ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಲಕ್ನೋ
ಈ ಬಾರಿಯ ಐಪಿಎಲ್ನಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಎರಡು ತಂಡಗಳ ಪೈಕಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ ಒಂದು. ಲೀಗ್ ಹಂತದುದ್ದಕ್ಕೂ ಅದ್ಭುತ ಪ್ರದರ್ಶಣ ನೀಡಿದ್ದ ಲಕ್ನೋ ಸೂಒರ್ ಜೈಂಟ್ಸ್ ತಂಡ ಎರಡನೇ ತಂಡವಾಗಿ ಫ್ಲೇಆಫ್ಗೆ ಸೇರ್ಪಡೆಯಾಗಲಿದೆ ಎಂದೇ ಬಹುತೇಕರು ಭಾವಿಸಿದ್ದರು. ಆದರೆ ನೆಟ್ ರನ್ರೇಟ್ನಲ್ಲಿ ಹಿಂದುಳಿದ ಕಾರಣದಿಂದಾಗಿ ಮೂರನೇ ಸ್ಥಾನಿಯಾಗಿ ಪ್ಲೇಆಫ್ಗೆ ಪ್ರವೇಶ ಪಡೆದುಕೊಂಡಿತ್ತು. ಹೀಗಾಗಿ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಎದುರಿಸಿ ಸೋಲು ಅನುಭವಿಸುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ.
ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಗಂಭೀರ್ ಹೇಳಿದ್ದೇನು?
ರಾಯಲ್ ಚಾಲೆಂಜರ್ಸ್ ವಿರುದ್ಧ ಸೋಲು ಅನುಭವಿಸಿ ಟೂರ್ನಿಯಿಂದ ಹೊರಬಿದ್ದ ಬಳಿಕ ಗೌತಮ್ ಗಂಭೀರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. "ಇಂದು ಅದೃಷ್ಟ ನಮ್ಮೊಂದಿಗೆ ಇರಲಿಲ್ಲ. ಆದರೆ ಹೊಸ ತಂಡವಾಗಿ ನಮಗೆ ಇದು ಅದ್ಭುತವಾದ ಟೂರ್ನಮೆಂಟ್ ಆಗಿತ್ತು. ನಾವು ಮತ್ತೊಮ್ಮೆ ಟೂರ್ನಿಗೆ ಮರಳುವಾಗ ಖಂಡಿತಾ ಬಲಿಷ್ಠವಾಗಿ ಹಿಂದಿರುತ್ತೇವೆ" ಎಂದಿದ್ದಾರೆ ಗೌತಮ್ ಗಂಭೀರ್.
ಲಕ್ನೋ ತಂಡಕ್ಕೆ ಗಂಭೀರ್ ಬಲ
ಇನ್ನು ಈ ಬಾರಿಯ ಟೂರ್ನಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಮೆಂಟರ್ ಆಗಿ ಕಾರ್ಯ ನಿರ್ವಹಿಸಿರುವ ಗೌತಮ್ ಗಂಭೀರ್ ಹೆಡ್ ಕೋಚ್ ಆಂಡಿ ಫ್ಲವರ್, ನಾಯಕ ಕೆಎಲ್ ರಾಹುಲ್ ಅವರೊಂದಿಗೆ ತಂಡಕ್ಕೆ ಆಧಾರ ಸ್ಥಂಭವಾಗಿದ್ದರು. ಹರಾಜಿನಲ್ಲಿ ಆಟಗಾರರ ಆಯ್ಕೆಯಿಂದ ಹಿಡಿದು ಡ್ರೆಸ್ಸಿಂಗ್ ರೂಮ್ನಲ್ಲಿ ಉತ್ತಮ ವಾತಾವರಣ ಸೃಷ್ಟಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು ಗಂಭೀರ್.
|
ಸೋತ ಬಳಿಕ ನಾಯಕನೊಂದಿಗೆ ಗಂಭೀರ ಚರ್ಚೆ
ಇನ್ನು ಬುಧವಾರ ನಡೆದ ಪ್ಲೇಆಫ್ ಪಂದ್ಯದಲ್ಲಿ ಸೋಲು ಅನುಭವಿಸಿದ ಬಳಿಕ ಗೌತನ್ ಗಂಭೀರ್ ಸಾಕಷ್ಟು ಅಸಮಾಧಾನಗೊಂಡಿದ್ದು ಕಂಡುಬಂದಿತ್ತು. ಬುಧವಾರ ನಡೆದ ಪಂದ್ಯದಲ್ಲಿ ಆರ್ಸಿಬಿ ನೀಡಿದ್ದ 208 ರನ್ಗಳನ್ನು ಬೆನ್ನಟ್ಟುವಲ್ಲಿ ವಿಫಲವಾದ ಬಳಿಕ ಗೌತಮ್ ಗಂಭೀರ್ ನಾಯಕ ಕೆಎಲ್ ರಾಹುಲ್ ಜೊತೆಗೆ ಗಂಭೀರ ಮಾತುಕತೆಯಲ್ಲಿ ತೊಡಗಿರುವುದು ಕಂಡುಬಂದಿತ್ತು. ಈ ಪಂದ್ಯದಲ್ಲಿ ಕೆಎಲ್ ರಾಹುಲ್ 58 ಎಸೆತಗಳಲ್ಲಿ 79 ರನ್ಗಳಿಸುವ ಮೂಲಕ ತಂಡಕ್ಕೆ ಮಹತ್ವದ ಕೊಡುಗೆ ನೀಡಿದರು. ಆದರೆ ತಂಡವನನ್ಉ ಗೆಲುವಿನ ದಡ ತಲುಪಿಸುವಲ್ಲಿ ಅವರು ವಿಫಲವಾದರು.