ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು ಮತ್ತು ನಂತರ ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಸೋಲಿಸಿತು. ಇದರೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಸೆಮಿಫೈನಲ್ಗೆ ಪ್ರವೇಶ ಪಡೆದಿದೆ. ಎ ಗುಂಪಿನಿಂದ ನ್ಯೂಜಿಲೆಂಡ್ ತಂಡವು ಪಾಕಿಸ್ತಾನ ಮತ್ತು ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಸೆಮಿಫೈನಲ್ಗೆ ತಲುಪಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ನಡುವೆ ಮಾರ್ಚ್ 2 ರಂದು ಚಾಂಪಿಯನ್ಸ್ ಟ್ರೋಫಿಯಲ್ಲಿ ತಮ್ಮ ಕೊನೆಯ ಲೀಗ್ ಪಂದ್ಯವನ್ನು ಆಡಲಿವೆ. ಈ ಪಂದ್ಯವು ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 2:30 ಗಂಟೆಗೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಈ ಪಂದ್ಯವು ಉಭಯ ತಂಡಗಳಿಗೆ ಸೆಮಿಫೈನಲ್ಗೆ ಮುನ್ನ ತಯಾರಿ ನಡೆಸಲು ಒಂದು ಅವಕಾಶವಾಗಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ, ಎರಡೂ ತಂಡಗಳು ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಉಳಿಯಲು ಸಜ್ಜಾಗಿವೆ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಪ್ಲೇಯಿಂಗ್-11 ರಲ್ಲಿ ದೊಡ್ಡ ಬದಲಾವಣೆ ನಿರೀಕ್ಷಿಸಲಾಗುತ್ತಿದೆ. ನ್ಯೂಜಿಲೆಂಡ್ ವಿರುದ್ಧ ಪಂದ್ಯಕ್ಕೆ ಟೀಮ್ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಅವರ ಸ್ಥಾನದಲ್ಲಿ, ಅರ್ಷದೀಪ್ ಸಿಂಗ್ ಅವರನ್ನು ಪ್ಲೇಯಿಂಗ್-11 ರಲ್ಲಿ ಸೇರಿಸಿಕೊಳ್ಳಬಹುದು. ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತು. ಸ್ವಲ್ಪ ಸಮಯ ಅವರು ಮೈದಾನವನ್ನು ತೊರೆದರು. ಚಿಕಿತ್ಸೆ ಪಡೆದ ನಂತರ ಅವರು ಡ್ರೆಸ್ಸಿಂಗ್ ರೂಮ್ನಿಂದ ಹಿಂತಿರುಗಿ ಬೌಲಿಂಗ್ ಕೂಡ ಮಾಡಿದರು.
ಪಾಕಿಸ್ತಾನ ವಿರುದ್ಧದ ಗೆಲುವಿನ ನಂತರ ಮೊಹಮ್ಮದ್ ಶಮಿ ಅವರ ಗಾಯದ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಶಸ್ತ್ರಚಿಕಿತ್ಸೆಯ ನಂತರವೂ ಅವರು ಹಿಮ್ಮಡಿಯಲ್ಲಿ ಊತವನ್ನು ಎದುರಿಸಬೇಕಾಯಿತು. ಈಗ ಮಾಜಿ ಕ್ರಿಕೆಟಿಗರೊಬ್ಬರು ಅವರ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದು, ಇದರ ಪ್ರಕಾರ ಅವರನ್ನು ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಪ್ಲೇಯಿಂಗ್-11 ರಿಂದ ಕೈಬಿಡುವ ಸಾಧ್ಯತೆಯಿದೆ.
'ಟೀಮ್ ಇಂಡಿಯಾ ಶಮಿ ಅವರಿಗೆ ವಿಶ್ರಾಂತಿ ನೀಡಬೇಕು. ಅವರು ಪಾಕಿಸ್ತಾನ ವಿರುದ್ಧ ಆತ್ಮವಿಶ್ವಾಸ ಗಳಿಸಿದ್ದಾರೆ.ಟೀಮ್ ಇಂಡಿಯಾ ಬಲಿಷ್ಠ ಬ್ಯಾಟಿಂಗ್ ಲೈನ್ಅಪ್ ಹೊಂದಿರುವಾಗ ಬೇರೆಯವರನ್ನು ಕರೆತರುವ ಅಪಾಯವನ್ನು ಎದುರಿಸಬಹುದು. ದುಬೈಗೆ ಮತ್ತೊಬ್ಬ ಸ್ಪಿನ್ನರ್ ಅನ್ನು ತನ್ನಿ ಎಂದು ಇಂಗ್ಲೆಂಡ್ ತಂಡದ ಮಾಜಿ ವೇಗಿ ಡ್ಯಾರೆನ್ ಗೌಗ್ ಸಲಹೆ ನೀಡಿದ್ದಾರೆ.
ಶಮಿ ಬದಲಿಗೆ ಹೆಚ್ಚುವರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅಥವಾ ವಾಷಿಂಗ್ಟನ್ ಸುಂದರ್ಗೆ ಅವಕಾಶ ನೀಡಬೇಕು ಎಂದು ಡ್ಯಾರೆನ್ ಗೌ ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಟೀಮ್ ಇಂಡಿಯಾ ಕನಿಷ್ಠ ಇಬ್ಬರು ಪ್ರಮುಖ ವೇಗದ ಬೌಲರ್ಗಳೊಂದಿಗೆ ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಆದ್ದರಿಂದ ಶಮಿ ಹೊರನಡೆದರೆ, ತಂಡದಲ್ಲಿ ಏಕೈಕ ವೇಗದ ಬೌಲರ್ ಉಳಿಯಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅರ್ಷದೀಪ್ ಆಡುವ ಸಾಧ್ಯತೆ ಹೆಚ್ಚಿದೆ.