ಬೆಂಗಳೂರು, ಆಗಸ್ಟ್ 10: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ ಸಿಎ) ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಮಧ್ಯಾಹ್ನ ಆಟಗಾರರ ಹರಾಜು ಪ್ರಕ್ರಿಯೆ ನಡೆಸಿದೆ. ಕಾಮೆಂಟೆಟರ್ ಚಾರುಶರ್ಮ ಅವರು ಹರಾಜು ಪ್ರಕ್ರಿಯೆ ನಡೆಸಿಕೊಡುತ್ತಿದ್ದಾರೆ. ಕರ್ನಾಟಕ ಪ್ರಿಮಿಯರ್ ಲೀಗ್ (ಕೆಪಿಎಲ್) ನಲ್ಲಿ ಯಾವ ಆಟಗಾರರು ಯಾವ ತಂಡಕ್ಕೆ ಸೇರಿದ್ದಾರೆ ಇಲ್ಲಿದೆ ಅಪ್ಡೇಟ್ಸ್. ಹರಾಜಾದ ಆಟಗಾರರ ಪೂರ್ತಿ ಪಟ್ಟಿಯನ್ನು ಡೌನ್ ಮಾಡಿಕೊಳ್ಳಲು ಲೇಖನದ ಕೊನೆಯಲ್ಲಿ ಲಿಂಕ್ ನೀಡಲಾಗಿದೆ.
ಐದನೇ ಆವೃತ್ತಿಯ ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್ ) ಟ್ವೆಂಟಿ20 ಟೂರ್ನಮೆಂಟ್ ಸೆಪ್ಟೆಂಬರ್ 16 ರಿಂದ ಅಕ್ಟೋಬರ್ 01 ರ ತನಕ ನಡೆಯಲಿದೆ. ಹುಬ್ಬಳ್ಳಿಯಲ್ಲಿ ಈ ಬಾರಿ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿವೆ.
ಸೆಪ್ಟೆಂಬರ್ 22ರಿಂದಲೇ ಮೈಸೂರಿನ ಒಡೆಯರ್ ಮೈದಾನದಲ್ಲಿ ಆರಂಭಿಕ ಹಂತದ ಪಂದ್ಯಗಳು ನಡೆಯಲಿವೆ. [ಸೆಪ್ಟೆಂಬರ್ 16ರಿಂದ ಕೆಪಿಎಲ್ 5ನೇ ಸೀಸನ್ ಶುರು]

* ಸತೀಶ್ ಭಾರದ್ವಾಜ್ ಅವರು 40,000 ರು ಗಳಿಗೆ ಬೆಳಗಾವಿ ತಂಡಕ್ಕೆ



ಒಟ್ಟು 8 ತಂಡಗಳು ಟ್ರೋಫಿಗಾಗಿ ಕಾದಾಡಲಿದ್ದು, ಆಟಗಾರರ ಹರಾಜು ಪ್ರಕ್ರಿಯೆ ಆಗಸ್ಟ್ 10ರಂದು ನಡೆಯಲಿದೆ. ಪ್ರತಿ ತಂಡಗಳು ನಾಲ್ಕು ಹಳೆ ಆಟಗಾರರನ್ನು ಉಳಿಸಿಕೊಳ್ಳಬಹುದು ಹಾಗೂ ಪ್ರತಿ ತಂಡದಲ್ಲಿ 18 ಮಂದಿ ಆಟಗಾರರಿರಬಹುದು.
ಪೂರ್ತಿ ಪಟ್ಟಿಯನ್ನು ಡೌನ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ:
{file1}
ತಂಡಗಳು: ಮೈಸೂರು ವಾರಿಯರ್ಸ್, ಮಂಗಳೂರು ಯುನೈಟೆಡ್, ಬೆಳಗಾವಿ ಪ್ಯಾಂಥರ್ಸ್, ಬಿಜಾಪುರ್ ಬುಲ್ಸ್, ಬಳ್ಳಾರಿ ಟಸ್ಕರ್, ಹುಬ್ಬಳ್ಳಿ ಟೈಗರ್ಸ್, ನಮ್ಮ ಶಿವಮೊಗ್ಗ. ರಾಕ್ ಸ್ಟಾರ್ಸ್ (ಒನ್ಇಂಡಿಯಾ ಸುದ್ದಿ)