್ ಕೀಪಿಂಗ್ ಕೂಡ ಮಾಡಿರಲಿಲ್ಲ. ಹೌದು, ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದೇ ವಿಫಲರಾದರು ಹಾಗೂ ಗುಜರಾತ್ ಟೈಟನ್ಸ್ ಬ್ಯಾಟಿಂಗ್ ವೇಳೆ ಕಣಕ್ಕಿಳಿಯದ ದಿನೇಶ್ ಕಾರ್ತಿಕ್ ಬದಲಾಗಿ ಅನುಜ್ ರಾವತ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.
ದಿನೇಶ್ ಕಾರ್ತಿಕ್ ಇಲ್ಲದೇ ಆರ್ಸಿಬಿ ಸಿಎಸ್ಕೆ ವಿರುದ್ಧ ಗೆಲ್ಲುತ್ತಾ ಚೆನ್ನೈ?
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ದಿನೇಶ್ ಕಾರ್ತಿಕ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದ್ದು, ಇಂಥಹ ಮಹತ್ವದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ರೀತಿಯ ಫಿನಿಷರ್ ಇಲ್ಲದೇ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಶಸ್ವಿಯಾಗುತ್ತಾ ಎಂಬ ಅನುಮಾನ ಶುರುವಾಗಿದೆ.
ದಿನೇಶ್ ಕಾರ್ತಿಕ್ ಭಾಗವಹಿಸುವಿಕೆ ಕುರಿತು ನಿರ್ಧಾರ ಯಾವಾಗ?
ಇನ್ನು ಗಾಯದ ಸಮಸ್ಯೆಗೆ ಒಳಗಾಗಿರುವ ದಿನೇಶ್ ಕಾರ್ತಿಕ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುತ್ತಾರಾ ಅಥವಾ ಇಲ್ಲವಾ ಎಂಬುದರ ಕುರಿತು ತಂಡದ ಮ್ಯಾನೇಜ್ಮೆಂಟ್ ಪಂದ್ಯ ಆರಂಭದ ಸನಿಹದಲ್ಲಿ ಘೋಷಿಸಲಿದೆ ಎನ್ನಲಾಗಿದೆ. ಹೌದು, ಪಂದ್ಯ ಆರಂಭವಾಗಲು ಕೆಲ ನಿಮಿಷಗಳು ಬಾಕಿ ಇರುವಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ದಿನೇಶ್ ಕಾರ್ತಿಕ್ ಕಣಕ್ಕಿಳಿಯುವ ಕುರಿತು ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದೆ.