
ಹಳೆಯದೆಲ್ಲ ಇನ್ನು ನೆನಪು ಮಾತ್ರ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ವೇಳೆ ಟ್ವಿಟ್ಟರ್ನಲ್ಲಿ ಕ್ರಿಕೆಟ್ ಅಭಿಮಾನಿಯೋರ್ವರು ಟ್ವೀಟ್ವೊಂದನ್ನು ಮಾಡಿದ್ದು, ಸಿಎಸ್ಕೆ ಮತ್ತು ಆರ್ಸಿಬಿ ನಡುವಿನ ಪಂದ್ಯದ ದಿನ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ನಾಯಕರಾಗಿ ಟಾಸ್ನಲ್ಲಿ ಭಾಗವಹಿಸುತ್ತಿದ್ದನ್ನು ನೆನಪಿಸಿಕೊಂಡು ಇದೆಲ್ಲಾ ಇನ್ನು ನೆನಪು ಮಾತ್ರ ಎಂದು ಬರೆದುಕೊಂಡಿದ್ದಾರೆ.

ಇದೇನಾ ಮೋದಿಜೀ ಅಚ್ಛೇ ದಿನ್?
ಮತ್ತೋರ್ವ ಕ್ರಿಕೆಟ್ ಪ್ರೇಮಿ ಟ್ವೀಟ್ ಮಾಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ಟಾಸ್ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಅನುಪಸ್ಥಿತಿಯಲ್ಲಿ ನಡೆಯುತ್ತಿದೆ, ಇದೇನಾ ಮೋದಿಜೀ ನೀವು ಹೇಳುತ್ತಿದ್ದ ಅಚ್ಛೇ ದಿನ್ ಎಂದು ಬರೆದುಕೊಂಡಿದ್ದಾರೆ.

ಧೋನಿ ಮತ್ತು ಕೊಹ್ಲಿಯನ್ನು ಕಳುಹಿಸಿ
ಮತ್ತೋರ್ವ ಅಭಿಮಾನಿ ಟ್ವಿಟ್ಟರ್ನಲ್ಲಿ ರವೀಂದ್ರ ಜಡೇಜಾ ಮತ್ತು ಫಾಫ್ ಡು ಪ್ಲೆಸಿಸ್ ಅವರ ಟ್ವಿಟ್ಟರ್ ಖಾತೆಗಳನ್ನು ಉಲ್ಲೇಖಿಸಿದ್ದು, ಇದೊಂದು ದಿನ ನಿಮ್ಮ ಬದಲಾಗಿ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ಅವರನ್ನು ಬದಲಿ ಪ್ರತಿನಿಧಿಗಳಾಗಿ ಕಳುಹಿಸಿಕೊಡುತ್ತೀರಾ ಎಂದು ಮನವಿ ಮಾಡಿಕೊಂಡಿದ್ದಾರೆ.
ಹೀಗೆ ಹಲವಾರು ಕ್ರಿಕೆಟ್ ಪ್ರೇಮಿಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ಕುರಿತು ಟ್ವೀಟ್ ಮಾಡಿದ್ದು ನೋವನ್ನು ತೋಡಿಕೊಂಡಿದ್ದಾರೆ. ಇನ್ನು ಇಂಗ್ಲೆಂಡ್ನ ಮಾಜಿ ಕ್ರಿಕೆಟಿಗ ಗ್ರೇಮ್ ಸ್ವಾನ್ ಇತ್ತಂಡಗಳ ನಡುವಿನ ಸೆಣಸಾಟದ ಕುರಿತು ಮಾತನಾಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ಎಂಎಸ್ ಧೋನಿ vs ವಿರಾಟ್ ಕೊಹ್ಲಿ ನಡುವಿನ ಹಣಾಹಣಿ ಎಂದು ಹೇಳಿಕೆಯನ್ನು ನೀಡಿದ್ದರು.


Click it and Unblock the Notifications
