ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್: ಧವನ್ ಜಾಗಕ್ಕೆ ಪಂತ್‌ ತಂದಿದ್ದೇಕೆಂದು ಬಾಯ್ಬಿಟ್ಟ ಎಂಎಸ್‌ಕೆ ಪ್ರಸಾದ್

ರಾಯುಡು ನಿವೃತ್ತಿ ಬಗ್ಗೆ ಬಾಯ್ಬಿಟ್ಟ BCCI..! | i Videos | Oneindia Kannada
MSK Prasad reveals why Rishabh Pant replaced injured Shikhar Dhawan in World Cup

ನವದೆಹಲಿ, ಜುಲೈ 22: ಇಂಗ್ಲೆಂಡ್‌ ನಲ್ಲಿ ಮುಕ್ತಾಯಗೊಂಡ ಐಸಿಸಿ ವಿಶ್ವಕಪ್ 2019ರಲ್ಲಿ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಗಾಯಗೊಂಡಾಗ ಅವರ ಬದಲಿಗೆ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಬ್ ಪಂತ್‌ ಅವರನ್ನು ಆಡುವ 11ರಲ್ಲಿ ಸೇರಿಸಿಕೊಳ್ಳಲಾಗಿತ್ತು. ತಂಡದಲ್ಲಿ ಪಂತ್‌ಗೆ ಸ್ಥಾನ ನೀಡಿದ್ದೇಕೆಂದು ಆಯ್ಕೆ ಸಮಿತಿಯ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ಹೇಳಿದ್ದಾರೆ.

ವಿಶ್ವಕಪ್‌ ಫೈನಲ್‌ನಲ್ಲಿ ಎಸೆಗಿದ ತಪ್ಪನ್ನು ಒಪ್ಪಿಕೊಂಡ ಅಂಪೈರ್ಸ್‌!ವಿಶ್ವಕಪ್‌ ಫೈನಲ್‌ನಲ್ಲಿ ಎಸೆಗಿದ ತಪ್ಪನ್ನು ಒಪ್ಪಿಕೊಂಡ ಅಂಪೈರ್ಸ್‌!

ಪ್ರತಿಷ್ಠಿತ ವಿಶ್ವಕಪ್ ಟೂರ್ನಿ ವೇಳೆ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಗಾಯಗೊಂಡು ತಂಡದಿಂದ ಹೊರ ಬಿದ್ದಾಗ ನಂ.4ನೇ ಸ್ಥಾನದಲ್ಲಿದ್ದ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಆರಂಭಿಕ ಸ್ಥಾನಕ್ಕೆ, 4ನೇ ಬ್ಯಾಟಿಂಗ್ ಕ್ರಮಾಂಕಕ್ಕೆ ಪಂತ್ ಅವರನ್ನು ತರಲಾಗಿತ್ತು. ಈ ಬಗ್ಗೆ ಕ್ರಿಕೆಟ್ ವಲಯದಲ್ಲಿ ಚರ್ಚೆಗಳೂ ನಡೆದಿದ್ದವು.

4ನೇ ಕ್ರಮಾಂಕದ ಬ್ಯಾಟಿಂಗ್‌ ಗೊಂದಲಕ್ಕೆ ಆಯ್ಕೆ ಸಮಿತಿಯಿಂದ ಪರಿಹಾರ!4ನೇ ಕ್ರಮಾಂಕದ ಬ್ಯಾಟಿಂಗ್‌ ಗೊಂದಲಕ್ಕೆ ಆಯ್ಕೆ ಸಮಿತಿಯಿಂದ ಪರಿಹಾರ!

