
ಎಬಿ ಡಿವಿಲಿಯರ್ಸ್ ಐಪಿಎಲ್ ಸಾಧನೆ ಬಗ್ಗೆ ಗೌತಮ್ ಗಂಭೀರ್ ಮಾತು
ಸ್ಟಾರ್ ಸ್ಪೋರ್ಟ್ಸ್ ಇತ್ತೀಚೆಗೆ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ಬ್ಯಾಟರ್ಗಳ ಸಮೀಕ್ಷೆಯನ್ನು ನಡೆಸಿತು. ಇದು ಕ್ರಿಕೆಟ್ ಅಭಿಮಾನಿಗಳು ಮತ್ತು ವಿಷಯದ ಕುರಿತು ತಮ್ಮದೇ ಆದ ಅಭಿಪ್ರಾಯಗಳನ್ನು ನೀಡಿದ ಕ್ರಿಕೆಟ್ ತಜ್ಞರ ನಡುವೆ ಚರ್ಚೆಯನ್ನು ಉಂಟುಮಾಡಿದೆ. ಆರ್ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರ ಹೆಸರನ್ನು ಉಲ್ಲೇಖಿಸುವುದು ಅನಿವಾರ್ಯವಾಗಿದೆ.
ಎರಡು ಐಪಿಎಲ್ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಅವರು, ದಕ್ಷಿಣ ಆಫ್ರಿಕಾ ಕ್ರಿಕೆಟಿಗ ವೈಯಕ್ತಿಕ ಸಾಧನೆಗಳನ್ನು ಮಾತ್ರ ಮಾಡಬಹುದು. ಎಬಿ ಡಿವಿಲಿಯರ್ಸ್ ತಮ್ಮ ಹೆಚ್ಚಿನ ಪಂದ್ಯಗಳನ್ನು ಬೆಂಗಳೂರಿನ ಬ್ಯಾಟಿಂಗ್ ಸ್ನೇಹಿ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ್ದಾರೆ ಎಂದು ಗಂಭೀರ್ ತಿಳಿಸಿದ್ದಾರೆ.
"ಎಬಿ ಡಿವಿಲಿಯರ್ಸ್ ಐಪಿಎಲ್ನಲ್ಲಿ ವೈಯಕ್ತಿಕ ದಾಖಲೆಗಳನ್ನು ಮಾತ್ರ ಮಾಡಿದ್ದಾರೆ. ಹೆಚ್ಚಿನ ಪಂದ್ಯಗಳನ್ನು ತಮ್ಮ ನೆಚ್ಚಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ್ದಾರೆ. ಅಲ್ಲಿ ಯಾರು ಬೇಕಾದರೂ ರನ್ ಗಳಿಸಬಹುದು," ಎಂದು ಗೌತಮ್ ಗಂಭೀರ್ ಸ್ಟಾರ್ಸ್ಪೋರ್ಟ್ಸ್ಗೆ ಹೇಳಿದ್ದಾರೆ.
ಎಬಿ ಡಿವಿಲಿಯರ್ಸ್ ಕುರಿತ ಗೌತಮ್ ಗಂಭೀರ್ ಅವರ ಹೇಳಿಕೆ ಆರ್ಸಿಬಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಭಾರತದ ಮಾಜಿ ಕ್ರಿಕೆಟಿಗನನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಕುರಿತ ಅಪಸ್ವರ
2019ರ ಐಪಿಎಲ್ಗೂ ಮುನ್ನ ವಿರಾಟ್ ಕೊಹ್ಲಿಯನ್ನು ಗೌತಮ್ ಗಂಭೀರ್ ಹಲವು ಬಾರಿ ಟೀಕಿಸಿದ್ದಾರೆ. ಆಗ ಹಲವು ವರ್ಷಗಳಿಂದ ಆರ್ಸಿಬಿ ತಂಡವನ್ನು ಮುನ್ನಡೆಸುತ್ತಿದ್ದ ವಿರಾಟ್ ಕೊಹ್ಲಿ, ಐಪಿಎಲ್ ಟ್ರೋಫಿ ಗೆಲ್ಲುವಲ್ಲಿ ವಿಫಲರಾಗಿದ್ದರು. ಕೊಹ್ಲಿ ಅತ್ಯಂತ ಅದೃಷ್ಟಶಾಲಿಯಾಗಿದ್ದಾರೆ, ಏಕೆಂದರೆ ಎಂದಿಗೂ ಬಿಟ್ಟುಕೊಡದ ಆರ್ಸಿಬಿ ಫ್ರಾಂಚೈಸಿಗೆ ವಿರಾಟ್ ಕೊಹ್ಲಿ ಕೃತಜ್ಞರಾಗಿರಬೇಕು ಎಂದು ಮಾಜಿ ಟೆಸ್ಟ್ ಕ್ರಿಕೆಟಿಗ ಗೌತಮ್ ಗಂಭೀರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.
"ಅಂತಿಮವಾಗಿ ಐಪಿಎಲ್ ಟ್ರೋಫಿಯನ್ನು ಗೆಲ್ಲುವವರೆಗೆ ನಾಯಕನು ಆಟಗಾರನಾಗಿಯಷ್ಟೇ ಉತ್ತಮನಾಗಿರುತ್ತಾನೆ. ನಾಲ್ಕಕ್ಕಿಂತ ಗೆಚ್ಚು ಬಾರಿ ಟ್ರೋಫಿ ಗೆದ್ದ ಎಂಎಸ್ ಧೋನಿ ಮತ್ತು ರೋಹಿತ್ ಶರ್ಮಾ ಇದ್ದಾರೆ. ಅವರು ಇನ್ನೂ ಸಾಕಷ್ಟು ದೂರ ಸಾಗಬೇಕಿದೆ ಎಂದು ನಾನು ಭಾವಿಸುತ್ತೇನೆ," ಎಂದು ಗಂಭೀರ್ ತಿಳಿಸಿದರು.

ಆರ್ಸಿಬಿ vs ಕೆಕೆಆರ್ ಪೈಪೋಟಿ
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈವರೆಗೆ ಎರಡು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿರುವುದರಿಂದ, ಎರಡು ತಂಡಗಳ ನಡುವೆ ಯಾವುದೇ ವಿಶೇಷ ಪೈಪೋಟಿ ಇಲ್ಲ ಎಂದು 2020ರಲ್ಲಿ ಕೆಕೆಆರ್-ಆರ್ಸಿಬಿ ಪಂದ್ಯಕ್ಕೆ ಮುನ್ನ ಗೌತಮ್ ಗಂಭೀರ್ ಹೇಳಿದ್ದರು. ನಂತರ ಆರ್ಸಿಬಿ ತಂಡ 8 ವಿಕೆಟ್ಗಳಿಂದ ಕೆಕೆಆರ್ ತಂಡವನ್ನು ಸೋಲಿಸಿದ ನಂತರ ಆರ್ಸಿಬಿ ಅಭಿಮಾನಿಗಳು ಗಂಭೀರ್ ಅವರನ್ನು ಅಪಹಾಸ್ಯ ಮಾಡಿದ್ದರು.
ಕೆಕೆಆರ್ ಪ್ರದರ್ಶನ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮತ್ತು ಮೀಮ್ಸ್ಗಳ ಮೂಲಕ ತೀವ್ರ ಆಕ್ರೋಶ ವ್ಯಕ್ತವಾದ ಕಾರಣ ಗೌತಮ್ ಗಂಭೀರ್ ಅವರ ಮಾತುಗಳು ಅವರಿಗೇ ತಿರುಗುಬಾಣವಾಗಿದ್ದವು.


Click it and Unblock the Notifications
