
ಈ ತಂಡ ಗೆಲ್ಲಲಿದೆ
ಇಂದಿನ ಪಂದ್ಯದ ಕುರಿತು ಮಾತನಾಡಿದ ಸಂಜಯ್ ಮಂಜ್ರೇಕರ್ ಎರಡೂ ತಂಡಗಳೂ ಬಲಿಷ್ಟವಾಗಿದ್ದರೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದೊಡ್ಡ ಪಂದ್ಯಗಳಲ್ಲಿ ಅಬ್ಬರಿಸಬಲ್ಲ ಆಟಗಾರರನ್ನು ಒಳಗೊಂಡಿದೆ ಎಂದಿದ್ದಾರೆ. ಹೀಗಾಗಿಯೇ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿ ಫೈನಲ್ ಪಂದ್ಯಕ್ಕೆ ಲಗ್ಗೆ ಇಡಲಿದೆ ಎಂಬ ವಿಶ್ವಾಸವನ್ನು ಸಂಜಯ್ ಮಂಜ್ರೇಕರ್ ಹೊರಹಾಕಿದ್ದಾರೆ.

ರಾಜಸ್ಥಾನ್ ರಾಯಲ್ಸ್ಗೆ ಈ ಆಟಗಾರನದ್ದೇ ಹಿನ್ನಡೆ
ಇನ್ನೂ ಮುಂದುವರೆದು ಮಾತನಾಡಿರುವ ಸಂಜಯ್ ಮಂಜ್ರೇಕರ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಹಿನ್ನಡೆಯುಂಟುಮಾಡಬಹುದು ಎಂದು ಊಹಿಸಿದ್ದಾರೆ. ಫ್ಲಾಟ್ ಪಿಚ್ ಆದ ಕಾರಣ ರವಿಚಂದ್ರನ್ ಅಶ್ವಿನ್ ಎಸೆತಗಳು ತಂಡಕ್ಕೆ ತೊಂದರೆಯನ್ನು ಉಂಟುಮಾಡಬಹುದು ಎಂದಿರುವ ಮಂಜ್ರೇಕರ್ ಪಿಚ್ ಸ್ಪಿನ್ನರ್ಗಳಿಗೆ ಅನುಕೂಲವಾಗಿದ್ದರೆ ಅಶ್ವಿನ್ ಡೇಂಜರಸ್ ಆಗಲಿದ್ದಾರೆ ಎಂದಿದ್ದಾರೆ ಹಾಗೂ ಅಶ್ವಿನ್ ಮತ್ತು ಚಹಲ್ ಜೋಡಿ ಎದುರಾಳಿಗಳಿಗೆ ಕಂಟಕವಾಗಬಹುದು ಎಂದೂ ಸಹ ಮಂಜ್ರೇಕರ್ ಹೇಳಿಕೆ ನೀಡಿದ್ದಾರೆ.

ಆರ್ಸಿಬಿ ಪರ ಬ್ಯಾಟ್ ಬೀಸಿದ್ದರು ರೈನಾ
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಬೇಕು ಎಂದು ಸುರೇಶ್ ರೈನಾ ತಮ್ಮ ಆಸೆಯನ್ನು ಮುಕ್ತಕಂಠದಿಂದ ಹೇಳಿದ್ದರು. ಐಪಿಎಲ್ ಉದ್ಘಾಟನಾ ಆವೃತ್ತಿಯಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸತತವಾಗಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿಗೋಸ್ಕರವಾದರೂ ಆರ್ಸಿಬಿ ಕಪ್ ಗೆಲ್ಲಬೇಕು ಎಂದು ಸುರೇಶ್ ರೈನಾ ಆಶಿಸಿದ್ದರು.


Click it and Unblock the Notifications












