ಭರ್ಜರಿ ಪ್ರದರ್ಶನ ನೀಡಿದ ಮಯಾಂಕ್ ಅಗರ್ವಾಲ್
ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸಿರುವ ಮಯಾಂಕ್ ಅಗರ್ವಾಲ್ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಾಯಕನಾಗಿ ಬ್ಯಾಟಿಂಗ್ನಲ್ಲಿ ಮಿಂಚಲು ವಿಫಲವಾಗಿದ್ದರು. ಆದರೆ ಮಹಾರಾಜ ಕಪ್ನಲ್ಲಿ ಮಯಾಂಕ್ ಅಗರ್ವಾಲ್ ಅಮೋಘ ಪ್ರದರ್ಶನ ನೀಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ಮಯಾಂಕ್ ಅಗರ್ವಾಲ್ ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಾಯಕತ್ವದ ಹೊಣೆಗಾರಿಕೆ ಹೊತ್ತುಕೊಂಡಿದ್ದಾರೆ. ಫೈನಲ್ ಪಂದ್ಯಕ್ಕೂ ಮುನ್ನ 11 ಇನ್ನಿಂಗ್ಸ್ಗಳಲ್ಲಿ ಕಣಕ್ಕಿಳಿದಿರುವ ಮಯಾಂಕ್ ಅಗರ್ವಾಲ್ 480 ರನ್ಗಳನ್ನು ಗಳಿಸಿದ್ದಾರೆ. 167.24 ಸ್ಟ್ರೈಕ್ರೇಟ್ನಲ್ಲಿ ಬ್ಯಾಟ್ ಬೀಸಿದ್ದಾರೆ.
ಕಳೆದ ಬಾರಿಯಂತಿಲ್ಲ ಭಾರತ ತಂಡ: ಏಷ್ಯಾ ಕಪ್ಗೆ ಮುನ್ನ ಎಚ್ಚರಿಕೆ ಸಂದೇಶ ನೀಡಿದ ನಾಯಕ ರೋಹಿತ್
ಫಾರ್ಮ್ಗೆ ಮರಳಿದ ಮನೀಶ್ ಪಾಂಡೆ
ಕರ್ನಾಟಕದ ಪ್ರಮುಖ ಆಟಗಾರ ಮನೀಶ್ ಪಾಂಡೆ ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರವಾಗಿ ಆಡಿದ್ದು ಕಳಪೆ ಪ್ರದರ್ಶನ ನೀಡಿದ್ದರು. ಆದರೆ ಮಹಾರಾಜ ಟ್ರೋಫಿಯಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ತಂಡದ ನಾಯಕತ್ವ ವಹಿಸಿಕೊಂಡಿರುವ ಮನೀಶ್ ಪಾಂಡೆ ಅದ್ಭುತ ಪ್ರದರ್ಶನ ನೀಡಿದ್ದಾರೆ. 10 ಇನ್ನಿಂಗ್ಸ್ಗಳಲ್ಲಿ 317 ರನ್ಗಳನ್ನು ಗಳಿಸಿರುವ ಮನೀಶ್ ಪಾಂಡೆ 153.88ರ ಸ್ಟ್ರೈಕ್ರೇಟ್ನಲ್ಲಿ ಬ್ಯಾಟಿಂಗ್ ನಡೆಸಿ ಮಿಂಚಿದ್ದಾರೆ.
ಅನುಭವಿ ಆಟಗಾರ ಕರುಣ್ ನಾಯರ್
ಕರುಣ್ ನಾಯರ್ ಕಳೆದ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರವಾಗಿ ಆಡಿದ್ದು ತಮ್ಮ ಸಾಮರ್ಥ್ಯವನ್ನು ಸಾಬಿತುಪಡಿಸಲು ಕೆಲ ಅವಕಾಶಗಳನ್ನು ಪಡೆದಿದ್ದರು. ಆದರೆ ಇದನ್ನು ಬಳಸಿಕೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ನಂತರ ಆಡುವ ಬಳಗದಿಂದ ಹೊರಗುಳಿಯಬೇಕಾಯಿತು. ಆದರೆ ಮಹಾರಾಜ ಟಿ20 ಟೂರ್ನಿಯಲ್ಲಿ ಕರುನ್ ನಾಯರ್ ಅವರಿಂದ ಅದ್ಭುತ ಪ್ರದರ್ಶನ ಬಂದಿದೆ. ಮೈಸೂರು ವಾರಿಯರ್ಸ್ ತಂಡದ ಪರವಾಗಿ ಕಣಕ್ಕಿಳಿದಿರುವ ಅನುಭವಿ ಆಟಗಾರ 12 ಇನ್ನಿಂಗ್ಸ್ಗಳಲ್ಲಿ 257 ರನ್ಗಳನ್ನು ಗಳಿಸಿದ್ದು 150ರ ಸ್ಟ್ರೈಕ್ರೇಟ್ನಲ್ಲಿ ಬ್ಯಾಟ್ ಬೀಸಿದ್ದಾರೆ.
ಏಷ್ಯಾ ಕಪ್ 2022: ತಂಡದಲ್ಲಿದ್ದರೂ ಭಾರತದ ಈ ಮೂವರಿಗೆ ಆಡುವ ಅವಕಾಶ ದೊರೆಯುವುದು ಅನುಮಾನ!
ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್
ಕರ್ನಾಟಕದ ಸ್ಪಿನ್ ಬೌಲರ್ ಶ್ರೇಯಸ್ ಗೋಪಾಲ್ ಕಳೆದ ಐಪಿಎಲ್ ಆವೃತ್ತಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಕಾಣಿಸಿಕೊಂಡಿದ್ದರು. ಆದರೆ ಶ್ರೇಯಸ್ ಗೋಪಾಲ್ಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿದ್ದು ಕೇವಲ ಒಂದು ಪಂದ್ಯದಲ್ಲಿ ಮಾತ್ರ. ಈ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳಳು ವಿಫಲವಾಗಿದ್ದ ಕಾರಣ ಮತ್ತೆ ಅವಕಾಶವೇ ದೊರೆತಿರಲಿಲ್ಲ. ಆದರೆ ಮಹಾರಾಜ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಶ್ರೇಯಸ್ ಗೋಪಾಲ್ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಆಡಿದ್ದಾರೆ. ಆಡಿರುವ 12 ಪಂದ್ಯಗಳಲ್ಲಿ ಅವರು 16 ವಿಕೆಟ್ ಪಡೆದು ಮಿಂಚಿದ್ದಾರೆ.