For Quick Alerts
ALLOW NOTIFICATIONS  
For Daily Alerts
 

ODI World Cup 2023: ಭಾರತ ತಂಡದಲ್ಲಿ ಭಾರಿ ಬದಲಾವಣೆ: 9 ಪ್ರಮುಖ ಆಟಗಾರರಿಗೆ ಇಲ್ಲ ಅವಕಾಶ!

By ನಾಗೇಶ್

ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ 15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದು, ಹಾರ್ದಿಕ್ ಪಾಂಡ್ಯ ಉಪನಾಯಕರಾಗಿದ್ದಾರೆ. ಶುಭಮನ್ ಗಿಲ್, ಇಶಾನ್ ಕಿಶನ್ ಅವರಂತಹ ಯುವ ಆಟಗಾರರು ಈ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಮತ್ತೊಂದೆಡೆ ಅಶ್ವಿನ್, ಚಹಾಲ್ ಅವರಂತಹ ಅನುಭವಿ ಆಟಗಾರರು ಸ್ಥಾನ ವಂಚಿತರಾಗಿದ್ದಾರೆ.

2023 ರ ವಿಶ್ವಕಪ್‌ನಲ್ಲಿ ಆಡುವ ತಂಡವು 2019 ರಲ್ಲಿ ಆಡಿದ ತಂಡಕ್ಕಿಂತ ಬಹಳ ಭಿನ್ನವಾಗಿದೆ. ಆದಾಗ್ಯೂ, ಕೆಲವು ಸಾಮಾನ್ಯ ಹೆಸರುಗಳು ಉಳಿದಿವೆ, ಉದಾಹರಣೆಗೆ ಸ್ಟಾರ್ ಬ್ಯಾಟರ್ ಗಳಾದ ರೋಹಿತ್ ಮತ್ತು ವಿರಾಟ್ ಹಾಗೂ ಪ್ರೀಮಿಯಂ ಆಲ್ ರೌಂಡರ್ ಗಳಾದ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

 ODI World Cup 2023: Many Changes in Team India Compared to ODI World Cup 2019

ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಶಮಿ ಕೂಡ 2019 ರಿಂದ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಕೂಡ ಗಾಯದಿಂದ ಚೇತರಿಸಿಕೊಂಡಿದ್ದು, ತಮ್ಮ ವೃತ್ತಿ ಜೀವನದಲ್ಲಿ ಎರಡನೇ ಬಾರಿಗೆ ಏಕದಿನ ವಿಶ್ವಕಪ್‌ನಲ್ಲಿ ಆಡಲಿದ್ದಾರೆ.

ಮೊದಲ ಬಾರಿ ವಿಶ್ವಕಪ್ ಆಡುತ್ತಿರುವ ಆಟಗಾರರು

ಸ್ಟಾರ್ ಓಪನಿಂಗ್ ಬ್ಯಾಟರ್ ಶುಭಮನ್ ಗಿಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. ಅವರ ವೃತ್ತಿಜೀವನದ ಮೊದಲ ಐಸಿಸಿ ಪಂದ್ಯಾವಳಿಯನ್ನು ಆಡಲಿದ್ದಾರೆ. ಶ್ರೇಯಸ್ ಅಯ್ಯರ್ ಗಾಯದಿಂದ ಚೇತರಿಸಿಕೊಂಡಿರುವುದು ಭಾರತಕ್ಕೆ ಮತ್ತಷ್ಟು ಆತ್ಮವಿಶ್ವಾಸ ನೀಡಿದೆ. ಅವರು ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪ್ರಮುಖ ಟೂರ್ನಿಯಲ್ಲಿ ಭಾರತ ತಂಡದ ಭಾಗವಾಗಲಿದ್ದಾರೆ. ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ವಿಶ್ವಕಪ್ ಕ್ರಿಕೆಟ್ ಆಡುತ್ತಿರುವ ಇಬ್ಬರು ಆಟಗಾರರಾಗಿದ್ದಾರೆ.

