
ಕಳೆದ ಮಾರ್ಚ್ ತಿಂಗಳ ಕೊನೆಯ ದಿನದಂದು ಆರಂಭಗೊಂಡಿದ್ದ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯ ಇಂದು ( ಮೇ 28 ) ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವೆ ಅಹ್ಮದಾಬಾದ್ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು.
ಆದರೆ ಅಹ್ಮದಾಬಾದ್ ನಗರದಲ್ಲಿ ವಿಪರೀತ ಮಳೆ ಬಂದ ಕಾರಣ ಈ ಪಂದ್ಯ ನಡೆಯದೇ ಇದ್ದು, ನಾಳೆಗೆ ಪಂದ್ಯ ಮುಂದೂಡಿಕೆಯಾಗಿದೆ. ಹೌದು, ಫೈನಲ್ ಪಂದ್ಯ ರದ್ದಾದರೆ ನಾಳೆ ಮೀಸಲು ದಿನವಾಗಿದ್ದು, ಪಂದ್ಯ ನಾಳೆಗೆ ಮುಂದೂಡಿಕೆಯಾಗಿದೆ.
ನಾಳೆ ( ಮೇ 29 ) ಸಂಜೆ 7.30ಕ್ಕೆ ಪಂದ್ಯ ಆರಂಭಗೊಳ್ಳಲಿದೆ. ಇಂದು ಪಂದ್ಯದ ನಿಗದಿತ ಸಮಯಕ್ಕಿಂತ ಮುನ್ನವೇ ಮಳೆ ಆರಂಭವಾದ ಕಾರಣ ಪಂದ್ಯದ ಟಾಸ್ ಕೂಡ ಜರುಗಲಿಲ್ಲ. ಅನೇಕ ಬಾರಿ ಮಳೆ ನಿಂತರೂ ಸಹ ಮತ್ತೆ ಮಳೆಯಾದ ಕಾರಣ ಪಂದ್ಯದ ಟಾಸ್ ಸಹ ನಡೆಯಲಿಲ್ಲ.
ತಂಡಗಳು:
ಗುಜರಾತ್ ಟೈಟಾನ್ಸ್ ತಂಡ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಶ್ರೀಕರ್ ಭರತ್, ಶಿವಂ ಮಾವಿ, ಒಡಿಯನ್ ಸ್ಮಿತ್, ರವಿ ಶ್ರೀನಿವಾಸನ್ ಸಾಯಿ ಕಿಶೋರ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಜಯಂತ್ ಯಾದವ್, ದಾಸುನ್ ಶನಕ, ಅಭಿನವ್ ಮನೋಹರ್, ಅಲ್ಜಾರಿ ಜೋಸೆಫ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್, ಯಶ್ ದಯಾಳ್
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಶಿವಂ ದುಬೆ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಎಂಎಸ್ ಧೋನಿ(ವಿಕೆಟ್ ಕೀಪರ್ ಹಾಗೂ ನಾಯಕ), ರವೀಂದ್ರ ಜಡೇಜಾ, ಮೊಯೀನ್ ಅಲಿ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮಥೀಶ ಪತಿರಣ, ಮಿಚೆಲ್ ಶಾಂತಾಂತರ್ ಸೇನಾಪತಿ, ಶೇಕ್ ರಶೀದ್, ಆಕಾಶ್ ಸಿಂಗ್, ಬೆನ್ ಸ್ಟೋಕ್ಸ್, ಡ್ವೈನ್ ಪ್ರಿಟೋರಿಯಸ್, ಸಿಸಂದಾ ಮಗಲಾ, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು