For Quick Alerts
ALLOW NOTIFICATIONS  
For Daily Alerts
 

IPL 2024: ಮೊದಲು ಈತನನ್ನು ಆಡುವ 11ರ ಬಳಗದಿಂದ ಹೊರಗಿಡಿ; ಆರ್‌ಸಿಬಿಗೆ ಸಲಹೆ ಕೊಟ್ಟ ಭಜ್ಜಿ

ಗುರುವಾರ, ಏಪ್ರಿಲ್ 11ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ 7 ವಿಕೆಟ್‌ಗಳಿಂದ ಹೀನಾಯವಾಗಿ ಮುಖಭಂಗ ಅನುಭವಿಸಿತು.

ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನ ಬಳಿಕ, ಆರ್‌ಸಿಬಿ ತಂಡದ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ಒಂದೆರಡು ಪಂದ್ಯಗಳಿಂದ ವಿಶ್ರಾಂತಿ ನೀಡುವಂತೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ಗೆ ಸಲಹೆ ನೀಡಿದರು.

IPL 2024 Rest For Mohammed Siraj a Couple of Matches Harbhajan Singh Advised RCB

ಮೊಹಮ್ಮದ್ ಸಿರಾಜ್ ಅವರ 2024ರ ಐಪಿಎಲ್ ಅಭಿಯಾನವು ಇನ್ನೂ ಬ್ಲಾಕ್‌ಗಳಿಂದ ಹೊರಬರಲು ಸಾಧ್ಯವಾಗಿಲ್ಲ. ಏಕೆಂದರೆ ಭಾರತೀಯ ವೇಗಿ ಅತ್ಯುತ್ತಮ ಬೌಲಿಂಗ್ ಫಾರ್ಮ್‌ಗಾಗಿ ಹೆಣಗಾಡುತ್ತಿದ್ದಾರೆ ಎಂದರು. ಇದರ ಭಾಗವಾಗಿ ಆರ್‌ಸಿಬಿ ತಂಡ ಇದುವರೆಗೆ ಆಡಿದ 6 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಸೋತಿದ್ದು, ಕೇವಲ 1 ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿದೆ.

ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುರುವಾರ ಬೌಲಿಂಗ್‌ನಲ್ಲಿ ಆರ್‌ಸಿಬಿ ವೇಗಿ ಮೊಹಮ್ಮದ್ ಸಿರಾಜ್ ತಮ್ಮ ಕಳಪೆ ಫಾರ್ಮ್ ಅನ್ನು ಮುಂದುವರೆಸಿದರು.

ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ಸೋಲಿಗೆ ವೇಗಿ ಮೊಹಮ್ಮದ್ ಸಿರಾಜ್ ತನ್ನ 3 ಓವರ್‌ಗಳ ಕೋಟಾದಲ್ಲಿ 37 ರನ್‌ಗಳನ್ನು ಬಿಟ್ಟುಕೊಟ್ಟರು ಮತ್ತು ವಿಕೆಟ್ ರಹಿತರಾದರು. ಐಪಿಎಲ್ 2024ರಲ್ಲಿ ಮೊಹಮ್ಮದ್ ಸಿರಾಜ್ ಈವರೆಗೆ ಆಡಿದ 6 ಪಂದ್ಯಗಳಲ್ಲಿ 57.25ರ ಸರಾಸರಿಯೊಂದಿಗೆ ಕೇವಲ 4 ವಿಕೆಟ್ ಪಡೆದಿದ್ದಾರೆ.

IPL 2024 Rest For Mohammed Siraj a Couple of Matches Harbhajan Singh Advised RCB

ಐಪಿಎಲ್ 2023ರ ಪಂದ್ಯಾವಳಿಗೆ ಹೋಲಿಸಿದರೆ, ಈ ಆವೃತ್ತಿ ಮೊಹಮ್ಮದ್ ಸಿರಾಜ್‌ಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಕಳೆದ ಬಾರಿ 19.79ರ ಸರಾಸರಿಯಲ್ಲಿ 19 ವಿಕೆಟ್‌ಗಳನ್ನು ಪಡೆದಿದ್ದರು.

ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡಿದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್, ಈ ಋತುವಿನಲ್ಲಿ ಮೊಹಮ್ಮದ್ ಸಿರಾಜ್ ಈವರೆಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದ ಕಾರಣ, ವೇಗಿಗೆ ಫಾರ್ಮ್‌ಗೆ ಮರಳಲು ಸ್ವಲ್ಪ ಸಮಯ ವಿಶ್ರಾಂತಿ ನೀಡುವಂತೆ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ಗೆ ಸಲಹೆ ನೀಡಿದರು.

"ನಾನು ಆರ್‌ಸಿಬಿ ಮ್ಯಾನೇಜ್‌ಮೆಂಟ್‌ನ ಭಾಗವಾಗಿದ್ದರೆ, ನಾನು ಮೊಹಮ್ಮದ್ ಸಿರಾಜ್‌ಗೆ ಒಂದೆರಡು ಪಂದ್ಯಗಳಿಂದ ವಿಶ್ರಾಂತಿ ನೀಡುತ್ತೇನೆ. ಆ ಬಳಿಕ ಆತ ಹಿಂತಿರುಗಿ ಆಡಲಿ ಎಂದು ಯೋಚಿಸುತ್ತಿದ್ದೆ," ಎಂದು ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತಿಳಿಸಿದರು.

