|
ಹರಕೆ ತೀರಿಸಿದ ನಟರಾಜನ್
ಟಿ ನಟರಾಜನ್ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿರುವ ಪಳನಿಯ ಮುರುಗನ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ನಟರಾಜನ್ ತಮ್ಮ ತಲೆಕೂದಲನ್ನು ಹರಕೆ ರೂಪದಲ್ಲಿ ನೀಡಿದ್ದು ಬಳಿಕ ನಟರಾಜನ್ ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರ್ನಲ್ಲಿ ಟಿ ನಟರಾಜನ್ ತಮ್ಮ ಫೋಟೋವನ್ನು ಹಂಚಿಕೊಂಡಿದ್ದು ಅಭಿಮಾನಿಗಳು ನಟರಾಜನ್ಗೆ ಶುಭಹಾರೈಸುತ್ತಿದ್ದಾರೆ.
ಆಸಿಸ್ನಲ್ಲಿ ನಟರಾಜನ್ ಮಿಂಚು
ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ನಟರಾಜನ್ ಟೀಮ್ ಇಂಡಿಯಾ ಪರವಾಗಿ ಶ್ರೇಷ್ಠ ಪ್ರದರ್ಶನ ನೀಡಿ ಮಿಂಚಿದ್ದರು. ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ತಮ್ಮ ಮೇಲಿಟ್ಟಿದ್ದ ಭರವಸೆಗೆ ಪೂರಕವಾಗಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದ ನಟರಾಜನ್ ಟೆಸ್ಟ್ ಕ್ರಿಕೆಟ್ನಲ್ಲೂ ಸಿಕ್ಕ ಒಂದು ಅವಕಾಶವನ್ನು ಸಮರ್ಥವಾಗಿ ನಿಭಾಯಿಸಿದ್ದರು.
ತವರಿನಲ್ಲೂ ತಂಡವನ್ನು ಪ್ರತಿನಿಧಿಸಲು ಸಜ್ಜು
ಸದ್ಯ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾ ತಂಡ ಪ್ರಕಟವಾಗಿದೆ. ಟೆಸ್ಟ್ ತಂಡಕ್ಕೆ ಜಸ್ಪ್ರಿತ್ ಬೂಮ್ರಾ ಇಶಾಂತ್ ಶರ್ಮಾ ಅವರಂತ ಅನುಭವಿಗಳು ಮರಳಿದ್ದು ನಟರಾಜನ್ಗೆ ತಂಡದಲ್ಲಿ ಸ್ಥಾನ ದೊರೆತಿಲ್ಲ. ಆದರೆ ಸೀಮಿತ ಓವರ್ಗಳ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ.