For Quick Alerts
ALLOW NOTIFICATIONS  
For Daily Alerts
 

ಟೀಂ ಇಂಡಿಯಾದಲ್ಲಿ ಸಂಜು ಸ್ಯಾಮ್ಸನ್ ನನ್ನ ಮೊದಲ ಆಯ್ಕೆ ಎಂಬುದರಲ್ಲಿ ಸಂದೇಹವಿಲ್ಲ : ಸಾಬಾ ಕರೀಂ

Sanju samson

ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಅವಕಾಶ ನೀಡಲಾಗಿದೆ. ಮೊದಲ ಏಕದಿನ ಪಂದ್ಯದಲ್ಲಿಯೇ ಸಂಜು ಸ್ಯಾಮ್ಸನ್ ಅಬ್ಬರದ ಇನ್ನಿಂಗ್ಸ್‌ ಆಡಿ ತಂಡದ ಮುಂದೆ ತಮ್ಮ ಪ್ರಾಮುಖ್ಯತೆಯನ್ನು ಮೂಡಿಸಿದ್ದರು.

ಸಂಜು ಸ್ಯಾಮ್ಸನ್ 63 ಎಸೆತಗಳಲ್ಲಿ ಅಜೇಯ 86 ರನ್ ಗಳಿಸಿ ತಂಡವನ್ನು ಗೆಲುವಿನ ಸಮೀಪಕ್ಕೆ ಕೊಂಡೊಯ್ದರು. ಸಂಜು ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್ ಒಳಗೊಂಡಿದ್ದವು.

ಆದ್ರೆ ಅದಾಗಲೇ ಟಾಪ್ ಆರ್ಡರ್ ಬ್ಯಾಟರ್‌ಗಳಾದ ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ ಸಾಕಷ್ಟು ಎಸೆತಗಳನ್ನ ವ್ಯರ್ಥ ಮಾಡಿದ್ದರ ಜೊತೆಗೆ 39ನೇ ಓವರ್‌ನಲ್ಲಿ ಅವೇಶ್ ಖಾನ್ ನಾಲ್ಕು ಎಸೆತಗಳನ್ನ ಎದುರಿಸದ ಪರಿಣಾಮ ಅಂತಿಮ ಓವರ್‌ನಲ್ಲಿ ಸ್ಯಾಮ್ಸನ್‌ಗೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಆದ್ರೂ ಸ್ಯಾಮ್ಸನ್ ಇನ್ನಿಂಗ್ಸ್‌ ಅನ್ನು ಅನೇಕ ಕ್ರಿಕೆಟ್ ದಿಗ್ಗಜರು ಮೆಚ್ಚಿದ್ದಾರೆ.

ಸಂಜು ಸ್ಯಾಮ್ಸನ್ ಬಗ್ಗೆ ಮತ್ತೆ ಧ್ವನಿ ಎತ್ತಿದ ಸಾಬಾ ಕರೀಂ

ಸಂಜು ಸ್ಯಾಮ್ಸನ್ ಬಗ್ಗೆ ಮತ್ತೆ ಧ್ವನಿ ಎತ್ತಿದ ಸಾಬಾ ಕರೀಂ

ವಿಶ್ವಕಪ್ ತಂಡದಲ್ಲಿ ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗದಿರುವ ಬಗ್ಗೆ ಭಾರತೀಯ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ ಮತ್ತೊಮ್ಮೆ ಅವರ ಇನ್ನಿಂಗ್ಸ್ ನಂತರ, ಸಂಜು ಅಭಿಮಾನಿಗಳು ರಿಷಬ್ ಪಂತ್‌ಗಿಂತ ಉತ್ತಮವಾಗಿ ಹೇಳುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಮತ್ತು ಕೊನೆಯ ಟಿ20 ಪಂದ್ಯದಲ್ಲಿ ರಿಷಬ್ ಪಂತ್ ಕೂಡ ತಂಡಕ್ಕೆ ಓಪನಿಂಗ್ ಮಾಡುವ ಅವಕಾಶವನ್ನು ಪಡೆದರು, ಆದರೆ ಈ ಪಂದ್ಯದಲ್ಲಿ ಅವರು 14 ಎಸೆತಗಳಲ್ಲಿ 27 ರನ್ ಗಳಿಸಲು ಸಾಧ್ಯವಾಯಿತು.

ಟೀಂ ಇಂಡಿಯಾ ಆಟಗಾರರ ಮಾಜಿ ಮುಖ್ಯ ಆಯ್ಕೆಗಾರ ಸಾಬಾ ಕರೀಂ ಸಂಜು ಪರ ಮತ್ತೆ ಧ್ವನಿ ಎತ್ತಿದ್ದು ಆತನ ಆಯ್ಕೆ ಕುರಿತು ಬೆಂಬಲ ಸೂಚಿಸಿದ್ದಾರೆ.

