For Quick Alerts
ALLOW NOTIFICATIONS  
For Daily Alerts
 

ಭಾರತ ಟಿ20 ವಿಶ್ವಕಪ್ ಗೆಲ್ಲಬೇಕಾದರೆ ಈ ಇಬ್ಬರು ಆಟಗಾರರು ಅನಿವಾರ್ಯ ಎಂದ ಮೊಹಮ್ಮದ್ ಕೈಫ್

Mohammad Kaif said Dinesh Karthik and Hardik Pandya most important players in t20 World Cup

ಮುಂದಿನ ಅಕ್ಟೋಬರ್ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಮೇಲೆ ಈಗ ಎಲ್ಲಾ ತಂಡಗಳು ಕೂಡ ಕಣ್ಣಿಟ್ಟಿದ್ದು ಅದಕ್ಕಾಗಿ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಟೀಮ್ ಇಂಡಿಯಾದಲ್ಲಿ ಕೂಡ ಟಿ20 ವಿಶ್ವಕಪ್‌ನಲ್ಲಿ ಆಡುವ ತಂಡಲ್ಲಿ ಕಾಣಿಸಿಕೊಳ್ಳಲು ಭಾರೀ ಪೈಪೋಟಿ ನಡೆಯುತ್ತಿದೆ. ಯಾವೆಲ್ಲಾ ಆಟಗಾರರಿಗೆ ಈ ತಂಡದಲ್ಲಿ ಸ್ಥಾನ ದೊರೆಯಬಹುದು ಎಂಬ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದೆ.

ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಯಶಸ್ಸು ಸಾಧಿಸಬೇಕಾದರೆ ಭಾರತ ತಂಡದಲ್ಲಿ ಈ ಇಬ್ಬರು ಆಟಗಾರರು ಪ್ರಮುಖ ಪಾತ್ರ ಬಹಳ ದೊಡ್ಡದಾಗಿರುತ್ತದೆ ಎಂದಿದ್ದಾರೆ ಮೊಹಮ್ಮದ್ ಕೈಫ್. ಹಾಗಾದರೆ ಆ ಇಬ್ಬರು ಆಟಗಾರರು ಯಾರು? ಮುಂದೆ ಓದಿ..

ಫಿನಿಷರ್‌ಗಳ ಬಗ್ಗೆ ಕೈಫ್ ಮಾತು

ಫಿನಿಷರ್‌ಗಳ ಬಗ್ಗೆ ಕೈಫ್ ಮಾತು

ಮುಂದಿನ ವಿಶ್ವಕಪ್‌ನಲ್ಲಿ ಭಾರತ ತಂಡ ಕೆಳ ಕ್ರಮಾಂಕದಲ್ಲಿ ಅತ್ಯುತ್ತಮ ಫಿನಿಷರ್‌ಗಳನ್ನು ಹೊಂದಿರಬೇಕಾಗುತ್ತದೆ. ಅತ್ಯುತ್ತಮ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ನಡೆಸುವ ಸಾಮರ್ಥ್ಯ ಹೊಂದಿರುವ ಆಟಗಾರರು ಈ ಹಂತದಲ್ಲಿ ಭಾರತ ತಂಡಕ್ಕೆ ನೆರವಾಗಲಿದ್ದಾರೆ ಎಂದಿದ್ದಾರೆ ಮೊಹಮ್ಮದ್ ಕೈಫ್. ಹಾಗಾದಲ್ಲಿ ಮಾತ್ರವೇ ಭಾರತ ತಂಡ ಮುಂದಿನ ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನದೊಂದಿಗೆ ಗೆಲುವು ಸಾಧಿಸಲಿದೆ ಎಂಬ ಅಭಿಪ್ರಾಯಪಟ್ಟಿದ್ದಾರೆ ಮೊಹಮ್ಮದ್ ಕೈಫ್.

ಪಾಂಡ್ಯ ಹಾಗೂ ಡಿಕೆ ಇರಲೇಬೇಕು ಎಂದ ಕೈಫ್

ಪಾಂಡ್ಯ ಹಾಗೂ ಡಿಕೆ ಇರಲೇಬೇಕು ಎಂದ ಕೈಫ್

ಮುಂದಿನ ವಿಶ್ವಕಪ್ ತಂಡದಲ್ಲಿ ಇರಲೇಬೇಕಾದ ಇಬ್ಬರು ಆಟಗಾರರು ಎಂದು ಮೊಹಮ್ಮದ್ ಕೈಫ್ ಗುರುತಿಸಿದ್ದು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಅವರನ್ನು. ಈ ಇಬ್ಬರು ಆಟಗಾರರು ಅಂತಿಮ ಹಂತದಲ್ಲಿ ಅತ್ಯುತ್ತಮ ಸ್ಟ್ರೈಕ್‌ರೇಟ್‌ನೊಂದಿಗೆ ಬ್ಯಾಟಿಂಗ್ ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಇದು ಮುಂದಿನ ವಿಶ್ವಕಪ್‌ನಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ ಎಂದಿದ್ದಾರೆ ಮೊಹಮ್ಮದ್ ಕೈಫ್.

