ದೀಪಕ್ ಚಹರ್
ಟೀಮ್ ಇಂಡಿಯಾದ ಯುವ ಬೌಲರ್ ದೀಪಕ್ ಚಹರ್ ಕಳೆದ ಫೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ ಟ್ವೆಂಟಿ ಪಂದ್ಯದ ವೇಳೆ ಭುಜದ ಗಾಯದ ಸಮಸ್ಯೆಗೊಳಗಾಗಿದ್ದರು. ಇದೇ ಕಾರಣಕ್ಕಾಗಿ ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ದೀಪಕ್ ಚಹರ್ ಕಣಕ್ಕಿಳಿದಿರಲಿಲ್ಲ. ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೀಪಕ್ ಚಹರ್ ಮತ್ತೆ ಬೆನ್ನಿನ ಗಾಯದ ಸಮಸ್ಯೆಗೊಳಗಾಗಿದ್ದು, ಇತ್ತೀಚಿನ ಸರಣಿಗಳಲ್ಲಿ ಅವಕಾಶ ಸಿಗದೇ ಹೊರಬಿದ್ದಿದ್ದಾರೆ.
ಕುಲದೀಪ್ ಯಾದವ್
ಮೊಣಕೈ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕುಲದೀಪ್ ಯಾದವ್ ತವರಿನಲ್ಲಿ ಇತ್ತೀಚೆಗಷ್ಟೇ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಿಂದ ಹೊರಬಿದ್ದಿದ್ದರು. ನಂತರ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆಗೆ ಒಳಪಟ್ಟ ಕುಲದೀಪ್ ಯಾದವ್ ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ.
ಕೆಎಲ್ ರಾಹುಲ್
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ವೇಳೆ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೆಎಲ್ ರಾಹುಲ್ ಟೂರ್ನಿ ಮುಕ್ತಾಯವಾದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾಗವಹಿಸಲು ಆಗಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ನಾಯಕನಾಗಿ ಆಯ್ಕೆಯಾಗಿದ್ದ ಕೆ ಎಲ್ ರಾಹುಲ್ ತೊಡೆಸಂದು ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದರು. ಸದ್ಯ ಇತ್ತೀಚೆಗಷ್ಟೇ ಈ ಕುರಿತಾಗಿ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಯನ್ನು ಪಡೆದಿರುವ ಕೆ ಎಲ್ ರಾಹುಲ್ ಸದ್ಯ ತಂಡದಿಂದ ಹೊರಗುಳಿದಿದ್ದಾರೆ.