ಪ್ರಮುಖ ಆಟಗಾರರ ಅಲಭ್ಯತೆ
ಮೊದಲ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಪಿತೃತ್ವದ ರಜೆಯಲ್ಲಿ ತವರಿಗೆ ವಾಪಾಸಾಗಿದ್ದರು. ಆದರೆ ಅದಾದ ಬಳಿಕ ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಆರ್ ಅಶ್ವಿನ್, ರವೀಂದ್ರ ಜಡೇಜಾ ಸಹಿತ ಹಲವು ಆಟಗಾರರು ಗಾಯಗೊಂಡಿದ್ದರು.
ಶ್ರೇಷ್ಠ ಪ್ರದರ್ಶನ ನೀಡಿದ ಯುವ ಪಡೆ
ಈ ಸಂದರ್ಭದಲ್ಲಿ ಮೊಹಮದ್ ಸಿರಾಜ್, ವಾಶಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶುಬ್ಲನ್ ಗಿಲ್ ಮತ್ತು ರಿಷಬ್ ಪಂತ್ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡು ಶ್ರೇಷ್ಠ ಪ್ರದರ್ಶನ ನಿಡಿ ಗೆಲುವಿಗೆ ಕಾರಣರಾದರು. ಈ ಎಲ್ಲಾ ಆಟಗಾರರು ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಅಂಡರ್ 19 ಹಾಗೂ ಭಾರತ ಎ ತಂಡವನ್ನು ಪ್ರತಿನಿಧಿಸಿವರು. ಹೀಗಾಗಿ ದ್ರಾವಿಡ್ ನೀಡಿದ ಕೊಡುಗೆ ಇಲ್ಲಿ ಪ್ರಶಂಸೆಗೆ ಪಾತ್ರವಾಗಿತ್ತು.
ದ್ರಾವಿಡ್ ಕೊಡುಗೆಗೆ ಪ್ರಶಂಸೆ
ಭಾರತೀಯ ಕ್ರಿಕೆಟ್ನ ಮಾಜಿ ಆಯ್ಕೆಗಾರ ಜತಿನ್ ಪರಂಜಪೆ, ಪಾಕಿಸ್ತಾನದ ಮಾಜಿ ನಾಯಕ ಇನ್ಜಮಾಮ್ ಉಲ್ ಹಲ್ ಸಹಿತ ಸಾಕಷ್ಟು ಪ್ರಮುಖರ ಜೊತೆಗೆ ಕ್ರಿಕೆಟ್ ಪ್ರೇಮಿಗಳು ರಾಹುಲ್ ದ್ರಾವಿಡ್ ಕೊಡುಗೆಯ ಬಗ್ಗೆ ಮುಕ್ತಕಂಠದಿಂದ ಹೊಗಳಿಕೆಯ ಮಾತುಗಳನ್ನು ಆಡಿದ್ದರು.