ಅಕ್ಷರ್ ಪಟೇಲ್ 2015 ರಲ್ಲಿ ಭಾರತ ತಂಡದ ಭಾಗವಾಗಿದ್ದರು ಆದರೆ ಸ್ಥಾನ ಲಭಿಸಿರಲಿಲ್ಲ. 2019ರಲ್ಲಿ ಏಕದಿನ ವಿಶ್ವಕಪ್ ತಂಡದ ಭಾಗವಾಗದ, ಮೊಹಮ್ಮದ್ ಸಿರಾಜ್ ಐಸಿಸಿ ಈವೆಂಟ್ನಲ್ಲಿ ಭಾರತಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಶಾರ್ದೂಲ್ ಠಾಕೂರ್ ಮೊದಲ ಬಾರಿಗೆ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಅವಕಾಶ ಪಡೆಯದ ಪ್ರಮುಖ ಆಟಗಾರರು

ಅನೇಕ ಹಿರಿಯ ಆಟಗಾರರು 2019 ರಲ್ಲಿ ಭಾರತ ತಂಡದ ಭಾಗವಾಗಿದ್ದರು, ಆದರೆ 2023 ರಲ್ಲಿ ಆಡುತ್ತಿಲ್ಲ. ಭಾರತದ 2011 ರ ವಿಶ್ವಕಪ್ ವಿಜೇತ ನಾಯಕ ಎಂಎಸ್‌ ಧೋನಿ, ಅವರು 2019 ರ ಆವೃತ್ತಿಯಲ್ಲಿ ಭಾರತಕ್ಕಾಗಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ನ್ಯೂಜಿಲೆಂಡ್ ವಿರುದ್ಧ 2019 ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನಂತರ ದಿನೇಶ್ ಕಾರ್ತಿಕ್ ಭಾರತದ ಪರ ಏಕದಿನ ಪಂದ್ಯವನ್ನು ಆಡಿಲ್ಲ. ರಿಷಬ್ ಪಂತ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಕಾರಣ ಅವಕಾಶ ಪಡೆದಿಲ್ಲ.

ಕಳೆದ ದಶಕದಲ್ಲಿ 50-ಓವರ್ ಗಳ ಐಸಿಸಿ ಈವೆಂಟ್‌ಗಳಲ್ಲಿ ಭಾರತದ ಅತ್ಯಂತ ಸ್ಥಿರ ಆಟಗಾರನಾಗಿದ್ದ ಶಿಖರ್ ಧವನ್, ವರ್ಷದ ಆರಂಭದಲ್ಲಿ ತಂಡದಿಂದ ಕೈಬಿಟ್ಟಿದ್ದು ನಂತರ ಕಮ್ ಬ್ಯಾಕ್ ಮಾಡುವಲ್ಲಿ ವಿಫಲರಾದರು. 2022 ರ ಟಿ 20 ವಿಶ್ವಕಪ್‌ನಿಂದ ಭಾರತಕ್ಕಾಗಿ ಯಾವುದೇ ಸ್ವರೂಪದಲ್ಲಿ ಆಡದ ಕಾರಣ ಭುವನೇಶ್ವರ್ ಕುಮಾರ್ ವಿಶ್ವಕಪ್ ನಲ್ಲಿ ಆಡಲು ಅವಕಾಶ ಪಡೆಯದ ಇನ್ನೊಬ್ಬ ಅನುಭವಿ ಆಟಗಾರ.

ವಿಜಯ್ ಶಂಕರ್ ಅವರ ಆಯ್ಕೆಯು 2019 ರಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಕೇದಾರ್ ಜಾಧವ್ ವರ್ಷಗಳ ಕಾಲ ಭಾರತೀಯ ತಂಡದ ಪ್ರಮುಖ ಭಾಗವಾಗಿದ್ದಾರೆ ಆದರೆ ಅವರು ಫೆಬ್ರವರಿ 2020 ರಲ್ಲಿ ಭಾರತಕ್ಕಾಗಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.

Story first published: Thursday, September 7, 2023, 10:56 [IST]
Other articles published on Sep 7, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+