ಶಿವಮೊಗ್ಗ ಉತ್ತಮ ಬ್ಯಾಟಿಂಗ್
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶಿವಮೊಗ್ಗ ಸ್ಟ್ರೈಕರ್ಸ್ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರೋಹನ್ ಕದಮ್ ಮತ್ತು ಶರತ್ ಬಿ ಆರ್ 116 ರನ್ಗಳ ಅಬ್ಬರದ ಜತೆಯಾಟವನ್ನಾಡಿದರು. ರೋಹನ್ ಕದಮ್ 8 ಬೌಂಡರಿ, 3 ಸಿಕ್ಸರ್ ಸಹಿತ 52 ಎಸೆತಗಳಲ್ಲಿ 84 ರನ್ ಬಾರಿಸಿದರೆ, ಮತ್ತೋರ್ವ ಆರಂಭಿಕ ಆಟಗಾರ ಶರತ್ ಬಿ ಆರ್ 5 ಬೌಂಡರಿ ಸಹಿತ 45 ಎಸೆತಗಳಲ್ಲಿ 51 ರನ್ ಕಲೆಹಾಕಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಕೃಷ್ಣಪ್ಪ ಗೌತಮ್ ಅಜೇಯ 18 ರನ್ ಕಲೆ ಹಾಕಿದರೆ, ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 5 ಎಸೆತಗಳಲ್ಲಿ 13 ರನ್ ಬಾರಿಸಿದ ಅವಿನಾಶ್ ಡಿ ಅಜೇಯರಾಗಿ ಉಳಿದರು.
ಬೆಂಗಳೂರು ಬ್ಲಾಸ್ಟರ್ಸ್ ತಂಡದ ಪರ ಕುಮಾರ್ ಎಲ್ ಆರ್ ಮತ್ತು ಜಗದೀಶ ಸುಚಿತ್ ತಲಾ ಒಂದೊಂದು ವಿಕೆಟ್ ಪಡೆದರು.
ಬೆಂಗಳೂರು ಬ್ಲಾಸ್ಟರ್ಸ್ ಅಬ್ಬರ
ಇನ್ನು ಶಿವಮೊಗ್ಗ ಸ್ಟ್ರೈಕರ್ಸ್ ನೀಡಿದ ಕಠಿಣ ಗುರಿಯನ್ನು ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ಪರ ಆರಂಭಿಕರಾಗಿ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಚೇತನ್ ಎಲ್ ಆರ್ ಕಣಕ್ಕಿಳಿದರು. ಈ ಪೈಕಿ ಚೇತನ್ ಎಲ್ ಆರ್ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 15 ಎಸೆತಗಳಲ್ಲಿ 34 ರನ್ ಕಲೆಹಾಕಿದರೆ, 10 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 49 ಎಸೆತಗಳಲ್ಲಿ 102 ರನ್ ಬಾರಿಸಿ ಅಜೇಯರಾಗಿ ಉಳಿದರು. ಹೀಗೆ ಈ ಮಹಾರಾಜ ಟ್ರೋಫಿಯಲ್ಲಿ ಶತಕ ಬಾರಿಸಿದಮೊದಲ ನಾಯಕ ಎಂಬ ಖ್ಯಾತಿಯನ್ನು ಮಯಾಂಕ್ ಅಗರ್ವಾಲ್ ಪಡೆದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅನೀಶ್ ಕೆವಿ 30 ಎಸೆತಗಳಲ್ಲಿ ಅಜೇಯ 35 ರನ್ ಬಾರಿಸಿದರು.
ಶಿವಮೊಗ್ಗ ಸ್ಟ್ರೈಕರ್ಸ್ ಪರ ವಿಕೆಟ್ ಪಡೆದ ಏಕೈಕ ಬೌಲರ್ ದೇವಯ್ಯ.
ಆಡುವ ಬಳಗ
ಬೆಂಗಳೂರು ಬ್ಲಾಸ್ಟರ್ಸ್ ಆಡುವ ಬಳಗ: ಎಲ್ ಆರ್ ಚೇತನ್, ಮಯಾಂಕ್ ಅಗರ್ವಾಲ್ (ನಾಯಕ), ಅನೀಶ್ ಕೆವಿ, ಶಿವಕುಮಾರ್ ರಕ್ಷಿತ್ (ವಿಕೆಟ್ ಕೀಪರ್), ಜಗದೀಶ ಸುಚಿತ್, ಕ್ರಾಂತಿ ಕುಮಾರ್, ರಿಷಿ ಬೋಪಣ್ಣ, ಕುಮಾರ್ ಎಲ್ ಆರ್, ಪ್ರದೀಪ್ ಟಿ, ಪಾರಸ್ ಗುರ್ಬೌಕ್ಸ್ ಆರ್ಯ, ಅನಿರುದ್ಧ ಜೋಶಿ
ಶಿವಮೊಗ್ಗ ಸ್ಟ್ರೈಕರ್ಸ್ ಆಡುವ ಬಳಗ: ರೋಹನ್ ಕದಮ್, ವಿನಯ್ ಸಾಗರ್, ಕೃಷ್ಣಮೂರ್ತಿ ಸಿದ್ಧಾರ್ಥ್, ಶರತ್ ಬಿಆರ್ (ವಿಕೆಟ್ ಕೀಪರ್), ಸ್ಟಾಲಿನ್ ಹೂವರ್, ಕೃಷ್ಣಪ್ಪ ಗೌತಮ್ (ನಾಯಕ), ಅವಿನಾಶ್ ಡಿ, ಕೆಸಿ ಕಾರಿಯಪ್ಪ, ಪುನಿತ್ ಎಸ್, ದೇವಯ್ಯ, ಡೆಸ್ಮಂಡ್ ಆಂಟೋನಿ