ಈ 4 ಆಟಗಾರರನ್ನು ಚೆನ್ನೈ ಸೂಪರ್ ಕಿಂಗ್ಸ್ ರಿಟೇನ್ ಮಾಡಿಕೊಳ್ಳಲಿದೆ ಎಂದ ಗಂಭೀರ್
ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಫ್ರಾಂಚೈಸಿಯೊಂದು ಗರಿಷ್ಠ 4 ಆಟಗಾರರನ್ನು ರಿಟೇನ್ ಮಾಡಿಕೊಳ್ಳುವ ಅನುಮತಿ ಪಡೆದುಕೊಂಡಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಋತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಫಾಫ್ ಡು ಪ್ಲೆಸಿಸ್ ಮತ್ತು ಸ್ಯಾಮ್ ಕರನ್ ಈ 4 ಆಟಗಾರರನ್ನು ಉಳಿಸಿಕೊಳ್ಳಲಿದೆ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿಕೆ ನೀಡಿದ್ದಾರೆ.
ಚೆನ್ನೈ ಫ್ರಾಂಚೈಸಿಯ ಮೊದಲನೇ ಆಯ್ಕೆಯನ್ನೇ ಕಡೆಗಣಿಸಿದ ಗಂಭೀರ್!
ಆಟಗಾರರನ್ನು ಉಳಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ನಮ್ಮ ಮೊದಲನೇ ಆಯ್ಕೆ ಎಂಎಸ್ ಧೋನಿ ಅವರೇ ಆಗಿರುತ್ತಾರೆ ಎಂದು ಸ್ವತಃ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯೇ ಈ ಹಿಂದೆ ಖಚಿತಪಡಿಸಿತ್ತು. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಎಂಎಸ್ ಧೋನಿ ಅವರನ್ನು ರೀಟೈನ್ ಮಾಡಿಕೊಳ್ಳುವುದು ಶತಾಯಗತಾಯ ಖಚಿತ ಎಂದು ಹೇಳಬಹುದು. ಆದರೆ ಈ ವಿಷಯ ತಿಳಿದಿದ್ದರೂ ಕೂಡ ಗೌತಮ್ ಗಂಭೀರ್ ಎಂಎಸ್ ಧೋನಿ ಅವರ ಹೆಸರನ್ನು ಕೈಬಿಟ್ಟು ಬೇರೆ 4 ಆಟಗಾರರ ಹೆಸರನ್ನು ತೆಗೆದುಕೊಂಡಿರುವುದು ಸದ್ಯ ಮತ್ತೊಂದಷ್ಟು ಚರ್ಚೆಗಳಿಗೆ ಕಾರಣವಾಗಿದೆ.
ಮೂಲಗಳ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ಉಳಿಸಿಕೊಳ್ಳಲಿರುವ 4 ಆಟಗಾರರು
ಇನ್ನು ಬಲ್ಲ ಮೂಲಗಳ ಪ್ರಕಾರ ಚೆನ್ನೈ ಸೂಪರ್ ಕಿಂಗ್ ಫ್ರಾಂಚೈಸಿ ರವೀಂದ್ರ ಜಡೇಜಾ, ಎಂಎಸ್ ಧೋನಿ, ರುತುರಾಜ್ ಗಾಯಕ್ವಾಡ್ ಮತ್ತು ಮೊಯಿನ್ ಅಲಿ ಈ 4 ಆಟಗಾರರನ್ನು ರಿಟೇನ್ ಮಾಡಿಕೊಳ್ಳಲಿದೆ ಎನ್ನಲಾಗುತ್ತಿದೆ.