ಕಾಲಿನ ಮೂಳೆ ಮುರಿದಿದ್ರೂ ಚಿನ್ನದ ಪದಕ ಗೆದ್ದಿದ್ದೆ: ರೋಚಕ ಸಂಗತಿ ಬಹಿರಂಗ ಪಡಿಸಿದ ಪಿ.ವಿ. ಸಿಂಧು

ನನ್ನ ಮೊದಲ ಆಯ್ಕೆ ಸಂಜು ಸ್ಯಾಮ್ಸನ್ ಎಂದ ಸಾಬಾ ಕರೀಂ

ನನ್ನ ಮೊದಲ ಆಯ್ಕೆ ಸಂಜು ಸ್ಯಾಮ್ಸನ್ ಎಂದ ಸಾಬಾ ಕರೀಂ

ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಬಗ್ಗೆ ನಡೆಯುತ್ತಿರುವ ಈ ಚರ್ಚೆಯಲ್ಲಿ ಭಾರತದ ಮಾಜಿ ದಂತಕಥೆ ಸಾಬಾ ಕರೀಂ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ. ಸಾಬಾ ಕರೀಂ ಪ್ರಕಾರ, ಇಂದು ರಿಷಬ್ ಪಂತ್ ತಂಡದಲ್ಲಿದ್ದರೆ, ಅವರು ಈ ಸ್ಥಾನವನ್ನು ಗಳಿಸಿದ್ದಾರೆ. ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಆದ್ರೆ ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಸಿಕ್ಕ ಅವಕಾಶದಲ್ಲಿ ಯಶಸ್ವಿಯಾಗಲಿಲ್ಲ. ಅದೇ ಸಮಯದಲ್ಲಿ, ತಮ್ಮ ತಂಡದಲ್ಲಿ ವಿಕೆಟ್ ಕೀಪರ್ ಆಗಿ, ಸಂಜು ಸ್ಯಾಮ್ಸನ್ , ಇಶಾನ್ ಕಿಶನ್‌ ಹಾಗೂ ರಿಷಭ್ ಪಂತ್‌ ಮೂವರಲ್ಲಿ ಒಬ್ಬರ ಆಯ್ಕೆ ಮಾಡೋದಾದ್ರೆ ಅದು ಸಂಜು ಮಾತ್ರ ಎಂದಿದ್ದಾರೆ.

ಇಂಡಿಯಾ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, ಸಂಜು ನನ್ನ ಮೊದಲ ಆಯ್ಕೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ಸಬಾ ಕರೀಂ ಹೇಳಿದ್ದಾರೆ. ಅವರು ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಎಕ್ಸ್ ಫ್ಯಾಕ್ಟರ್ ಎಂದು ಸಾಬೀತುಪಡಿಸಲಿದ್ದಾರೆ. ಪಂದ್ಯದ ದಿಕ್ಕನ್ನ ತಿರುಗಿಸುವ ಶಕ್ತಿ ಅವರಲ್ಲಿದೆ ಎಂದು ಹೊಗಳಿದ್ದಾರೆ.

IND Vs SA ODI: ಹರಿಣಗಳ ವಿರುದ್ಧ ಏಕದಿನ ಪಂದ್ಯದಲ್ಲಿ ಭಾರತ ಕೊನೆಯ ಬಾರಿಗೆ ಗೆದ್ದದ್ದು ಯಾವಾಗ ಗೊತ್ತಾ?

ಸಂಜು ಬ್ಯಾಟ್ಸ್‌ಮನ್ ಆಗಿ ತಂಡಕ್ಕೆ ಮರಳಬಹುದು: ಸಾಬಾ ಕರೀಂ

ಸಂಜು ಬ್ಯಾಟ್ಸ್‌ಮನ್ ಆಗಿ ತಂಡಕ್ಕೆ ಮರಳಬಹುದು: ಸಾಬಾ ಕರೀಂ

ಭಾರತ ತಂಡಕ್ಕೆ ಸಂಜು ಸ್ಯಾಮ್ಸನ್ ಮರಳುವುದು ವಿಕೆಟ್ ಕೀಪರ್ ಆಗಿ ಅಲ್ಲ, ಆದರೆ ಬ್ಯಾಟ್ಸ್‌ಮನ್ ಆಗಿರಬಹುದು. ಏಕೆಂದರೆ ಪಂತ್ ವಿಕೆಟ್ ಕೀಪರ್ ಆಗಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಸಾಬಾ ಕರೀಂ ಅಭಿಪ್ರಾಯ ಪಟ್ಟಿದ್ದಾರೆ.

ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಆಯ್ಕೆಯ ಬಗ್ಗೆ ಅಭಿಮಾನಿಗಳ ನಡುವಿನ ಜಟಾಪಟಿ ಸಾಕಷ್ಟು ಹಳೆಯದಾಗಿದೆ. ಐಪಿಎಲ್‌ನಲ್ಲಿ ಇಬ್ಬರೂ ಆಟಗಾರರು ತಮ್ಮ ತಮ್ಮ ಫ್ರಾಂಚೈಸಿಗಳಿಗೆ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ರಿಷಬ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ತನ್ನನ್ನು ತಾನು ಸಾಬೀತುಪಡಿಸಿದ್ದಾರೆ. ಏಕದಿನ ಪಂದ್ಯದಲ್ಲೂ ಸ್ವಲ್ಪ ಮಟ್ಟಿಗೆ ತಮ್ಮ ಆಟದಿಂದ ಎಲ್ಲರನ್ನೂ ಆಕರ್ಷಿಸಲು ಸಾಧ್ಯವಾಗಿದೆ. ಆದರೆ ಟಿ20ಯಲ್ಲಿ ಪಂತ್ ಅವರ ಬ್ಯಾಟ್‌ನಿಂದ ಇನ್ನೂ ಯಾವುದೇ ಪಂದ್ಯ ಗೆಲ್ಲುವ ಇನ್ನಿಂಗ್ಸ್ ಬಂದಿಲ್ಲ.

Story first published: Saturday, October 8, 2022, 20:36 [IST]
Other articles published on Oct 8, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+