
ಅಂತಿಮ ಕ್ಷಣದಲ್ಲಿ ಶ್ರೇಯಸ್ ಐಯ್ಯರ್ ಅಲಭ್ಯತೆ ತಿಳಿಸಿದ ಬಿಸಿಸಿಐ
ನೆಟ್ಟಿಗರು ಬಿಸಿಸಿಐ ವಿರುದ್ಧ ಕೋಪಗೊಳ್ಳುತ್ತಿರುವುದಕ್ಕೆ ಪ್ರಮುಖ ಕಾರಣ ಅಂತಿಮ ಕ್ಷಣದಲ್ಲಿ ಶ್ರೇಯಸ್ ಐಯ್ಯರ್ ಅವರಿಗೆ ಅನಾರೋಗ್ಯ ಉಂಟಾಗಿ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂಬ ವಿಷಯವನ್ನು ಬಿಸಿಸಿಐ ಪ್ರಕಟಿಸಿದ್ದು. ಹೌದು, ಶ್ರೇಯಸ್ ಐಯ್ಯರ್ ಅವರನ್ನು ದ. ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡದ ಬಿಸಿಸಿಐ ಐಯ್ಯರ್ ಹೊಟ್ಟೆ ನೋವಿಗೆ ಒಳಗಾಗಿದ್ದಾರೆ ಎಂಬ ಕಾರಣವನ್ನು ನೀಡಿತು. ಹೀಗೆ ಬಿಸಿಸಿಐ ಅಂತಿಮ ಕ್ಷಣದಲ್ಲಿ ಕೈಗೊಂಡ ನಿರ್ಧಾರದ ಕುರಿತು ಬೇಸರ ವ್ಯಕ್ತವಾಗುತ್ತಿದ್ದು ಇಂತಹ ಸುದ್ದಿಗಳನ್ನು ಬಿಸಿಸಿಐ ಮೊದಲೇ ಯಾಕೆ ಹಂಚಿಕೊಳ್ಳುವುದಿಲ್ಲ, ಇದರಿಂದ ಬಿಸಿಸಿಐ ಅಭಿಮಾನಿಗಳ ದಿಕ್ಕು ತಪ್ಪಿಸುತ್ತಿದೆ ಎಂದು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ನಿನ್ನೆ ಅಭ್ಯಾಸ ನಡೆಸಿದ್ದ ಐಯ್ಯರ್
ಇನ್ನು ಬಿಸಿಸಿಐ ಶ್ರೇಯಸ್ ಐಯ್ಯರ್ ದ. ಆಫ್ರಿಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಹೊಟ್ಟೆನೋವಿನ ಕಾರಣದಿಂದಾಗಿ ಅಲಭ್ಯರಾಗಿದ್ದಾರೆ ಎಂದು ಪಂದ್ಯ ಆರಂಭಕ್ಕೂ ಅರ್ಧ ತಾಸಿನ ಮುನ್ನ ಬಿಸಿಸಿಐ ತಿಳಿಸಿದರೆ, ಅತ್ತ ಶ್ರೇಯಸ್ ಐಯ್ಯರ್ ನಿನ್ನೆವರೆಗೂ ಅಭ್ಯಾಸದಲ್ಲಿ ಭಾಗವಹಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರೇಕ್ಷಕರು ಶ್ರೇಯಸ್ ಐಯ್ಯರ್ ದಿಢೀರನೆ ಅನಾರೋಗ್ಯಕ್ಕೊಳಗಾದ್ರಾ? ಬಿಸಿಸಿಐ ಅಂತಿಮ ವೇಳೆಯಲ್ಲಿ ಈ ರೀತಿ ನಿರ್ಧಾರ ಪ್ರಕಟಿಸುವುದು ಆಟಗಾರರ ಮೇಲೆ ಬೇರೆ ರೀತಿಯ ಪ್ರಭಾವವನ್ನೇದರೂ ಬೀರುತ್ತಿದೆಯಾ ಎಂಬ ಪ್ರಶ್ನೆಯನ್ನು ಹಾಕಿದ್ದಾರೆ. ಇನ್ನು ಶ್ರೇಯಸ್ ಐಯ್ಯರ್ ಇತ್ತೀಚಿಗಷ್ಟೆ ನಡೆದ ಟೀಮ್ ಇಂಡಿಯಾ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ನೃತ್ಯವನ್ನೂ ಮಾಡಿದ್ದ ವಿಡಿಯೋವನ್ನು ಸ್ವತಃ ತಾವೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಈ ಹಿಂದೆ ಅಜಿಂಕ್ಯಾ ರಹಾನೆ ವಿಷಯದಲ್ಲಿಯೂ ಇದೇ ರೀತಿ ನಡೆದುಕೊಂಡಿತ್ತು ಬಿಸಿಸಿಐ
ಬಿಸಿಸಿಐ ಅಂತಿಮ ವೇಳೆಯಲ್ಲಿ ಆಟಗಾರರ ಅಲಭ್ಯತೆಯನ್ನು ಪ್ರಕಟಿಸಿದ್ದು ಇದೇ ಮೊದಲೇನಲ್ಲ. ಈ ಹಿಂದೆ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ಕೂಡ ಅಜಿಂಕ್ಯಾ ರಹಾನೆಯನ್ನು ಇದೇ ರೀತಿ ಅಂತಿಮ ವೇಳೆಯಲ್ಲಿ ತಂಡದಿಂದ ಹೊರಹಾಕಲಾಗಿತ್ತು.


Click it and Unblock the Notifications
