ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸದ್ಯ ಭಾರೀ ಸುದ್ದಿಯಲ್ಲಿದೆ. ಈ ಬಾರಿ ತಂಡದ ಮ್ಯಾನೇಜ್ಮೆಂಟ್ ಚೇಂಜ್ ಆಗುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೂ ಮೊದಲು ಆರ್ಸಿಬಿ ರಿಟೆನ್ಷನ್ ಲೀಸ್ಟ್ ರಿಲೀಸ್ ಮಾಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18ನೇ ಆವೃತ್ತಿಯ ಐಪಿಎಲ್ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದು, ಚಾಂಪಿಯನ್ ತಂಡ ಯಾರನ್ನು ಉಳಿಸಿಕೊಳ್ಳಲಿದೆ ಯಾರಿಗೆ ಗೇಟ್ ಪಾಸ್ ನೀಡಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.
18ನೇ ಆವೃತ್ತಿಯ ಐಪಿಎಲ್ ಆಟಗಾರರು ನೀಡಿದ ಪ್ರದರ್ಶನದ ಆಧಾರಾದ ಮೇಲೆ ಮಾಲೀಕರು ಹಾಗೂ ಥಿಂಕ್ ಟ್ಯಾಂಕ್ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ತಿಳಿದು ಬಂದಿದೆ. ಕಳೆದ ಆವೃತ್ತಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ಆಟಗಾರರಿಗೆ ಮ್ಯಾನೆಜ್ಮೆಂಟ್ ರೆಡ್ ಕಾರ್ಪೆಟ್ ಹಾಕಿದೆ. ಅಲ್ಲದೆ ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡುವಲ್ಲಿ ವಿಫಲರಾಗಿದ್ದ ಆಟಗಾರರಿಗೆ ತಂಡದಿಂದ ಹೊರ ಕಳುಹಿಸಿದೆ. ಈ ವೇಳೆ ಆರ್ಸಿಬಿ ಯಾರನ್ನು ರಿಲೀಸ್ ಮಾಡಬಹುದು ಎಂಬ ಪ್ರಶ್ನೆಗಳು ಉದ್ಭವಿಸಿದ್ದವು. ಈಗ ಅದಕ್ಕೆಲ್ಲಾ ಉತ್ತರ ಸಿಕ್ಕಿದೆ. ರೆಡ್ ಆರ್ಮಿ 19ನೇ ಆವೃತ್ತಿಯ ಐಪಿಎಲ್ಗೆ ಈಗಿನಿಂದಲೇ ತಯಾರಿ ನಡೆಸಿದೆ.

RCB ಕೈ ಬಿಟ್ಟ ಆಟಗಾರರು: ಸ್ವಸ್ತಿಕ್ ಚಿಕಾರಾ, ಮಯಾಂಕ್ ಅಗರ್ವಾಲ್, ಟಿಮ್ ಸೀಫರ್ಟ್, ಲಿಯಾಮ್ ಲಿವಿಂಗ್ಸ್ಟೋನ್, ಮನೋಜ್ ಭಾಂಡಗೆ, ಲುಂಗಿ ಎನ್ಗಿಡಿ, ಬ್ಲೆಸಿಂಗ್ ಮುಜರಾಬಾನಿ, ಮೋಹಿತ್ ರಾಠಿ