ಮುಂದಿನ ನಾಯಕನಿಗಾಗಿ ಟೀಮ್ ಇಂಡಿಯಾ ಹುಡುಕಲಿದೆ
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತಾಗಿ ಮಾತನಾಡಿರುವ ರವಿಶಾಸ್ತ್ರಿ ವಿರಾಟ್ ಕೊಹ್ಲಿ ಇನ್ನುಮುಂದೆ ನಾಯಕನಲ್ಲ, ಸದ್ಯ ನಾಯಕನಾಗಿರುವ ರೋಹಿತ್ ಶರ್ಮಾ ಉತ್ತಮ ನಾಯಕ, ಅದರಲ್ಲಿಯೂ ಸೀಮಿತ ಓವರ್ ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ ಓರ್ವ ಅತ್ಯದ್ಭುತ ನಾಯಕ ಎಂದಿದ್ದು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಟಗಾರರು ರೋಹಿತ್ ಶರ್ಮಾ ನಂತರ ತಂಡವನ್ನು ಮುನ್ನಡೆಸಲು ಯಾರು ಸೂಕ್ತ ಎಂಬುದನ್ನು ಆರಿಸಲಿದೆ ಎಂದಿದ್ದಾರೆ.
ಈ ಮೂವರ ಮೇಲಿದೆ ಕಣ್ಣು
ಇನ್ನೂ ಮುಂದುವರೆದು ಮಾತನಾಡಿರುವ ರವಿಶಾಸ್ತ್ರಿ ಶ್ರೇಯಸ್ ಐಯ್ಯರ್, ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಮೇಲೆ ಟೀಮ್ ಇಂಡಿಯಾ ಆಯ್ಕೆಗಾರರು ಕಣ್ಣಿಡಲಿದ್ದಾರೆ ಎಂದಿದ್ದಾರೆ. ಹಾಗೂ ಈ ಬಾರಿಯ ಐಪಿಎಲ್ ಟೂರ್ನಿ ಆಯ್ಕೆಗಾರರಿಗೆ ಟೀಮ್ ಇಂಡಿಯಾದ ಮುಂದಿನ ನಾಯಕನನ್ನು ಆರಿಸಲು ಸರಿಯಾದ ಅವಕಾಶವಾಗಿದ್ದು, ಈ ಅವಕಾಶವನ್ನು ಆಯ್ಕೆಗಾರರು ಸದುಪಯೋಗ ಮಾಡಿಕೊಳ್ಳಬೇಕು ಎಂದು ರವಿಶಾಸ್ತ್ರಿ ಹೇಳಿದ್ದಾರೆ.
ಇದು ಐಪಿಎಲ್ನ ಸುಂದರತೆ
ಇನ್ನು ಐಪಿಎಲ್ ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಸಿಕೊಡಲಿದೆ ಎನ್ನುವುದರ ಕುರಿತು ಮಾತನಾಡಿರುವ ರವಿಶಾಸ್ತ್ರಿ ಐಪಿಎಲ್ ಟೂರ್ನಿಯೊಂದು ಆರಂಭವಾಗುವುದಕ್ಕೂ ಮುನ್ನ ಜನರಿಗೆ ಯಾರೆಂದೇ ತಿಳಿದಿರದ ಆಟಗಾರ ಆ ಟೂರ್ನಿ ಮುಕ್ತಾಯದ ನಂತರ ಸ್ಟಾರ್ ಆಗಿ ನಿಲ್ಲುತ್ತಾನೆ ಮತ್ತು ಅಂತಹ ಆಟಗಾರರ ಕುರಿತು ಮಾತನಾಡಲು ಆರಂಭಿಸುತ್ತಾರೆ, ಇದು ಐಪಿಎಲ್ನ ಸುಂದರತೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ. ಈ ವೇಳೆ ವೆಂಕಟೇಶ್ ಐಯ್ಯರ್ನನ್ನು ಉದಾಹರಣೆಯಾಗಿ ತೆಗೆದುಕೊಂಡ ರವಿಶಾಸ್ತ್ರಿ ಕಳೆದ ಬಾರಿಯ ಐಪಿಎಲ್ನಲ್ಲಿ ಮಿಂಚಿದ ಈತ ನಂತರ ಅಂತರರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಎಂದು ಹೊಗಳಿದ್ದಾರೆ.