
ಮುಂದಿನ ವರ್ಷ ಜಡೇಜಾ ಸಿಎಸ್ಕೆ ಪರ ಕಣಕ್ಕಿಳಿಯುತ್ತಾರಾ?
ಜಡೇಜಾ ಮುಂದಿನ ವರ್ಷದ ನಮ್ಮ ಯೋಜನೆಯಲ್ಲಿಯೂ ಇದ್ದಾರೆ ಎಂದಿರುವ ಕಾಶಿ ವಿಶ್ವನಾಥನ್ ಜಡ್ಡು ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಜಡೇಜಾ ಕುರಿತು ಹರಿದಾಡುತ್ತಿರುವ ಸುದ್ದಿಗಳಾವುದೂ ನಿಜವಲ್ಲ ಜಡೇಜಾ ಮತ್ತು ಸಿಎಸ್ಕೆ ಮ್ಯಾನೇಜ್ಮೆಂಟ್ ನಡುವೆ ಯಾವುದೇ ಮನಸ್ತಾಪಗಳಿಲ್ಲ ಎಂದು ಕಾಶಿ ವಿಶ್ವನಾಥನ್ ಸ್ಪಷ್ಟನೆ ನೀಡಿದ್ದಾರೆ.

ಜಡೇಜಾ ಅನ್ಫಾಲೋ ಬಗ್ಗೆ ಕಾಶಿ ವಿಶ್ವನಾಥನ್ ಹೇಳಿದ್ದಿಷ್ಟು
ಜಡೇಜಾ ಟೂರ್ನಿಯಿಂದ ಹೊರಬೀಳುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಜಡೇಜಾರನ್ನು ಅನ್ಫಾಲೋ ಮಾಡಿರುವ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬಿತ್ತು. ಹೀಗಾಗಿ ಜಡೇಜಾ ಮುಂದಿನ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವುದು ಅನುಮಾನ ಎಂಬ ಅಭಿಪ್ರಾಯಗಳು ವ್ಯಕ್ತವಾದವು. ಈ ಕುರಿತು ಪ್ರತಿಕ್ರಿಯಿಸಿರುವ ಕಾಶಿ ವಿಶ್ವನಾಥನ್ ಸಾಮಾಜಿಕ ಜಾಲತಾಣದಲ್ಲಿ ನಾನು ಇಲ್ಲ, ಅಲ್ಲಿ ಏನಾಗುತ್ತಿದೆಯೋ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿಕೆ ನೀಡಿ ಅನ್ಫಾಲೋ ಕುರಿತು ಎದ್ದಿದ್ದ ಸುದ್ದಿಯನ್ನು ತಳ್ಳಿಹಾಕಿದರು.

ಈ ಬಾರಿಯ ಐಪಿಎಲ್ನಲ್ಲಿ ಜಡೇಜಾ ಕಳಪೆ
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರವೀಂದ್ರ ಜಡೇಜಾ 8 ಪಂದ್ಯಗಳಲ್ಲಿ ನಾಯಕನಾಗಿ ಕಣಕ್ಕಿಳಿದು, ಉಳಿದ ಪಂದ್ಯಗಳಲ್ಲಿ ಕೇವಲ ಆಟಗಾರನಾಗಿ ಕಣಕ್ಕಿಳಿದಿದ್ದಾರೆ. ಇನ್ನು ಒಟ್ಟು ಹತ್ತು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿದಿರುವ ರವೀಂದ್ರ ಜಡೇಜಾ ಕೇವಲ 116 ರನ್ ಕಲೆಹಾಕಿದ್ದಾರೆ. ಇನ್ನು ಆಲ್ರೌಂಡರ್ ಆಟಗಾರನಾದ ಜಡೇಜಾ ಕೇವಲ 5 ವಿಕೆಟ್ ಪಡೆದಿದ್ದಾರೆ.


Click it and Unblock the Notifications
