ಬೆಂಗಳೂರು, ಆಗಸ್ಟ್ 18: ಮಾಜಿ ಚಾಂಪಿಯನ್ಸ್ ಮೈಸೂರು ವಾರಿಯರ್ಸ್ ವಿರುದ್ಧ ಬೌಲಿಂಗ್ ಹಾಗೂ ಬ್ಯಾಟಿಂಗ್ ನಲ್ಲಿ ಮಿಂಚಿದ ಶಿವಮೊಗ್ಗ ಲಯನ್ಸ್ ತಂಡ 14 ರನ್ ಅಂತರದಲ್ಲಿ ಜಯ ದಾಖಲಿಸುವ ಮೂಲಕ ಕರ್ನಾಟಕ ಪ್ರೀಮಿಯರ್ ಲೀಗ್ ನ 8 ನೇ ಆವೃತ್ತಿಯಲ್ಲಿ ತನ್ನ ಜಯದ ಓಟವನ್ನು ಮುಂದುವರಿಸಿದೆ.
ಇಲ್ಲಿನ ಎಂ. ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ166 ರನ್ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಮೈಸೂರು ವಾರಿಯರ್ಸ್, ಎದುರಾಳಿ ಶಿವಮೊಗ್ಗ ತಂಡದ ಸ್ಪಿನ್ ಹಾಗೂ ವೇಗದ ಬೌಲಿಂಗ್ ದಾಳಿಗೆ ತತ್ತರಿಸಿ 152 ರನ್ಗೆ ಆಲ್ಔಟ್ ಆಯಿತು. ಕೆ. ವಿ. ಸಿದ್ದಾರ್ಥ್ 77 ರನ್ ಗಳಿಸಿ ದಿಟ್ಟ ಹೋರಾಟ ನೀಡಿದರೂ ತಂಡವನ್ನು ಸೋಲಿನಿದಿಂದ ಪಾರು ಮಾಡಲಾಗಲಿಲ್ಲ.
ಸ್ಮಿತ್ಗೆ ಪೆಟ್ಟು ನೀಡಿ ನಗುತ್ತಿದ್ದ ಆರ್ಚರ್ಗೆ ಬೌನ್ಸರ್ ಎಸೆದ ಅಖ್ತರ್!
ಶಿವಮೊಗ್ಗ ಲಯನ್ಸ್ ಪರ ಟಿ. ಪ್ರದೀಪ್ ಹಾಗೂ ಎಚ್. ಎಸ್ ಶರತ್ ತಲಾ 3 ವಿಕೆಟ್ ಗಳಿಸಿ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದರು. ನಾಯಕ ಅಭಿಮನ್ಯು ಮಿಥುನ್ ಹಾಗೂ ಎಸ್. ಪಿ ಮಂಜುನಾಥ್ ತಲಾ ಎರಡು ವಿಕೆಟ್ ಗಳಿಸಿ ಜಯದ ಹಾದಿಯನ್ನು ಸುಗಮಗೊಳಿಸಿದರು. ಶಿವಮೊಗ್ಗ ಲಯನ್ಸ್ ಪರ ಪವನ್ ದೇಶಪಾಂಡೆ ಗಳಿಸಿದ 53 ರನ್ ಜಯದಲ್ಲಿ ಪ್ರಮುಖವಾಯಿತು. ಶಿವಮೊಗ್ಗ ಸತತ ಎರಡನೇ ಜಯ ಗಳಿಸಿದರೆ, ಮೈಸೂರು ಮೊದಲ ಪಂದ್ಯದಲ್ಲಿ ಅಂಕ ಹಂಚಿಕೊಂಡು ಈಗ ಸೋಲಿನ ಆಘಾತ ಅನುಭವಿಸಿತು.
ಪಾಂಡ್ಯ ಬ್ರದರ್ಸ್ ಖರೀದಿಸಿರುವ ಹೊಸ ಕಾರಿನ ಬೆಲೆಯೆಷ್ಟೂ ಗೊತ್ತಾ?
ಶಿವಮೊಗ್ಗ ಸವಾಲಿನ ಮೊತ್ತ
ಕರ್ನಾಟಕ ಪ್ರೀಮಿಯರ್ ಲೀಗ್ ನ 8 ನೇ ಆವೃತ್ತಿಯ ನಾಲ್ಕನೇ ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ ಹಾಗೂ ಮೈಸೂರು ವಾರಿಯರ್ಸ್ ತಂಡಗಳು ಮುಖಾಮುಖಿಯಾದವು. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಲಯನ್ಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿ ದಿಟ್ಟ ಸವಾಲೊಡ್ಡಿತು.
