ಮುಂಬೈ ಇಂಡಿಯನ್ಸ್ ತಂಡದಿಂದ ಕಠಿಣ ನಿರ್ಧಾರ
ಐಪಿಎಲ್ನಲ್ಲಿ ಅತ್ಯಂತ ಯಶಸ್ವಿ ಫ್ರಾಂಚೈಸಿಯಾದ ಮುಂಬೈ ಇಂಡಿಯನ್ಸ್ 2022 ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡಿತ್ತು. 5 ಬಾರಿ ಚಾಂಪಿಯನ್ ಪಟ್ಟ ಅಲಂಕಿರಿಸಿರುವ ಅವರು, ಕಳೆದ ಐಪಿಎಲ್ನಲ್ಲಿ 10ನೇ ಸ್ಥಾನವನ್ನು ಪಡೆದು ಮುಖಭಂಗ ಅನುಭವಿಸಿದ್ದರು.
ಮುಂಬೈ ಇಂಡಿಯನ್ಸ್ ಒಟ್ಟು 10 ಆಟಗಾರರನ್ನು ಉಳಿಸಿಕೊಂಡಿದ್ದು, 5 ಆಟಗಾರರನ್ನು ಬಿಡುಗಡೆ ಮಾಡಿದೆ. ಮೂಲಗಳ ಪ್ರಕಾರ, ರೋಹಿತ್ ಶರ್ಮಾ, ಡೆವಾಲ್ಡ್ ಬ್ರೂವಿಸ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಡೇನಿಯಲ್ ಸಾಮ್ಸ್, ಟಿಮ್ ಡೇವಿಡ್, ಜೋಫ್ರಾ ಆರ್ಚರ್, ಜಸ್ಪ್ರೀತ್ ಬುಮ್ರಾ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ತಿಲಕ್ ವರ್ಮಾ ಅವರನ್ನು ಉಳಿಸಿಕೊಳ್ಳಲಾಗಿದೆ.
ಫ್ಯಾಬಿಯನ್ ಅಲೆನ್, ಕೀರಾನ್ ಪೊಲಾರ್ಡ್, ಟೈಮಲ್ ಮಿಲ್ಸ್, ಮಯಾಂಕ್ ಮಾರ್ಕಾಂಡೆ ಮತ್ತು ಹೃತಿಕ್ ಶೌಕಿನ್ ಅವರನ್ನು ಬಿಡುಗಡೆ ಮಾಡಲಾಗಿದೆ.
ಮುಂದಿನ T20 ವಿಶ್ವಕಪ್ನಲ್ಲಿ ಭಾರತ ತಂಡದಲ್ಲಿ ಈ ಮುಖಗಳನ್ನ ನೋಡಲು ಬಯಸುವುದಿಲ್ಲ: ವೀರೇಂದ್ರ ಸೆಹ್ವಾಗ್
ಸಿಎಸ್ಕೆ ತಂಡದಲ್ಲೇ ಉಳಿಯಲಿದ್ದಾರೆ ರವೀಂದ್ರ ಜಡೇಜಾ
ಐಪಿಎಲ್ 2022ರಲ್ಲಿ ಸಿಎಸ್ಕೆ ತಂಡಕ್ಕೆ ಧೋನಿ ಬದಲಾಗಿ ರವೀಂದ್ರ ಜಡೇಜಾರನ್ನು ನೇಮಕ ಮಾಡಲಾಗಿತ್ತು. ಜಡೇಜಾ ನಾಯಕತ್ವದಲ್ಲಿ ತಂಡ ಕಳಪೆ ಪ್ರದರ್ಶನ ನೀಡಿದ ನಂತರ, ಪಂದ್ಯಾವಳಿಯ ಮಧ್ಯದಲ್ಲೇ ಜಡೇಜಾ ಗಾಯದ ಕಾರಣದಿಂದ ಹೊರಗುಳಿದರು, ನಾಯಕನ ಸ್ಥಾನಕ್ಕೆ ಧೋನಿಯವರನ್ನು ನೇಮಿಸಲಾಗಿತ್ತು. ಆದರೂ, 2022ರಲ್ಲಿ ಸಿಎಸ್ಕೆ ಆಡಿದ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳನ್ನು ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಯಿತು.
ಅದಾದ ನಂತರ, ಸಿಎಸ್ಕೆ ತಂಡದಿಂದ ಜಡೇಜಾ ದೂರವಾಗುತ್ತಾರೆ ಎಂದು ಹೇಳಲಾಗಿತ್ತು. ಜಡೇಜಾ ಕೂಡ ತಂಡದಿಂದ ಅಂತರ ಕಾಯ್ದುಕೊಂಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ರವೀಂದ್ರ ಜಡೇಜಾರನ್ನು ಸೇರಿಸಿಕೊಳ್ಳಲು ಆಸಕ್ತಿ ಹೊಂದಿತ್ತಾದರೂ, ಸಿಎಸ್ಕೆ ತನ್ನ ಸ್ಟಾರ್ ಆಲ್ರೌಂಡರ್ ರನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
4 ಆಟಗಾರರನ್ನು ಕೈಬಿಟ್ಟ ಚೆನ್ನೈ ಸೂಪರ್ ಕಿಂಗ್ಸ್
ಚೆನ್ನೈ 9 ಆಟಗಾರರನ್ನು ಉಳಿಸಿಕೊಂಡಿದ್ದು, 4 ಆಟಗಾರರನ್ನು ಬಿಡುಗಡೆ ಮಾಡಿದೆ. ಮಹೇಂದ್ರ ಸಿಂಗ್ ಧೋನಿ, ರವೀಂದ್ರ ಜಡೇಜಾ, ಮೊಯಿನ್ ಅಲಿ, ಶಿವಂ ದುಬೆ, ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮುಖೇಶ್ ಚೌಧರಿ, ಡ್ವೇನ್ ಪ್ರಿಟೋರಿಯಸ್ ಮತ್ತು ದೀಪಕ್ ಚಹಾರ್ ಅವರನ್ನು ಐಪಿಎಲ್ 16 ನೇ ಸೀಸನ್ಗೆ ಉಳಿಸಿಕೊಂಡಿದೆ. ಕ್ರಿಸ್ ಜೋರ್ಡಾನ್, ಆಡಮ್ ಮಿಲ್ನೆ, ನಾರಾಯಣ್ ಜಗದೀಶನ್ ಮತ್ತು ಮಿಚೆಲ್ ಸ್ಯಾಂಟ್ನರ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ.
ಐಪಿಎಲ್ 2023ರ ಮಿನಿ ಹರಾಜು ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿದೆ. ನವೆಂಬರ್ 15ರೊಳಗೆ ಉಳಿಸಿಕೊಂಡಿರುವ ಮತ್ತು ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಸಲ್ಲಿಸಲು ಬಿಸಿಸಿಐ ಎಲ್ಲಾ ಫ್ರಾಂಚೈಸಿಗಳಿಗೆ ಸೂಚನೆ ನೀಡಿದೆ.