ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಭೀಕರ ವಿಮಾನ ದುರಂತದ ಒಂದು ದಶಕದ ನಂತರ ಅದೇ ಮಾದರಿಯ ದುರಂತ ಕೇರಳದಲ್ಲಿ ನಡೆದಿದೆ. ವಿದೇಶದಲ್ಲಿದ್ದ ಭಾರತೀಯರನ್ನು ಹೊತ್ತು ತಂದಿದ್ದ ಏರ್ ಇಂಡಿಯಾ ವಿಮಾನದಲ್ಲಿ 190 ಮಂದಿ ಪ್ರಯಾಣಸಿದ್ದರು. ಈ ಭೀಕರ ಅಪಘಾತಕ್ಕೆ ಟೀಮ್ ಇಂಡಿಯಾ ಕ್ರಿಕೆಟಿಗರು ಆಘಾತ ವ್ಯಕ್ತಪಡಿಸಿದ್ದಾರೆ.
ಪೈಲಟ್ ಸಹಿತ 18 ಮಂದಿ ಪ್ರಯಾಣಿಕರು ಈ ದುರಂತದಲ್ಲಿ ಸಾವನ್ನಪ್ಪಿದ್ದು 40ರಷ್ಟು ಪ್ರಯಾಣಿಕರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ದುರಂತಕ್ಕೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದು ವಿಮಾನದಲ್ಲಿದ್ದ ಎಲ್ಲರಿಗಾಗಿ ಪ್ರಾರ್ಥಿಸುತ್ತೇನೆ. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟಂಬಸ್ಥರಿಗೆ ನನ್ನ ಸಂತಾಪಗಳು ಎಂದು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.
Praying for those who have been affected by the aircraft accident in Kozhikode. Deepest condolences to the loved ones of those who have lost their lives. 🙏🏼
— Virat Kohli (@imVkohli) August 7, 2020
ಕೊರೊನಾ ವೈರಸ್ನ ಕಾರಣದಿಂದಾಗಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಾಗುತ್ತಿತ್ತು. ಆದರೆ ಲ್ಯಾಂಡಿಂಗ್ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿ ಬದುಕುಳಿದವರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ. ಪ್ರಾಣ ಕಳೆದುಕೊಂಡವರ ಕುಟಂಬಕ್ಕೆ ನನ್ನ ಸಾಂತ್ವಾನಗಳು ಎಂದು ಪ್ರತಿಕ್ರಿಯಿಸಿದ್ದಾರೆ.
Praying for the safety of everyone onboard the #AirIndia Express Aircraft that’s overshot the runway at Kozhikode Airport, Kerala.
— Sachin Tendulkar (@sachin_rt) August 7, 2020
Deepest condolences to the families who have lost their near ones in this tragic accident.
ಈ ದುರಂತವನ್ನು ಆಘಾತಕಾರಿ ಸುದ್ದಿ ಎಂದು ಟೀಮ್ ಇಂಡಿಯಾ ಸೀಮಿತ ಓವರ್ಗಳ ನಾಯಕ ರೊಹಿತ್ ಶರ್ಮಾ ಟ್ವೀಟ್ ಮಾಡಿದ್ದಾರೆ. ಪ್ರಯಾಣಿಕರು ಹಾಗೂ ಏರ್ ಇಂಡಿಯಾದ ಎಲ್ಲಾ ಸಿಬ್ಬಂದಿಗಳಿಗಾಗಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Praying for the passengers and the staff on the #AirIndia flight in Kozhikode. Shocking news.
— Rohit Sharma (@ImRo45) August 7, 2020
ಈ ದುರಂತಕ್ಕೆ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಗೌತಮ್ ಗಂಭೀರ್ ಕೂಡ ಪ್ರತಿಕ್ರಿಯಿಸಿದ್ದಾರೆ. ಯುವರಾಜ್ ಸಿಂಗ್ ಪ್ರಯಾಣಿಕರು ಹಾಗೂ ಸಿಬ್ಬಂದಿಗಳಿಗಾಗಿ ಪ್ರಾರ್ಥಿಸುತ್ತೇಮೆ ಎಂದು ಹೇಳುತ್ತಾ, 2020 ದಯವಿಟ್ಟು ಕರುಣೆ ತೋರಿಸು ಎಂದು ಟ್ವೀಟ್ ಮಾಡಿದ್ದಾರೆ. ಗಾಯಗೊಂಡಿರುವ ಎಲ್ಲರೂ ಶೀಘ್ರವೇ ಗುಣಮುಖರಾಗಲಿ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.
Shocking news of the Kozhikode flight crash. Prayers for the passengers and crew. 2020 please have mercy 🙏🏻🙏🏻
— Yuvraj Singh (@YUVSTRONG12) August 7, 2020
Terrible news coming from Kozhikode. Frightening visuals of the plane breaking apart. Hoping and praying that all passengers are evacuated safely as soon as possible!
— Gautam Gambhir (@GautamGambhir) August 7, 2020