ಹುಬ್ಬಳ್ಳಿ, ಸೆಪ್ಟೆಂಬರ್ 18: ಕರ್ನಾಟಕ ಪ್ರೀಮಿಯರ್ ಲೀಗ್ (ಕೆ ಪಿಎಲ್ ) ಐದನೇ ಅವೃತ್ತಿಯ ಎರಡನೇ ಪಂದ್ಯದಲಿಲಿ ಶನಿವಾರದಂದು ಹಾಲಿ ಚಾಂಪಿಯನ್ ಮೈಸೂರು ವಾರಿಯರ್ಸ್ ತಂಡವು ಮಂಗಳೂರು ಯುನೈಟೆಡ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿತು.
ಟಾಸ್ ಗೆದ್ದುಕೊಂಡು ಬ್ಯಾಟಿಂಗ್ ಗೆ ಇಳಿದ ಮಂಗಳೂರು ಯುನೈಟೆಡ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 148 ರನ್ ಗಳಿಸಿತ್ತು. ತಂಡದ ಸಿ.ಎಂ.ನಾಯಕ್ 55 ಎಸೆತಗಳಲ್ಲಿ 64 ರನ್ , ನಿದೀಶ್ ಎಂ. 40 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಗಳೊಂದಿಗೆ 54 ರನ್ ಗಳಿಸಿದ್ದರು.