'ಆಯ್ಕೆ ವಿಚಾರಕ್ಕೆ ಬಂದಾಗ ವಿಶ್ವಕಪ್‌ನಂತ ದೊಡ್ಡ ಮಟ್ಟದ ಟೂರ್ನಿಯ ವೇಳೆ ಕೆಲವೊಂದು ನಿಯಮಗಳಿರುತ್ತವೆ. ಹೀಗಾಗಿ ಚರ್ಚೆಗೆ ದಾರಿಯಾಗಬಲ್ಲ ಸುದ್ದಿಗೋಷ್ಠಿಯನ್ನು ಕರೆಯುವ ಗೋಜಿಗೆ ನಾನು ಹೋಗಲಿಲ್ಲ,' ಎಂದು ಭಾನುವಾರ (ಜುಲೈ 21) ಸುದ್ದಿಗಾರರೊಂದಿಗೆ ಮಾತನಾಡುತ್ತ ಎಂಎಸ್‌ಕೆ ಪ್ರಸಾದ್ ಹೇಳಿದ್ದಾರೆ.

ವಿಶ್ವಕಪ್‌ನಲ್ಲಿದ್ದರೂ ವಿಂಡೀಸ್‌ ಪ್ರವಾಸಕ್ಕೆ ಮಯಾಂಕ್‌ ಬೇಡವಾದರು ಏಕೆ?ವಿಶ್ವಕಪ್‌ನಲ್ಲಿದ್ದರೂ ವಿಂಡೀಸ್‌ ಪ್ರವಾಸಕ್ಕೆ ಮಯಾಂಕ್‌ ಬೇಡವಾದರು ಏಕೆ?

'ಶಿಖರ್ ಧವನ್ ಗಾಯಗೊಂಡಾಗ ನಾವಾಗಲೇ ಆರಂಭಿಕ ಸ್ಥಾನಕ್ಕೆ ಮೀಸಲಿದ್ದ ಕೆಎಲ್ ರಾಹುಲ್ ಅವರನ್ನು ತಂದೆವು. ಯಾಕೆಂದರೆ ಟಾಪ್ ಆರ್ಡರ್‌ನಲ್ಲಿ ಎಡಗೈ ಬ್ಯಾಟ್ಸ್ಮನ್ ಪಂತ್‌ ಅವರನ್ನು ತರುವಂತಿರಲಿಲ್ಲ. ಆದರೆ ತಂಡ ನಿರ್ವಹಣಾ ಸಮಿತಿ ವಿನಂತಿಸಿಕೊಂಡಿದ್ದರಿಂದ ನಮಗೆ 4ನೇ ಕ್ರಮಾಂಕಕ್ಕೆ ಪಂತ್ ಬಿಟ್ಟು ಬೇರೆ ಆಯ್ಕೆಗಳಿರಲಿಲ್ಲ. ಅಲ್ಲದೆ ನಮಗೆ ಪಂತ್ ಸಾಮರ್ಥ್ಯವೇನನ್ನೋದು ಗೊತ್ತಿತ್ತು,' ಎಂದು ಎಂಎಸ್‌ಕೆ ವಿವರಿಸಿದರು.

ವಿಂಡೀಸ್‌ ಪ್ರವಾಸಕ್ಕೆ ಟೀಮ್‌ ಇಂಡಿಯಾ ಪ್ರಕಟ, 3 ಕನ್ನಡಿಗರಿಗೆ ಸ್ಥಾನವಿಂಡೀಸ್‌ ಪ್ರವಾಸಕ್ಕೆ ಟೀಮ್‌ ಇಂಡಿಯಾ ಪ್ರಕಟ, 3 ಕನ್ನಡಿಗರಿಗೆ ಸ್ಥಾನ

ವಿಶ್ವಕಪ್ ವೇಳೆ ಟೀಮ್ ಇಂಡಿಯಾದ 4ನೇ ಕ್ರಮಾಂಕದಲ್ಲಿ ಆಡುತ್ತಿದ್ದ ಆಲ್ ರೌಂಡರ್ ವಿಜಯ್ ಶಂಕರ್ ಕೂಡ ಗಾಯಗೊಂಡಾಗ ಮಯಾಂಕ್ ಅಗರ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಮಯಾಂಕ್‌ಗೆ ಮೈದಾನಕ್ಕಿಳಿಯುವ ಅವಕಾಶ ಲಭಿಸಿರಲಿಲ್ಲ. ಭಾರತ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ನಿರಾಶೆ ಅನುಭವಿಸಿತ್ತು.

Story first published: Monday, July 22, 2019, 10:22 [IST]
Other articles published on Jul 22, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X