ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಗಾಯಗೊಂಡಿರುವ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಮತ್ತು ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಬದಲಿ ಆಟಗಾರರನ್ನು ಘೋಷಿಸಿದ ಬಳಿಕ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು ಇಂದು ಅಥವಾ ನಾಳೆ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ.
ಬಿಸಿಸಿಐ ಆಯ್ಕೆ ಸಮಿತಿ ಜನವರಿ 30ರಂದು ಟೆಸ್ಟ್ ಸರಣಿಯ ಉಳಿದ ಪಂದ್ಯಗಳ ಆಯ್ಕೆಯ ಕುರಿತು ಔಪಚಾರಿಕ ಸಭೆಯನ್ನು ನಡೆಸುವ ಸಾಧ್ಯತೆಯಿದ್ದು, ಈ ಬಗ್ಗೆ ಬಿಸಿಸಿಐ ಇನ್ನೂ ಅಧಿಕೃತಗೊಳಿಸಿಲ್ಲ.

ಮೊದಲೆರಡು ಪಂದ್ಯಗಳಲ್ಲಿ ಆಡಿದ ತಂಡವು ಬಹುತೇಕ ಒಂದೇ ಆಗಿರುವ ಸಾಧ್ಯತೆಯಿದ್ದರೂ, ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಪುನರಾಗಮನ ಮಾಡುವ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಎದ್ದಿದೆ.
ವೈಯಕ್ತಿಕ ಕಾರಣದಿಂದ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿಯಲು ನಿರ್ಧರಿಸಿದರು. ಟೀಮ್ ಇಂಡಿಯಾ ಮಾಜಿ ನಾಯಕನ ಬೆಂಬಲಕ್ಕೆ ಬಿಸಿಸಿಐ ನಿಂತಿತು. ಆದರೆ ವಿರಾಟ್ ಕೊಹ್ಲಿಯು ಹಿಂದೆ ಸರಿಯಲು ಕಾರಣವಾದ ವಿಷಯವನ್ನು ಬಹಿರಂಗಪಡಿಸಲು ನಿರಾಕರಿಸಿತು.
ವಿರಾಟ್ ಕೊಹ್ಲಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಪತ್ರಿಕಾ ಪ್ರಕಟಣೆ ದೃಢಪಡಿಸಿತು. ಆದರೆ, ಅವರ ವಾಪಸಾತಿ ಕುರಿತು ಇನ್ನೂ ಯಾವುದೇ ಮಾಹಿತಿ ಹೊರ ಬಂದಿಲ್ಲ.
ಎರಡನೇ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಗಿಲ್ ಭರ್ಜರಿ ಶತಕ ಗಳಿಸಿ ಫಾರ್ಮ್ಗೆ ಮರಳಿರುವುದರಿಂದ ಮೂರನೇ ಕ್ರಮಾಂಕಕ್ಕೆ ಚೇತೇಶ್ವರ ಪೂಜಾರ ಮರಳುವುದು ಕಷ್ಟವೆನಿಸಿದೆ.
ಆದರೆ ವಿರಾಟ್ ಕೊಹ್ಲಿ ಈವರೆಗೂ ತಮ್ಮ ಲಭ್ಯತೆ ಬಗ್ಗೆ ತಿಳಿಸದಿರುವುದರಿಂದ, ಮೂರನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸ್ಥಾನಕ್ಕೆ ಬಿಸಿಸಿಐ ಆಯ್ಕೆ ಸಮಿತಿ ಚೇತೇಶ್ವರ ಪೂಜಾರ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ.
