For Quick Alerts
ALLOW NOTIFICATIONS  
For Daily Alerts
 

ರಣಜಿ ತಂಡದ ಕೋಚ್ ಅರವಿಂದ್ ಬೈಕ್ ಕದ್ದಿದ್ದ ಕಳ್ಳರು ಅಂದರ್

Karnataka Coach S Aravind Bike recovered

ಬೆಂಗಳೂರು, ಜನವರಿ 03: ಭಾರತ ತಂಡದ ಮಾಜಿ ವೇಗದ ಬೌಲರ್, ಕರ್ನಾಟಕ ರಣಜಿ ತಂಡದ ಕೋಚ್ ಶ್ರೀನಾಥ್ ಅರವಿಂದ್ ಅವರಿಗೆ ಪೊಲೀಸರಿಂದ ಶುಭ ಸುದ್ದಿ ಸಿಕ್ಕಿದೆ.

ಕಳೆದ ಡಿಸೆಂಬರ್ ನಲ್ಲಿ ಹೊಚ್ಚ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್ ಖರೀದಿಸಿದ್ದ ಅರವಿಂದ್ ಅವರು ಕಳೆದ ಹಲವು ದಿನಗಳಿಂದ ಮನೆ ಮುಂದೆ ಬೈಕ್ ನಿಲ್ಲಿಸಿದ್ದರು. ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳುವಾಗಿರುವ ಬಗ್ಗೆ ದೂರು ನೀಡಿದ್ದರು. ಬೈಕ್ ಕದ್ದ ಕಳ್ಳರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ರಣಜಿ ತಂಡದ ಮಾಜಿ ಆಟಗಾರ ಎಸ್ ಅರವಿಂದ್ ಅವರ ಬುಲೆಟ್ ಬೈಕ್ ಕಳವು ಮಾಡಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರ್‌ಟಿ ನಗರದಲ್ಲಿ ವಾಸವಿದ್ದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಅಬ್ದುಲ್ ವಹೀದ್ ಹಾಗೂ ಅಬ್ರಾರ್ ಬಂಧಿತರು.

ಕೆಲ ದಿನಗಳ ಹಿಂದೆ ಮತ್ತಿಕೆರೆಯ ಈಶ್ವರ ದೇಗುಲದ ಸಮೀಪ ನಡೆದುಕೊಂಡು ಹೋಗುತ್ತಿದ್ದ ಗೀತಾ ಎಂಬುವವರ ಬಳಿ ಚಿನ್ನದ ಸರ ಕಿತ್ತುಕೊಂಡು ಹೋಗುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದಾಗ ಕ್ರಿಕೆಟಿಗ ಅರವಿಂದ್ ಬೈಕ್ ಇನ್ನಿತರೆ 20 ಬೈಕ್ ಕಳವು ಪ್ರಕರಣ ಬೆಳಕಿಗೆ ಬಂದಿದೆ.

Story first published: Thursday, January 3, 2019, 15:39 [IST]
Other articles published on Jan 3, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+