IPL 2024 Rest For Mohammed Siraj a Couple of Matches Harbhajan Singh Advised RCB

"ಟೆಸ್ಟ್ ಕ್ರಿಕೆಟ್ ಆಗಿರಲಿ, ಏಕದಿನ ಕ್ರಿಕೆಟ್ ಆಗಿರಲಿ ಅಥವಾ ಟಿ20 ಸ್ವರೂಪದಲ್ಲಿ ಹೊಸ ಚೆಂಡಿನ ಮೂಲಕ ವಿಕೆಟ್ ಕಬಳಿಸುವುದನ್ನು ನಾವು ನೋಡಿರುವ ಮೊಹಮ್ಮದ್ ಸಿರಾಜ್ ಅವರೇ ಆಗಿದ್ದಾರೆ. ಆತ ಟೀಮ್ ಇಂಡಿಯಾ ಮತ್ತು ಆರ್‌ಸಿಬಿ ತಂಡಕ್ಕಾಗಿ ಚಾಂಪಿಯನ್ ಬೌಲರ್ ಆಗಿದ್ದಾರೆ. ಸದ್ಯ ತಂಡಕ್ಕಾಗಿ ಮಾಡಬೇಕಾದ್ದನ್ನು ಅವರು ಮಾಡುತ್ತಿಲ್ಲ ಎಂದು ನಾನು ಭಾವಿಸುತ್ತೇನೆ," ಎಂದು ಹರ್ಭಜನ್ ಸಿಂಗ್ ಹೇಳಿದರು.

ಮೊಹಮ್ಮದ್ ಸಿರಾಜ್ ತುಂಬಾ ದಣಿದಿದ್ದಾರೆ: ಹರ್ಭಜನ್ ಸಿಂಗ್

ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು, ವೇಗಿ ಮೊಹಮ್ಮದ್ ಸಿರಾಜ್ ಮಾನಸಿಕವಾಗಿ ಮತ್ತು ದೈಹಿಕವಾಗಿ ದಣಿದಿದ್ದಾರೆ ಎಂದು ಹೇಳಿದರು. ಇದಕ್ಕೆ ಕಾರಣ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರು ಹೊಂದಿದ್ದ ಬಿಡುವಿಲ್ಲದ ವೇಳಾಪಟ್ಟಿಯನ್ನು ತೋರಿಸಿದರು.

"ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನ ನಂತರ ಯಾವುದೇ ಬೌಲರ್ ಚೇತರಿಸಿಕೊಳ್ಳುವುದು ಸುಲಭವಲ್ಲ. ಮೊಹಮ್ಮದ್ ಸಿರಾಜ್ ಸ್ವಲ್ಪ ವಿಶ್ರಾಂತಿ ಮತ್ತು ಆಟವನ್ನು ಮರು ಮೌಲ್ಯಮಾಪನ ಮಾಡಿದರೆ ಉತ್ತಮವಾಗಿರುತ್ತದೆ," ಎಂದು ಹರ್ಭಜನ್ ಸಿಂಗ್ ಹೇಳಿದರು.

ಹರ್ಭಜನ್ ಮಾತಿಗೆ ಧ್ವನಿಗೂಡಿಸಿದ ಬ್ರಿಯಾನ್ ಲಾರಾ

ವೆಸ್ಟ್ ಇಂಡೀಸ್‌ನ ಲೆಜೆಂಡರಿ ಕ್ರಿಕೆಟಿಗ ಬ್ರಿಯಾನ್ ಲಾರಾ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರ ದೇಹ ಮತ್ತು ಮನಸ್ಸನ್ನು ರಿಫ್ರೆಶ್ ಮಾಡಲು ಕನಿಷ್ಠ ಒಂದೆರಡು ಪಂದ್ಯಗಳಿಗೆ ವಿಶ್ರಾಂತಿ ನೀಡುವ ಬಗ್ಗೆ ಯೋಚಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಪ್ರಮುಖ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಮೊಹಮ್ಮದ್ ಸಿರಾಜ್, ಐಪಿಎಲ್ 2024ರಲ್ಲಿ ಈವರೆಗೆ ಕಳಪೆ ಪ್ರದರ್ಶನ ಮುಂದುವರೆಸಿದ್ದಾರೆ. ಬಲಗೈ ವೇಗಿಯ ಹೊಸ-ಚೆಂಡಿನಲ್ಲಿ ಹೆಚ್ಚು ಅವಲಂಬಿತವಾಗಿರುವುದರಿಂದ, ಪವರ್‌ಪ್ಲೇನಲ್ಲಿ ವಿಕೆಟ್ ತೆಗೆಯದಿರುವುದು ಮತ್ತು ಹೆಚ್ಚು ರನ್ ಬಿಟ್ಟುಕೊಡುತ್ತಿರುವುದು ಆರ್‌ಸಿಬಿ ತಂಡದ ತಲೆನೋವಾಗಿ ಕಾರಣವಾಗಿದೆ.

Story first published: Friday, April 12, 2024, 16:30 [IST]
Other articles published on Apr 12, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+