ಇಂಜ್ಯುರಿ ಹಿನ್ನಲೆ, ಚಿಕಿತ್ಸೆಗಾಗಿ ಜರ್ಮನಿ ತಲುಪಿದ ಕೆ.ಎಲ್ ರಾಹುಲ್‌: ಇಂಗ್ಲೆಂಡ್ ಪ್ರವಾಸಕ್ಕೆ ಅಲಭ್ಯ

ಅಗ್ರ ಕ್ರಮಾಂಕದಲ್ಲಿ ಪ್ರಮುಖ ಆಟಗಾರರಿದ್ದಾರೆ

ಅಗ್ರ ಕ್ರಮಾಂಕದಲ್ಲಿ ಪ್ರಮುಖ ಆಟಗಾರರಿದ್ದಾರೆ

ಮುಂದುವರಿದು ಮಾತನಾಡಿದ ಮೊಹಮ್ಮದ್ ಕೈಫ್ ಅಗ್ರ ಕ್ರಮಾಂಕದಲ್ಲಿ ಪ್ರಮುಖ ಆಟಗಾರರಿದ್ದಾರೆ ಎಂದಿದ್ದಾರೆ. "ನೀವು ಅಗ್ರ ಕ್ರಮಾಂಕವನ್ನು ನೋಡಿದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಇಶಾನ್ ಕಿಶನ್, ಶ್ರೇಯಸ್ ಐಯ್ಯರ್ ಅವರಂತಾ ಆಟಗಾರರು ಇದ್ದಾರೆ. ಆದರೆ ಪಂದ್ಯವನ್ನು ಫಿನಿಷ್ ಮಾಡಲು ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಅವರಂತಾ ಆಟಗಾರರ ಅಗತ್ಯ ಬಹಳಷ್ಟಿದೆ. ಇವರು ಅಂತಿಮ ಹಂತದಲ್ಲಿ ಸ್ಟ್ರೈಕ್‌ರೇಟ್‌ಅನ್ನು ಹೆಚ್ಚಿಸಲಿದ್ದಾರೆ" ಎಂದು ಮೊಹಮ್ಮದ್ ಕೈಪ್ ವಿವರಿಸಿದ್ದಾರೆ.

ಐರ್ಲೆಂಡ್ ವಿರುದ್ಧ ಟಿ20 ಸರಣಿಯನ್ನಾಡಲಿದೆ ಭಾರತ

ಐರ್ಲೆಂಡ್ ವಿರುದ್ಧ ಟಿ20 ಸರಣಿಯನ್ನಾಡಲಿದೆ ಭಾರತ

ಐರ್ಲೆಂಡ್ ವಿರುದ್ಧ ಭಾರತ ಎರಡು ಪಂದ್ಯಗಳ ಟಿ20 ಸರಣಿಯನ್ನು ಆಡಲಿದ್ದು ಹಾರ್ದಿಕ್ ಪಾಂಡ್ಯ ಈ ಸರಣಿಯಲ್ಲಿ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ. ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ನಾಯಕನಾಗಿ ಹಾಗೂ ಆಟಗಾರನಾಗಿ ಅದ್ಭುತ ಫಾರ್ಮ್ ಪ್ರದರ್ಶಿಸಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿಯೂ ಮಿಂಚಿದ್ದಾರೆ. ಇನ್ನು ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪರವಾಗಿ ನೀಡಿದ ಅಮೋಘ ಫಾರ್ಮ್‌ಅನ್ನು ರಾಷ್ಟ್ರೀಯ ತಂಡದ ಪರವಾಗಿಯೂ ನೀಡುವ ಮೂಲಕ ಮಿಂಚಿದ್ದಾರೆ. ಹೀಗಾಘಿ ಮುಂದಿನ ವಿಶ್ವಕಪ್‌ನ ತಂಡದಲ್ಲಿ ಸ್ಥಾನ ಪಡೆಯುವ ರೇಸ್‌ನಲ್ಲಿ ಡಿಕೆ ಮುಂದಿದ್ದಾರೆ.

Story first published: Tuesday, June 21, 2022, 18:09 [IST]
Other articles published on Jun 21, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+