
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಟೂರ್ನಿಯ 33ನೇ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಎಂಎಸ್ ಧೋನಿ ನೇತೃತ್ವದ KKR ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ CSK ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಎಂಎಸ್ ಧೋನಿ ನೇತೃತ್ವದ ಸಿಎಸ್ಕೆ ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಹ್ಯಾಟ್ರಿಕ್ ಗೆಲುವಿನತ್ತ ಚಿತ್ತ ನೆಟ್ಟಿದೆ. ಈವರೆಗೆ ಆಡಿರುವ 6 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿರುವ ಸಿಎಸ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವನ್ನು ಕೂಡ ಹೊಂದಿದೆ. ಹಾಗಾಗಿ ಧೋನಿ ಬಳಗ ಅದರತ್ತ ಚಿತ್ತಹರಿಸಲಿದೆ.
ಆದರೆ ಇತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಥಿತಿ ಹೀನಾಯವಾಗಿದೆ. ಕಳೆದ ಮೂರು ಪಂದ್ಯಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಸೋಲು ಅನುಭವಿಸಿದ್ದು ಈ ಸೋಲಿನ ಸುಳಿಯಿಂದ ಹೊರಗೆ ಬರಲು ನಿತೀಶ್ ರಾಣಾ ಪಡೆ ಈ ಪಂದ್ಯದಲ್ಲಿ ಸರ್ವ ಪ್ರಯತ್ನ ಪಡಲಿದೆ. ಕೆಕೆಆರ್ ತಂಡ ಆಡಿರುವ ಆರು ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಮಾತ್ರ ಸಾಧಿಸಿದ್ದು ನಾಲ್ಕು ಸೋಲು ಅನುಭವಿಸಿ ಸಂಕಷ್ಟದ ಸ್ಥಿತಿಯಲ್ಲಿದೆ.
ಕೊಲ್ಕತ್ತಾ ನಟ್ ರೈಡರ್ಸ್: ಎನ್ ಜಗದೀಸನ್ (ವಿಕೆಟ್ ಕೀಪರ್), ಜೇಸನ್ ರಾಯ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಸುಯಶ್ ಶರ್ಮಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಬೆಂಚ್: ವೆಂಕಟೇಶ್ ಅಯ್ಯರ್, ಮನ್ದೀಪ್ ಸಿಂಗ್, ಅನುಕುಲ್ ರಾಯ್, ವೈಭವ್ ಅರೋರಾ, ಲಿಟ್ಟನ್ ದಾಸ್, ಟಿಮ್ ಸೌಥಿ, ಶಾರ್ದೂಲ್ ಠಾಕೂರ್,
ಲಾಕಿ ಫರ್ಗುಸನ್, ರಹಮಾನುಲ್ಲಾ ಗುರ್ಬಾಜ್, ಹರ್ಷಿತ್ ರಾಣಾ, ಆರ್ಯ ದೇಸಾಯಿ
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಥೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
ಬೆಂಚ್: ಆಕಾಶ್ ಸಿಂಗ್, ಡ್ವೈನ್ ಪ್ರಿಟೋರಿಯಸ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆರ್ ಎಸ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಅಜಯ್ ಜಾದವ್ ಮಂಡಲ್, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಭಗತ್ ವರ್ಮಾ, ನಿಶಾಂತ್ ಸಿಂಧು