
ಐಪಿಎಲ್ನಲ್ಲಿ ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ಸತತ ಸೋಲಿನಿಂದ ಹಿನ್ನಡೆ ಅನುಭವಿಸುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಈ ಪಂದ್ಯ ಬಹಳ ಮಹತ್ವದ್ದಾಗಿದ್ದು ಸೋಲಿನ ಸುಳಿಯಿಂದ ಹೊರಬರಲಿದೆಯೇ ಎಂಬುದು ಕುತೂಹಲ ಮೂಡಿಸಿದೆ. ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್/ ನಾಯಕ), ಕರುಣ್ ನಾಯರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್
ಬೆಂಚ್: ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಓಬೇದ್ ಮೆಕಾಯ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಅನುನಯ್ ಸಿಂಗ್, ಧ್ರುವ್ ಜುರೆಲ್, ಶುಭಂ ಗರ್ವಾಲ್, ಡೇರಿಲ್ ಮಿಚೆಲ್
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಆರನ್ ಫಿಂಚ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್ (ನಾಯಕ), ಬಾಬಾ ಇಂದ್ರಜಿತ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ರಿಂಕು ಸಿಂಗ್, ಉಮೇಶ್ ಯಾದವ್, ಟಿಮ್ ಸೌಥಿ, ಶಿವಂ ಮಾವಿ
ಬೆಂಚ್: ಅಜಿಂಕ್ಯ ರಹಾನೆ, ಮೊಹಮ್ಮದ್ ನಬಿ, ಸ್ಯಾಮ್ ಬಿಲ್ಲಿಂಗ್ಸ್, ಪ್ಯಾಟ್ ಕಮಿನ್ಸ್, ಶೆಲ್ಡನ್ ಜಾಕ್ಸನ್, ಚಾಮಿಕಾ ಕರುಣಾರತ್ನೆ, ಪ್ರಥಮ್ ಸಿಂಗ್, ಅಭಿಜಿತ್ ತೋಮರ್, ವರುಣ್ ಚಕ್ರವರ್ತಿ, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್, ವೆಂಕಟೇಶ್ ಅಯ್ಯರ್, ಹರ್ಷಿತ್ ರಾಣಾ
ಐಪಿಎಲ್ 15ನೇ ಆವೃತ್ತಿಯಲ್ಲಿ ಸೋಮವಾರ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ಸತತ ಸೋಲಿನಿಂದ ಆಘಾತಕ್ಕೆ ಒಳಗಾಗಿರುವ ಕೆಕೆಆರ್ ತಂಡ ಮತ್ತೆ ಗೆಲುವಿನ ಲಯಕ್ಕೆ ಮರಳುವ ಪ್ರಯತ್ನ ಆರಂಭಿಸಿದೆ. ಸತತ ಐದು ಸೋಲು ಕಂಡಿರುವ ಶ್ರೇಯಸ್ ಐಯ್ಯರ್ ಪಡೆ ಆರ್ಆರ್ ವಿರುದ್ಧ ಗೆಲುವು ಸಾಧಿಸಲಿದೆಯಾ ಎಂಬುದು ಕುತೂಹಲ ಮೂಡಿಸಿದೆ.
ಇತ್ತ ರಾಜಸ್ಥಾನ್ ರಾಯಲ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಮುನ್ನುಗ್ಗುತ್ತಿದೆ. ಆದರೆ ಕೊನೆಯ ಪಂದ್ಯದಲ್ಲಿ ಸಂಜು ಪಡೆ ಮುಂಬೈ ಇಂಡಿಯನ್ಸ್ ವಿರುದ್ಧ ಅನುಭವಿಸಿದ ಸೋಲು ತಂಡಕ್ಕೆ ಆಘಾತ ನೀಡಿದೆ. ಹೀಗಾಗಿ ಮತ್ತೆ ಗೆಲುವಿನ ಓಟ ಮುಂದುವರಿಸುವ ಆತ್ಮ ವಿಶ್ವಾಸದಲ್ಲಿದೆ ರಾಜಸ್ಥಾನ್ ರಾಯಲ್ಸ್ ತಂಡ.