
1. ಶ್ರೀಶಾಂತ್ ಮಂಕಡ್ ರನ್ಔಟ್ಗೆ ಯತ್ನಿಸಿದ್ದರು
ಹೈದರಾಬಾದ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಆ ಪಂದ್ಯದಲ್ಲಿ ಶ್ರೀಶಾಂತ್ ಬೌಲಿಂಗ್ ವೇಳೆ ನಾನ್ ಸ್ಟ್ರೈಕರ್ ತುದಿಯಲ್ಲಿ ಆ್ಯಂಡ್ರೂ ಸೈಮಂಡ್ಸ್ ಅಥವಾ ಮೈಕ್ ಹಸ್ಸಿ ಇದ್ದರು ಎನಿಸುತ್ತದೆ. ಹೀಗೆ ಶ್ರೀಶಾಂತ್ ಬೌಲಿಂಗ್ ಮಾಡುವ ಸಮಯದಲ್ಲಿ ಮಂಕಡ್ ರನ್ಔಟ್ ಮಾಡಲು ಯತ್ನಿಸಿ ಅಂಪೈರ್ ಬಳಿ ಔಟ್ ಮನವಿಯನ್ನು ಮಾಡಿದ್ದರು ಎಂದು ಉತ್ತಪ್ಪ ಹೇಳಿದ್ದಾರೆ.

2. ಇದೆಲ್ಲಾ ಬೇಡ ಸುಮ್ಮನೆ ಬೌಲಿಂಗ್ ಮಾಡು ಎಂದಿದ್ದ ಧೋನಿ
ಶ್ರೀಶಾಂತ್ ಈ ರೀತಿ ಮಂಕಡ್ ರನ್ಔಟ್ ಮನವಿಯನ್ನು ಮಾಡಿದ ಕೂಡಲೇ ಧಾವಿಸಿದ ಎಂಎಸ್ ಧೋನಿ ಕೋಪಿಷ್ಟ ಶ್ರೀಶಾಂತ್ ಅವರನ್ನು ಸಮಾಧಾನ ಮಾಡಿ ಇದೆಲ್ಲಾ ಬೇಡ ಸುಮ್ಮನೆ ಬೌಲಿಂಗ್ ಮಾಡು ಎಂದು ಕಳುಹಿಸಿದ್ದರು, ತದನಂತರ ಯಾರ ಮಾತನ್ನು ಕೇಳದ ಶ್ರೀಶಾಂತ್ ಧೋನಿ ಮಾತನ್ನು ಕೇಳಿ ಸಹಜ ಸ್ಥಿತಿಗೆ ಮರಳಿ ಬೌಲಿಂಗ್ ಮಾಡಿದ್ದರು ಎಂದು ರಾಬಿನ್ ಉತ್ತಪ್ಪ ಹೇಳಿಕೊಂಡಿದ್ದಾರೆ.

3. ಶ್ರೀಶಾಂತ್ ಕೋಪವನ್ನು ನಿಭಾಯಿಸುವುದು ಧೋನಿಯಿಂದ ಮಾತ್ರ ಸಾಧ್ಯ
ಶ್ರೀಶಾಂತ್ ಮೈದಾನದಲ್ಲಿ ಎಷ್ಟರಮಟ್ಟಿಗೆ ಕೋಪಿಷ್ಠ ಎಂಬುದು ನಿಮಗೆಲ್ಲರಿಗೂ ತಿಳಿದೇ ಇದೆ. ಶ್ರೀಶಾಂತ್ ಕೋಪವನ್ನು ಯಾರಿಂದಲೂ ಸಹ ತಡೆಯಲಾಗುತ್ತಿರಲಿಲ್ಲ, ಆದರೆ ಶ್ರೀಶಾಂತ್ ಅವರನ್ನು ಸಮಾಧಾನ ಮಾಡುವ ಸಾಮರ್ಥ್ಯ ಇದ್ದದ್ದು ಎಂಎಸ್ ಧೋನಿಗೆ ಮಾತ್ರ ಎಂದು ರಾಬಿನ್ ಉತ್ತಪ್ಪ ಹಳೆಯ ದಿನಗಳನ್ನು ನೆನೆದಿದ್ದಾರೆ.


Click it and Unblock the Notifications












