ಬೆಂಗಳೂರು: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿರುವ ಕರ್ನಾಟಕ ತಂಡ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡದ ಸವಾಲು ಸ್ವೀಕರಿಸಲಿದೆ. ಈ ಪಂದ್ಯ ಜನವರಿ 26ರ ಮಂಗಳವಾರ ಸರ್ದಾರ್ ಪಟೇಲ್ ಸ್ಟೇಡಿಯಂ ಅಹ್ಮದಾಬಾದ್ನಲ್ಲಿ ನಡೆಯಲಿದೆ.
ಐಪಿಎಲ್ 2021: ಚೆನ್ನೈ ಸೂಪರ್ ಕಿಂಗ್ಸ್ ಸೇರಿದ ರಾಬಿನ್ ಉತ್ತಪ್ಪ
ಎಲೈಟ್ ಗ್ರೂ 'ಎ'ಯಲ್ಲಿರುವ ಕರ್ನಾಟಕ ತಂಡ ಲೀಗ್ ಹಂತದ ಕೊನೇ ಪಂದ್ಯವಾಡಿದ್ದು ಉತ್ತರಪ್ರದೇಶದ ವಿರುದ್ಧ. ಇದರಲ್ಲಿ 5 ವಿಕೆಟ್ ಜಯದೊಂದಿಗೆ ಕರ್ನಾಟಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದೊಂದಿಗೆ ಲೀಗ್ ಹಂತದ ಸ್ಪರ್ಧೆ ಮುಗಿಸಿತ್ತು.
ಗ್ರೂಪ್ 'ಎ'ಯಲ್ಲಿ ಪಂಜಾಬ್ ತಂಡ ಮೊದಲ ಸ್ಥಾನದಲ್ಲಿದೆ. ಪಂಜಾಬ್ ತಂಡ ಆಡಿರುವ 5 ಪಂದ್ಯಗಳಲ್ಲಿ ಐದರಲ್ಲೂ ಗೆಲುವು ಕಂಡು ಬಲಿಷ್ಠ ತಂಡವಾಗಿ ಹೊರಹೊಮ್ಮಿದ್ದರೆ, ಕರ್ನಾಟಕ ಆಡಿದ 5 ಪಂದ್ಯಗಳಲ್ಲಿ 4ರಲ್ಲಿ ಗೆಲುವು ಕಂಡಿತ್ತು. ಕರುಣ್ ನಾಯರ್ ಕರ್ನಾಟಕ ತಂಡಕ್ಕೆ ನಾಯಕರಾಗಿದ್ದಾರೆ.
ಟೆಸ್ಟ್ ಸರಣಿ ಮುಗಿಯುತ್ತಲೇ ಕೆಜಿಎಫ್ನ "ರಾಕಿ ಭಾಯ್" ಅವತಾರವೆತ್ತಿದ ವಾರ್ನರ್
ಜನವರಿ 26ರಂದು ಪ್ರಥಮ ಮತ್ತು ದ್ವಿತೀಯ ಕ್ವಾರ್ಟರ್ ಫೈನಲ್ ಪಂದ್ಯಗಳು ಅಹ್ಮದಾಬಾದ್ನಲ್ಲಿ ನಡೆಯಲಿವೆ. ಮೊದಲ ಪಂದ್ಯ 12 pmಗೆ ಆರಂಭಗೊಂಡರೆ, ದ್ವಿತೀಯ ಪಂದ್ಯ 7 pmಗೆ ಆರಂಭವಾಗಲಿದೆ. ಜನವರಿ 27ರಂದು ತೃತೀಯ ಮತ್ತು ಚತುರ್ಥ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿವೆ. ಜನವರಿ 29ರಂದು ಸೆಮಿಫೈನಲ್ ಪಂದ್ಯಗಳು ಮತ್ತು ಜನವರಿ 31ರಂದು ಫೈನಲ್ ಪಂದ್ಯ ನಡೆಯಲಿದೆ.