ತಂಡದ ನಾಯರಿಂದ ರ್ಯಾಂಪ್ ವಾಕ್
ಟ್ರೋಫಿ ಅನಾವರಣಕ್ಕೆ ಮುನ್ನ 8 ತಂಡಗಳ ನಾಯಕರು ಯುವತಿಯರೊಂದಿಗೆ ರ್ಯಾಂಪ್ ವಾಕ್ ಮಾಡಿದರು. ತಂಡದ ಕ್ಯಾಪ್ಟನ್ಸ್ ತಮ್ಮ ತಂಡದ ಜರ್ಸಿನೊಂದಿಗೆ ರ್ಯಾಂಪ್ ನಲ್ಲಿ ಹೆಜ್ಜೆ ಹಾಕಿ ಟ್ರೋಫಿ ಗೆಲ್ಲುವ ವಿಶ್ವಾಸ ತೋರಿಸಿದರು.
ಬ್ರಜೇಶ್ ಪಟೇಲ್ ಅವರಿಂದ ಟ್ರೋಫಿ ಅನಾವರಣ
ಹುಬ್ಬಳ್ಳಿಯಲ್ಲಿರುವ ಡೆನಿಸನ್ ಹೊಟೇಲ್ ನಲ್ಲಿ ನಡೆದ ಟ್ರೋಫಿ ಅನಾವರಣ ಸಮಾರಂಭದಲ್ಲಿ ಕೆಎಸ್ ಸಿಎ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಟ್ರೋಫಿ ಅನಾವರಣಗೊಳಿಸಿದರು.
ಎಲ್ಲಿ ಪ್ರಸಾರ
ಪಂದ್ಯಗಳನ್ನು ಸೋನಿ ಇಎಸ್ ಪಿಎನ್ ಚಾನೆಲ್ ನಲ್ಲಿ ನೇರ ಪ್ರಸಾರವಾಗಲಿದೆ. ಕೆಪಿಎಲ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು http://hrgcricstats.com/ ಇಲ್ಲಿ ಪಡೆದುಕೊಳ್ಳಬಹುದಾಗಿದೆ.
ಶಾಲಾ. ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ
ಪಂದ್ಯಗಳನ್ನು ವೀಕ್ಷಿಸಲು ಶಾಲಾ. ಕಾಲೇಜು ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಈ ಬಗ್ಗೆ ಎಲ್ಲ ಶಾಲಾ, ಕಾಲೇಜುಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕೆಎಸ್ ಸಿಎ ಧಾರವಾಡ ವಲಯದ ನಿಯಂತ್ರಕ ಬಾಬಾ ಭೂಸದ ಹೇಳಿದರು.
ಪಂದ್ಯಗಳಿಗೆ ಮಳೆಯ ಭೀತಿ
ಉತ್ತರ ಕರ್ನಾಟಕದಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಸದ್ಯ ನಗರದಲ್ಲಿ ಜಿಟಿಜಿಟಿ ಹಿಂಗಾರು ಮಳೆ ಆರಂಭವಾಗಿದ್ದು, ಹೊನಲು ಬೆಳಕಿನ ಪಂದ್ಯಕ್ಕೆ ಮಳೆ ಅಡ್ಡಿಪಡಸಲಿದೆ ಎಂಬ ಆತಂಕ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದೆ.