ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅರ್ಚನಾರೊಂದಿಗೆ ಜಂಟಿ ಬದುಕಿನ ಇನ್ನಿಂಗ್ಸ್‌ ಆರಂಭಿಸಿದ ಕೃಷ್ಣಪ್ಪ ಗೌತಮ್

Karnataka all rounder Krishnappa Gowtham and Archana Sundar got married

ಬೆಂಗಳೂರು, ಡಿಸೆಂಬರ್ 6: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಲೀಗ್‌ನಲ್ಲಿ ಬಳ್ಳಾರಿ ಟಸ್ಕರ್ಸ್ ಪರ, ಶಿವಮೊಗ್ಗ ಲಯನ್ಸ್ ವಿರುದ್ಧ ಅಜೇಯ 134 ರನ್ ಮತ್ತು 15 ರನ್‌ಗೆ 8 ವಿಕೆಟ್ ಪಡೆದು ಟಿ20 ಕ್ರಿಕೆಟ್‌ ಇತಿಹಾಸದಲ್ಲಿ ವಿಶಿಷ್ಠ ದಾಖಲೆ ನಿರ್ಮಿಸಿದ್ದ ಕರ್ನಾಟಕ ತಂಡದ ಆಲ್ ರೌಂಡರ್ ಕೃಷ್ಣಪ್ಪ ಗೌತಮ್, ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

'ರಣಹದ್ದು'ಗಳಿಂದ ಯುವ ಕ್ರಿಕೆಟಿಗರ ರಕ್ಷಿಸಬೇಕಿದೆ: ಪೊಲಾರ್ಡ್ ಹೇಳಿದ್ಯಾರಿಗೆ?!'ರಣಹದ್ದು'ಗಳಿಂದ ಯುವ ಕ್ರಿಕೆಟಿಗರ ರಕ್ಷಿಸಬೇಕಿದೆ: ಪೊಲಾರ್ಡ್ ಹೇಳಿದ್ಯಾರಿಗೆ?!

ಅರ್ಚನಾ ಸುಂದರ್ ಒಂದಿಗೆ ಗೌತಮ್ ಶುಕ್ರವಾರ (ಡಿಸೆಂಬರ್ 6) ಒಂಟಿ ಜೀವನದಿಂದ ಜಂಟಿ ಜೀವನಕ್ಕೆ ಬದಲಾಗಿದ್ದಾರೆ. ನವ ವಧು-ವರರಿಗೆ ಕರ್ನಾಟಕ ರಣಜಿ ತಂಡ ಅಧಿಕೃತ ಟ್ವಿಟರ್ ಖಾತೆ ಶುಭ ಕೋರಿದೆ. ಡಿಸೆಂಬರ್ 2ರಂದು ಕರ್ನಾಟಕ ತಂಡದ ನಾಯಕ ಮನೀಶ್ ಪಾಂಡೆ ಮದುವೆ ಬಂಧನಕ್ಕೆ ಒಳಗಾಗಿದ್ದರು.

ಈ ಬಾರಿಯ ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ತಮಿಳುನಾಡು ವಿರುದ್ಧದ ಫೈನಲ್ ಪಂದ್ಯದಲ್ಲಿ ಗೌತಮ್‌ಗೆ ಬ್ಯಾಟಿಂಗ್‌ಗೆ ಅವಕಾಶ ಲಭಿಸದಿದ್ದರೂ, ಬೌಲಿಂಗ್‌ನಲ್ಲಿ 31 ರನ್‌ಗೆ 1 ವಿಕೆಟ್ ಕೆಡವಿದ್ದರು.

ನಾಳೆಯಿಂದ ಕ್ರಿಕೆಟ್ ಲೋಕದಲ್ಲಿ ಮಹತ್ವದ ಬದಲಾವಣೆನಾಳೆಯಿಂದ ಕ್ರಿಕೆಟ್ ಲೋಕದಲ್ಲಿ ಮಹತ್ವದ ಬದಲಾವಣೆ

31ರ ಹರೆಯದ ಆಲ್ ರೌಂಡರ್ ಕೃಷ್ಣಪ್ಪ ಗೌತಮ್, 2018ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದರು. ಈ ಬಾರಿಯ ಐಪಿಎಲ್ ಸೀಸನ್‌ನಲ್ಲಿ ಗೌತಮ್, ರಾಯಲ್ಸ್‌ಗೆ ಬದಲಾಗಿ ಕಿಂಗ್ಸ್ XI ಪಂಜಾಬ್ ಪರ ಆಡುತ್ತಿದ್ದಾರೆ. ಒಟ್ಟು 17 ಐಪಿಎಲ್ ಇನ್ನಿಂಗ್ಸ್‌ಗಳಲ್ಲಿ ಗೌತಮ್ 144 ರನ್, 22 ಇನ್ನಿಂಗ್ಸ್‌ಗಳಲ್ಲಿ 12 ವಿಕೆಟ್ ಪಡೆದಿದ್ದಾರೆ.

Story first published: Friday, December 6, 2019, 15:39 [IST]
Other articles published on Dec 6, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X