
ಸ್ಟೇಡಿಯಂನಿಂದ ಹೊರ ನಡೆ ಎಂದ ಅಭಿಮಾನಿ
ಪಂದ್ಯದಲ್ಲಿ 2 ಓವರ್ ಬೌಲಿಂಗ್ ಮಾಡಿ 31 ರನ್ ಬಿಟ್ಟುಕೊಟ್ಟು ಯಾವುದೇ ವಿಕೆಟ್ ಪಡೆಯದೇ ನಿರಾಸೆ ಉಂಟು ಮಾಡಿದ ಮೊಹಮ್ಮದ್ ಸಿರಾಜ್ ವಿರುದ್ಧ ಕಿಡಿಕಾರಿರುವ ಅಭಿಮಾನಿಯೋರ್ವ ಮೊಹಮ್ಮದ್ ಸಿರಾಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೌಲಿಂಗ್, ಬ್ಯಾಟಿಂಗ್ ಅಥವಾ ಫೀಲ್ಡಿಂಗ್ ಯಾವುದರಲ್ಲಿಯೂ ಕೂಡ ಉಪಯೋಗಕ್ಕೆ ಬರುವುದಿಲ್ಲ. ಹೀಗಾಗಿ ಸಿರಾಜ್ ದಯವಿಟ್ಟು ಸ್ಟೇಡಿಯಂ ಬಿಟ್ಟು ಹೊರ ನಡೆಯಬೇಕು ಎಂದು ಬೇಡಿಕೆ ಇಟ್ಟು ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತ ಪಡಿಸಿದ್ದಾರೆ.

ಈ ಇಬ್ಬರನ್ನು ಮುಂದಿನ ವರ್ಷ ಕೈಬಿಡಿ
ಮತ್ತೋರ್ವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಇಬ್ಬರೂ ಸಹ ಅತೀ ಕೆಟ್ಟ ಆಟಗಾರರು. ಈ ಇಬ್ಬರನ್ನೂ ಮುಂದಿನ ವರ್ಷ ತಂಡದಿಂದ ಕೈಬಿಡಿ ಎಂದು ಮನವಿ ಮಾಡುವುದರ ಮೂಲಕ ತಮ್ಮ ಆಕ್ರೋಶವನ್ನು ಟ್ವೀಟ್ ಮೂಲಕ ಹೊರಹಾಕಿದ್ದಾರೆ.

ಸಿರಾಜ್ ರಾಜಸ್ಥಾನ್ ರಾಯಲ್ಸ್ ತಂಡದ ಪಂದ್ಯ ಶ್ರೇಷ್ಠ ಆಟಗಾರ
ಇನ್ನು ಈ ಪಂದ್ಯದ ಪವರ್ ಪ್ಲೇನಲ್ಲಿ 2 ಓವರ್ ಬೌಲಿಂಗ್ ಮಾಡಿ ಕಳಪೆ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮತ್ತೊರ್ವ ನೆಟ್ಟಿಗ ಹೆಚ್ಚು ರನ್ ಬಿಟ್ಟುಕೊಡುವುದರ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವಿಗೆ ಪರೋಕ್ಷವಾಗಿ ಸಹಕರಿಸಿದ ಮೊಹಮ್ಮದ್ ಸಿರಾಜ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಲ್ಲಬೇಕು ಎಂದು ಟ್ವೀಟ್ ಮಾಡುವ ಮೂಲಕ ಕಾಲೆಳೆದಿದ್ದಾರೆ


Click it and Unblock the Notifications












