ಭಾನುವಾರ, ಅಕ್ಟೋಬರ್ 29ರಂದು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯುವ 2023ರ ಐಸಿಸಿ ಏಕದಿನ ವಿಶ್ವಕಪ್ನ 29ನೇ ಪಂದ್ಯದಲ್ಲಿ ಭಾರತ ತಂಡವು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಇದೇ ವೇಳೆ 2023ರ ವಿಶ್ವಕಪ್ನಲ್ಲಿ ಭಾರತ ತಂಡದ ಆರನೇ ಪಂದ್ಯದ ಮುನ್ನಾದಿನದಂದು, ಭಾರತದ ವಿಕೆಟ್ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ಅವರು ಇಂಗ್ಲೆಂಡ್ ವಿರುದ್ಧದ ಪಂದ್ಯವನ್ನು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಪ್ಪಿಸಿಕೊಳ್ಳಲಿದ್ದಾರೆ ಎಂದು ಬಹಿರಂಗಪಡಿಸಿದರು.
ಹಾರ್ದಿಕ್ ಪಾಂಡ್ಯ ಪಾದದ ಗಾಯದ ಕಾರಣ ಸತತ ಎರಡನೇ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ. ಹೀಗಾಗಿ ಲಕ್ನೋದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕಾಗಿ ಅಜೇಯ ಭಾರತ ತಂಡವು ತಮ್ಮ ಆಡುವ 11ರ ಬಳಗದಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲು ನಿರೀಕ್ಷಿಸುತ್ತಿಲ್ಲ.

ವಿಶ್ವಕಪ್ನಲ್ಲಿ ಹಾರ್ದಿಕ್ ಪಾಂಡ್ಯ ಹಿಂತಿರುಗುವವರೆಗೂ ಭಾರತ ತಂಡವು ಸೂರ್ಯಕುಮಾರ್ ಯಾದವ್ ಮೇಲೆ ವಿಶ್ವಾಸ ಹೊಂದಿದೆ ಎಂದು ಕೆಎಲ್ ರಾಹುಲ್ ಹೇಳಿದರು.
"ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಲಭ್ಯವಿಲ್ಲ. ಸೂರ್ಯಕುಮಾರ್ ಯಾದವ್ ಸಿಕ್ಕ ಅವಕಾಶದಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ," ಎಂದು ಕೆಎಲ್ ರಾಹುಲ್ ಶನಿವಾರ ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದರು.

ಸೂರ್ಯಕುಮಾರ್ ಯಾದವ್ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಏಕದಿನ ವಿಶ್ವಕಪ್ಗೆ ಪದಾರ್ಪಣೆ ಮಾಡಿದರು. ಆದರೆ ವಿರಾಟ್ ಕೊಹ್ಲಿಯೊಂದಿಗಿನ ಸಂವಹನ ಕೊರತೆಯಿಂದ 1 ರನ್ ಗಳಿಸಿದ ನಂತರ ರನೌಟ್ ಆದರು.
ಕೆಎಲ್ ರಾಹುಲ್ ಅವರು ನಾಯಕರಾಗಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ತವರು ಲಕ್ನೋದ ಏಕಾನಾ ಸ್ಟೇಡಿಯಂಗೆ ಸಂತೋಷದಿಂದ ಮರಳುತ್ತಿದ್ದೇನೆ ಎಂದರು.
2023ರ ಐಪಿಎಲ್ನಲ್ಲಿ ಮೇ 1ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ತೊಡೆಯ ಗಾಯಕ್ಕೆ ಒಳಗಾದ ನಂತರ ಕೆಎಲ್ ರಾಹುಲ್ ನಾಲ್ಕು ತಿಂಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ಹೊರಗುಳಿದಿದ್ದರು.
"ನಾನು ಇಂದು ಮೈದಾನವನ್ನು ಪ್ರವೇಶಿಸಿದೆ ಮತ್ತು ಸ್ವಲ್ಪ ಓಡಿದೆ. ನನ್ನ ತರಬೇತುದಾರ ರಜಿನಿ ಸರ್ ಅವರಿಗೆ ನನ್ನ ಹೃದಯ ಬಡಿತದಲ್ಲಿದೆ ಎಂದು ನಾನು ಹೇಳಿದೆ. ಏಕೆಂದರೆ ನಾನು ಕಳೆದ ಬಾರಿ ಇಲ್ಲಿಗೆ ಬಂದಾಗ, ನನಗೆ ಅಂತಹ ಉತ್ತಮ ಅನುಭವವಾಗಲಿಲ್ಲ. ನನ್ನ ವೃತ್ತಿಜೀವನದಲ್ಲಿ ಅದು ಉತ್ತಮ ಕ್ಷಣವಲ್ಲ, ಸ್ವಲ್ಪ ಕಹಿಯಾಗಿತ್ತು,'' ಎಂದು ಕೆಎಲ್ ರಾಹುಲ್ ಶನಿವಾರ ಬಿಸಿಸಿಐ ಟಿವಿಗೆ ತಿಳಿಸಿದರು.
ಭಾರತ ತಂಡವು ಲಕ್ನೋದಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಾಡುವಾಗ ಸೆಮಿಫೈನಲ್ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಆದರೆ, ಹಾಲಿ ಚಾಂಪಿಯನ್ ಇಂಗ್ಲೆಂಡ್ ಸೆಮಿಫೈನಲ್ನಲ್ಲಿ ತಮ್ಮ ಸ್ಥಾನವನ್ನು ಜೀವಂತವಾಗಿರಿಸಿಕೊಳ್ಳಲು ಹೋರಾಡಬೇಕಿದೆ.