ಸ್ಟಾರ್ ಬ್ಯಾಟರ್ ವೈಯಕ್ತಿಕ ಜೀವನದಲ್ಲಿ ಒರಡು ಪ್ಯಾಚ್ ಮೂಲಕ ಹೋಗುತ್ತಿರುವಂತೆ ತೋರುತ್ತಿದೆ. ಅದು ಅವರನ್ನು ಸಾಮಾಜಿಕ ಮಾಧ್ಯಮದಿಂದ ದೂರವಿರಿಸಿದೆ. ಕೊಹ್ಲಿ ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಮರಳುತ್ತಾರೆಯೇ ಅಥವಾ ಇಲ್ಲವೇ ಎಂಬುದು ನೋಡಲು ಕುತೂಹಲಕಾರಿಯಾಗಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಗಾಯಗೊಂಡ ನಂತರ, ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಅವರು ವಿಶಾಖಪಟ್ಟಣದಲ್ಲಿ ನಡೆಯುವ ಎರಡನೇ ಪಂದ್ಯಕ್ಕಾಗಿ ತಪ್ಪಿಸಿಕೊಳ್ಳಲಿದ್ದಾರೆ. ಹೀಗಾಗಿ ಬಿಸಿಸಿಐ ಸರ್ಫರಾಜ್ ಖಾನ್, ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಸೋಮವಾರ ಟೆಸ್ಟ್ ತಂಡಕ್ಕೆ ಸೇರಿಸಿದೆ.
ಕೆಎಲ್ ರಾಹುಲ್ ಅವರ ಗಾಯವು ಗಂಭೀರವಲ್ಲದಿದ್ದರೂ, ರವೀಂದ್ರ ಜಡೇಜಾ ಹೆಚ್ಚು ಅವಧಿಗೆ ಹೊರಗುಳಿಯಬಹುದು ಎಂದು ವರದಿಗಳು ಹೇಳಿವೆ. ಮಣಿಕಟ್ಟಿನ ಸ್ಪಿನ್ನರ್ ಕುಲದೀಪ್ ಯಾದವ್ ಬೆಂಚ್ ಕಾಯಿಸುತ್ತಿರುವ ಕಾರಣ, ಎರಡನೇ ಟೆಸ್ಟ್ ಪಂದ್ಯಕ್ಕೆ ಸ್ಪಿನ್ನರ್ಗಳ ಆಯ್ಕೆ ತಂಡದ ಮ್ಯಾನೇಜ್ಮೆಂಟ್ಗೆ ಸುಲಭವಲ್ಲ.
ಕುಲದೀಪ್ ಯಾದವ್ ಹೆಚ್ಚು ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿದ್ದರೆ, ವಾಷಿಂಗ್ಟನ್ ಸುಂದರ್ ಅವರು ರವೀಂದ್ರ ಜಡೇಜಾಗೆ ಬದಲಿಯಾಗಿ ಬಂದಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಸೋಲಿನ ನಂತರ, ಕೆಲವು ಆಟಗಾರರು ಒತ್ತಡದಲ್ಲಿದ್ದಾರೆ ಮತ್ತು ಪುನರಾಗಮನ ಮಾಡುವ ಪ್ರಯತ್ನದಲ್ಲಿ ಕೆಲವು ಹೊಸ ಮುಖಗಳನ್ನು ತರಲು ಬಿಸಿಸಿಐ ನಿರ್ಧರಿಸಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು ಇಂಗ್ಲೆಂಡ್ ವಿರುದ್ಧದ ಉಳಿದ ಪಂದ್ಯಗಳಿಗೆ ಒಂದೆರಡು ದಿನಗಳಲ್ಲಿ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ.
ಮೊದಲ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಕಳಪೆ ಬ್ಯಾಟಿಂಗ್ನಿಂದ ಸೋಲು ಅನುಭವಿಸಿದ ಬಳಿಕ ಟೀಮ್ ಮ್ಯಾನೇಜ್ಮೆಂಟ್ ಎಚ್ಚೆತ್ತುಕೊಳ್ಳಬೇಕಿದೆ. 2024ರ ರಣಜಿ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅನುಭವಿ ಬ್ಯಾಟರ್ ಚೇತೇಶ್ವರ್ ಪೂಜಾರ ಭಾರತ ತಂಡಕ್ಕೆ ಪುನರಾಗಮನ ಮಾಡುವ ಸಾಧ್ಯತೆ ಇದೆ.
ಇಂಗ್ಲೆಂಡ್ ವಿರುದ್ಧದ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ಚೇತೇಶ್ವರ್ ಪೂಜಾರ ಅವರನ್ನು ವಾಪಸ್ ಕರೆತರಬೇಕೆಂಬುದು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಬಯಕೆ.
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.