ವಿಂಡೀಸ್ ವಿರುದ್ಧದ ಅಭ್ಯಾಸ ಪಂದ್ಯ, ಚೇತೇಶ್ವರ್ ಪೂಜಾರ ಶತಕ ವೈಭವ
ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಶಿವಮೊಗ್ಗದ ಪರ ಮೊದಲ ಪಂದ್ಯದ ಹೀರೋ ನಿಹಾಲ್ ಉಳ್ಳಾಲ್ ಕೇವಲ 28 ರನ್ ಗಳಿಸಿ ನಿರ್ಗಮಿಸಿರವುದು ತಂಡದ ರನ್ ಗಳಿಕೆಯ ಮೇಲೆ ಕಡಿವಾಣ ಹಾಕಿದಂತಾಯಿತು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಬಲ್ಲ ಅರ್ಜುನ್ ಹೊಯ್ಸಳ ಕೂಡ 28 ರನ್ ಗೆ ತೃಪ್ತಿಪಟ್ಟರು. 17 ಎಸೆತಗಳನ್ನು ಎದುರಿಸಿದ ಉಲ್ಲಾಳ್ 5 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಆತ್ಮವಿಶ್ವಾಸದ ಆಟ ಆರಂಭಿಸಿದ್ದರು ಆದರೆ ವೈಶಾಖ್ ವಿಜಯ್ ಕುಮಾರ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು. ಹುಬ್ಬಳ್ಳಿ ಟೈಗರ್ಸ್ ವಿರುದ್ಧದ ಪಂದ್ಯದಲ್ಲೂ ಉಳ್ಳಾಲ್ ಅಜೇಯ 88 ರನ್ ಸಿಡಿಸಿ ಜಯದ ರೂವಾರಿ ಎನಿಸಿದ್ದರು.
ಐಸಿಸಿ ಟೆಸ್ಟ್ ಚಾಂಪಿಯನ್ಷಿಪ್: ಟೀಮ್ ಇಂಡಿಯಾದ ವೇಳಾಪಟ್ಟಿ
ಶಿವಮೊಗ್ಗ ತಂಡ ಸವಾಲಿನ ಮೊತ್ತ ಗಳಿಸುವಲ್ಲಿ ಪವನ್ ದೇಶಪಾಂಡೆ ಅವರ ಆಕರ್ಷಕ ಅರ್ಧ ಶತಕ ಪ್ರಮುಖ ಪಾತ್ರ ವಹಿಸಿತು. 42 ಎಸೆತಗಳನ್ನೆದುರಿಸಿದ ದೇಶಪಾಂಡೆ 3 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಮೂಲ್ಯ 53 ರನ್ ಗಳಿಸಿ ಪ್ರಸಕ್ತ ಕೆಪಿಎಲ್ ನಲ್ಲಿ ವೈಯಕ್ತಿಕ ಮೊದಲ ಅರ್ಧ ಶತಕ ದಾಖಲಿಸಿದರು. ಶಿವಮೊಗ್ಗ ತಂಡದ ಇತರ ಬ್ಯಾಟ್ಸಮನ್ ಗಳು ಲಗುಬಗನೇ ವಿಕೆಟ್ ಒಪ್ಪಿಸಿದರೂ ಹೆಚ್ಚು ಹೆಚ್ಚು ಚೆಂಡುಗಳನ್ನು ವ್ಯಯ ಮಾಡಲಿಲ್ಲ. ಶಿವಮೊಗ್ಗದ ಇನ್ನಿಂಗ್ಸ್ ನಲ್ಲಿ 6 ಸಿಕ್ಸರ್ ಹಾಗೂ 16 ಬೌಂಡರಿ ಸೀರಿತ್ತು.
ಮೈಸೂರು ವಾರಿಯರ್ಸ್ ಪರ ವೈಶಾಖ್ ವಿಜಯ್ ಕುಮಾರ್ 2 ವಿಕೆಟ್ ಗಳಿಸಿದರೂ ನಾಲ್ಕು ಓವರ್ ಗಳಲ್ಲಿ 41 ರನ್ ನೀಡಿ ದುಬಾರಿ ಬೌಲರ್ ಎನಿಸಿದರು. ದೇವಯ್ಯ, ಅನಿರುಧ್ ಜೋಶಿ, ವೆಂಕಟೇಶ್ ಹಾಗೂ ಸಿದ್ದಾರ್ಥ್ ತಲಾ ಒಂದು ವಿಕೆಟ್ ಗಳಿಸಿದರು.
ಕೆಪಿಎಲ್ 2019: ಕೊನೆಯ ಓವರ್ನಲ್ಲಿ ಬಳ್ಳಾರಿ ಟಸ್ಕರ್ಸ್ ಗೆ ರೋಚಕ ಜಯ
ಸಂಕ್ಷಿಪ್ತ ಸ್ಕೋರ್
ಶಿವಮೊಗ್ಗ ಲಯನ್ಸ್: 20 ಓವರ್ಗಳಲ್ಲಿ 7 ವಿಕೆಟ್ಗೆ 166 (ಅರ್ಜುನ್ ಹೊಯ್ಸಳ 28, ನಿಹಾಲ್ ಉಲ್ಲಾಳ್ 28, ಪವನ್ ದೇಶಪಾಂಡೆ 53; ವೈಶಾಖ್ ವಿಜಯ್ ಕುಮಾರ್ 41ಕ್ಕೆ 2).
ಮೈಸೂರು ವಾರಿಯರ್ಸ್: 19.2 ಓವರ್ಗಳಲ್ಲಿ 152/10 (ಕೆವಿ ಸಿದ್ಧಾರ್ಥ್ 77, ಅನಿರುದ್ಧ ಜೋಶಿ 26; ಟಿ. ಪ್ರದೀಪ್ 22ಕ್ಕೆ 3, ಎಚ್ಎಸ್ ಶರತ್ 36ಕ್ಕೆ 3, ಎಸ್ಪಿ ಮಂಜುನಾಥ್ 17ಕ್ಕೆ 2, ಅಭಿಮನ್ಯು ಮಿಥುನ್ 34ಕ್ಕೆ 2).