|
ತಂಡದಲ್ಲಿನ ಬದಲಾವಣೆ ಬಗ್ಗೆ ಚರ್ಚೆ
ಆರ್ಸಿಬಿ ನಿರ್ದೇಶಕ ಮೈಕ್ ಹೆಸ್ಸನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯವನ್ನು ಸ್ಟ್ಯಾಂಡ್ನಿಂದ ವೀಕ್ಷಿಸುತ್ತಿದ್ದರು. ಸ್ಥಳೀಯ ಪ್ರತಿಭೆಗಳ ಮೇಲೆ ನಿಗಾ ಇಟ್ಟಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. ಮಾಜಿ ಆರ್ಸಿಬಿ ಆಟಗಾರ ಎಬಿ ಡಿವಿಲಿಯರ್ಸ್ ಅವರನ್ನು ಬೆಂಗಳೂರಿಗೆ ಕರೆಸಿಕೊಂಡಿರುವ ಉದ್ದೇಶವೇ ತಂಡದಲ್ಲಿ ಬದಲಾವಣೆ ಮಾಡುವ ಬಗ್ಗೆ ಚರ್ಚೆ ನಡೆಸಲು ಎನ್ನಲಾಗಿದೆ.
ಅನೇಕ ಸ್ಥಳೀಯ ಪ್ರತಿಭೆಗಳನ್ನು ಆಯ್ಕೆ ಮಾಡಲು ಆರ್ಸಿಬಿ ಆಸಕ್ತಿ ಹೊಂದಿದೆ ಎನ್ನಲಾಗುತ್ತಿದೆ. ತಂಡದ ಯಾವ ಆಟಗಾರನನ್ನು ಬಿಡುಗಡೆ ಮಾಡಬೇಕು ಎನ್ನುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಎಬಿಡಿ ಪಾತ್ರದ ಬಗ್ಗೆ ನಿರ್ಧರಿಸಿಲ್ಲ
ಆರ್ಸಿಬಿ ಫ್ರಾಂಚೈಸಿಯಲ್ಲಿ ದಕ್ಷಿಣ ಆಫ್ರಿಕಾದ ಸೂಪರ್ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ ಯಾವ ಪಾತ್ರ ವಹಿಸುತ್ತಾರೆ ಎನ್ನುವ ಕುರಿತು ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಆದರೂ, ಆರ್ಸಿಬಿ ಅಭಿಮಾನಿಗಳಿಗೆ ಎಬಿ ಡಿವಿಯಲಿಯರ್ಸ್ ತಂಡದ ಜೊತೆ ಇರುವುದು ಖುಷಿಯ ವಿಚಾರವಾಗಿದೆ.
ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ತಂಡದ ಇಬ್ಬರು ಅನುಭವಿ ಆಟಗಾರರು ಸದ್ಯ ಭಾರತದಲ್ಲಿ ಇಲ್ಲ. ಎಬಿಡಿ ತಂಡದ ಇತರ ಸದಸ್ಯರ ಜೊತೆ ಮಾತನಾಡಿಲಿದ್ದಾರೆ. ಮುಂದಿನ ಐಪಿಎಲ್ನಲ್ಲಿ ತಂಡಕ್ಕೆ ಸಹಾಯ ಮಾಡಲಿದ್ದಾರೆ.
ತಂಡಕ್ಕೆ ಮಾರ್ಗದರ್ಶನ ನೀಡುವ ಸಾಧ್ಯತೆ
2022ರ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕ್ವಾಲಿಫೈಯರ್ 2 ರಲ್ಲಿ ಸೋತಿದ್ದರಿಂದ ಆರ್ಸಿಬಿ ಪ್ರಶಸ್ತಿ ಗೆಲ್ಲುವುದು ಇನ್ನೂ ಕನಸಾಗಿಯೇ ಉಳಿದಿದೆ. ಕಳೆದ ಋತುವಿನಲ್ಲಿ ಕೊಹ್ಲಿ ಮತ್ತು ಡುಪ್ಲೆಸಿಸ್ ಸ್ಥಿರವಾದ ಪ್ರದರ್ಶನ ನೀಡದ ಕಾರಣ ತಂಡಕ್ಕೆ ಹಿನ್ನಡೆಯಾಗಿತ್ತು.
ತಂಡದ ಬ್ಯಾಟಿಂಗ್ ವಿಭಾಗದ ಜೊತೆ ಎಬಿಡಿ ಕೆಲಸ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ತಂಡದೊಂದಿಗೆ ಬ್ಯಾಟಿಂಗ್ ಮಾರ್ಗದರ್ಶಕರಾಗಿ ಅಥವಾ ಗುಂಪಿನಲ್ಲಿ ಪವರ್ ಸ್ಪೆಷಲಿಸ್ಟ್ ತರಬೇತುದಾರರಾಗಿ ಕೆಲಸ ಮಾಡಬಹುದು. ಎಬಿಡಿ ಮಾರ್ಗದರ್ಶನ ಹಲವು ಯುವ ಆಟಗಾರರಿಗೆ ಸಹಾಯಕವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.